AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್ಬಡೋಸ್‌ನಲ್ಲಿ ಚಂಡಮಾರುತ: ಕೆರಿಬಿಯನ್ ದ್ವೀಪದಲ್ಲೇ ಉಳಿದ ಟಿಮ್ ಇಂಡಿಯಾ

Team India: ಶನಿವಾರ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿತ್ತು. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 176 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ಜಯ ಸಾಧಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿತು

ಬಾರ್ಬಡೋಸ್‌ನಲ್ಲಿ ಚಂಡಮಾರುತ: ಕೆರಿಬಿಯನ್ ದ್ವೀಪದಲ್ಲೇ ಉಳಿದ ಟಿಮ್ ಇಂಡಿಯಾ
Team India
ಝಾಹಿರ್ ಯೂಸುಫ್
|

Updated on: Jul 02, 2024 | 11:37 AM

Share

ಟಿ20 ವಿಶ್ವಕಪ್ ಮುಗಿದು ಎರಡು ದಿನಗಳು ಕಳೆದಿವೆ. ಇದಾಗ್ಯೂ ಟೀಮ್ ಇಂಡಿಯಾ (Team India) ವಿಶ್ವಕಪ್​ ಟ್ರೋಫಿಯೊಂದಿಗೆ ಭಾರತಕ್ಕೆ ಬಂದಿಳಿದಿಲ್ಲ. ಇದಕ್ಕೆ ಮುಖ್ಯ ಕಾರಣ ಬಾರ್ಬಡೋಸ್​ನಲ್ಲಿ ಚಂಡಮಾರುತದೊಂದಿಗೆ ಭೀಕರ ಮಳೆಯಾಗುತ್ತಿರುವುದು. ಹರಿಕೇನ್ ಬೆರಿಲ್​ ಚಂಡಮಾರುತದಿಂದಾಗಿ ಬಾರ್ಬಡೋಸ್​ನ ಬಹುತೇಕ ವಿಮಾನಯಾನ ಸ್ಥಗಿತಗೊಂಡಿದೆ. ಹೀಗಾಗಿ ಭಾರತ ತಂಡವು ಕೆರಿಬಿಯನ್ ದ್ವೀಪದಲ್ಲೇ ಉಳಿಯಬೇಕಾಗಿ ಬಂದಿದೆ.

ಅತ್ತ ವಿಮಾನಯಾನಗಳು ಸ್ಥಗಿತಗೊಂಡಿರುವುದರಿಂದ ಬಿಸಿಸಿಐ ಇದೀಗ ಚಾರ್ಟಡ್ ಫ್ಲೈಟ್ ಮೂಲಕ ಟೀಮ್ ಇಂಡಿಯಾ ಆಟಗಾರರನ್ನು ಭಾರತಕ್ಕೆ ಕರೆತರಲು ಯೋಜನೆ ರೂಪಿಸಿದೆ. ಅದರಂತೆ ಶೀಘ್ರದಲ್ಲೇ ಟೀಮ್ ಇಂಡಿಯಾ ಆಟಗಾರರು ಬಾರ್ಬಡೋಸ್ ತೊರೆಯಲಿದ್ದಾರೆ ಎಂದು ವರದಿಯಾಗಿದೆ.

ಜಯ್​ ಶಾ ಹೇಳಿದ್ದೇನು?

ಭಾರತೀಯ ಆಟಗಾರರು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. ಸೋಮವಾರ ಬಾರ್ಬಡೋಸ್‌ನಿಂದ ಚಾರ್ಟಡ್ ಫ್ಲೈಟ್ ಪಡೆಯಲು ಚರ್ಚಿಸಿದ್ದೇವೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆದರೆ ವಿಮಾನ ನಿಲ್ದಾಣ ಮುಚ್ಚಿದ್ದರಿಂದ, ತಕ್ಷಣವೇ ಚಾರ್ಟಡ್ ಪ್ಲೈಟ್ ಸೇವೆ ಸಿಕ್ಕಿಲ್ಲ. ಈ ಬಗ್ಗೆ ಕೆಲ ಕಂಪನಿಗಳೊಂದಿಗೆ ಮಂಡಳಿಯು ಸಂಪರ್ಕದಲ್ಲಿದೆ. ಅಲ್ಲದೆ ಬಾರ್ಬಡೋಸ್ ವಿಮಾನ ನಿಲ್ದಾಣವು ತೆರೆದ ತಕ್ಷಣವೇ ಭಾರತ ತಂಡವು ಅಮೆರಿಕ ಅಥವಾ ಯುರೋಪ್‌ಗೆ ಹಾರಲಿದೆ ಎಂದು ಜಯ್ ಶಾ ಮಾಹಿತಿ ನೀಡಿದ್ದಾರೆ.

ಬಾರ್ಬಡೋಸ್​ನ ಚಂಡಮಾರುತದ ದೃಶ್ಯ:

ಇದಾಗ್ಯೂ ಟೀಮ್ ಇಂಡಿಯಾ ಆಟಗಾರರು ಮಂಗಳವಾರ ಬಾರ್ಬಡೋಸ್ ತೊರೆಯುವುದು ಕಷ್ಟ. ಏಕೆಂದರೆ ಭೀಕರ ಚಂಡಮಾರುತದಿಂದ ಬಾರ್ಬಡೋಸ್​ ತತ್ತರಿಸಿದ್ದು, ಅನೇಕ ಕಡೆ ರಸ್ತೆಗಳ ಸಂಪರ್ಕ ಕೂಡ ಕಡಿತವಾಗಿದೆ. ಇದರ ನಡುವೆ ಬಿಸಿಸಿಐ ಬಾರ್ಬಡೋಸ್​ನಿಂದ ಅಮೆರಿಕಕ್ಕೆ ತೆರಳಲು ಪರ್ಯಾಯ ಮಾರ್ಗಗಳನ್ನು ನೋಡುತ್ತಿದೆ.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಪಾಲಿಗೆ ಮರೀಚಿಕೆಯಾಗಿರುವ 2 ಟ್ರೋಫಿ

ಹೀಗಾಗಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದ ತಕ್ಷಣ ಟೀಮ್ ಇಂಡಿಯಾ ಆಟಗಾರರು ಅಮೆರಿಕ ಅಥವಾ ಯುರೋಪ್‌ಗೆ ತೆರಳಲಿದ್ದಾರೆ. ಆ ಬಳಿಕ ಅಲ್ಲಿಂದ ಭಾರತಕ್ಕೆ ಬರಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಬುಧವಾರ ಅಥವಾ ಗುರುವಾರ ಭಾರತಕ್ಕೆ ಬಂದಿಳಿಯುವ ಸಾಧ್ಯತೆಯಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​