AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಚ್ ಹಿಡಿಯಲ್ಲ, ರನ್ ಹೊಡೆಯಲ್ಲ, ಬೌಲಿಂಗ್ ಬಗ್ಗೆ ಕೇಳಬೇಕಿಲ್ಲ; ಇವರೇನಾ ಟಿ20 ಚಾಂಪಿಯನ್ಸ್..!

Team India T20 Crisis: ಟಿ20 ವಿಶ್ವಕಪ್ ಗೆದ್ದು ಸಂಭ್ರಮಿಸಿದ್ದ ಟೀಂ ಇಂಡಿಯಾ ಕೆಲವೇ ತಿಂಗಳಲ್ಲಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಸರಣಿ ಸೋತು ಹೀನಾಯ ಪ್ರದರ್ಶನ ತೋರಿದೆ. ಕಳಪೆ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮತ್ತು ನಾಯಕತ್ವದಲ್ಲಿನ ಚುರುಕುತನದ ಕೊರತೆಗಳು ಈ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ. ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿರುವ ತಂಡ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ಭವಿಷ್ಯ ಕಷ್ಟ.

ಕ್ಯಾಚ್ ಹಿಡಿಯಲ್ಲ, ರನ್ ಹೊಡೆಯಲ್ಲ, ಬೌಲಿಂಗ್ ಬಗ್ಗೆ ಕೇಳಬೇಕಿಲ್ಲ; ಇವರೇನಾ ಟಿ20 ಚಾಂಪಿಯನ್ಸ್..!
Team India
ಪೃಥ್ವಿಶಂಕರ
|

Updated on: Jul 11, 2026 | 9:40 PM

Share

ಟೀಂ ಇಂಡಿಯಾ (Team India).. ಕೆಲವೇ ತಿಂಗಳುಗಳ ಹಿಂದೆ ವಿಶ್ವದ ಬಲಿಷ್ಠ ತಂಡಗಳನೆಲ್ಲ ಮಣಿಸಿ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿ ಹಿಡಿದಿತ್ತು. ಆದರೆ ಈ ಕೆಲವೇ ತಿಂಗಳಲ್ಲಿ ತಂಡದ ಪ್ರದರ್ಶನ ಅತ್ಯಂತ ಹೀನಾಯ ಸ್ಥಿತಿಗೆ ತಲುಪಿದೆ. ಒಂದರ್ಥದಲ್ಲಿ ಮೈದಾನದಲ್ಲಿ ಕ್ರಿಕೆಟ್ ಶಿಶುಗಳಂತೆ ವರ್ತಿಸುತ್ತಿರುವ ಟೀಂ ಇಂಡಿಯಾ ಆಟಗಾರರು ಕೋಟ್ಯಾಂತರ ಭಾರತೀಯ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಐರ್ಲೆಂಡ್ ವಿರುದ್ಧ ಟಿ20 ಸರಣಿ ಸೋತಾಗಲೇ ಎಚ್ಚೆತ್ತುಕ್ಕೊಳ್ಳದ ಟೀಂ ಇಂಡಿಯಾ, ಇದೀಗ ಪ್ರತಿ ಪಂದ್ಯದಲ್ಲೂ ಅದಕ್ಕೆ ಬೆಲೆ ತೆರುತ್ತಿದೆ. ಇಂಗ್ಲೆಂಡ್​ನಲ್ಲಿ ಅಕ್ಷರಶಃ ಪಾತಾಳಕ್ಕೆ ಕುಸಿದಿರುವ ತಂಡದ ಪ್ರದರ್ಶನವನ್ನು ಮೇಲೇತ್ತಲ್ಲು ಪಾವಡವೇ ನಡೆಯಬೇಕಿದೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿ ಸೋಲಿಗೆ ಟೀಂ ಇಂಡಿಯಾದ ಯಾವೆಲ್ಲ ತಪ್ಪುಗಳು ಕಾರಣವಾಗಿದ್ದವೋ ಅದೇ ಕಾರಣಗಳು ಇದೀಗ ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿ ಸೋಲಿಗೆ ಕಾರಣವಾಗಿವೆ. ಐರ್ಲೆಂಡ್ ವಿರುದ್ಧ ಮೊಟ್ಟ ಮೊದಲ ಬಾರಿಗೆ ಪಂದ್ಯವೊಂದನ್ನು ಸೋತಿದ್ದ ಭಾರತ ತಂಡ, ಮೊದಲ ಬಾರಿಗೆ ಟಿ20 ಸರಣಿಯನ್ನು ಕಳೆದುಕೊಂಡತ್ತು. ಅದು 2-0 ಅಂತರದಲ್ಲಿ ಅಂದರೆ ಟೀಂ ಇಂಡಿಯಾ, ಐರ್ಲೆಂಡ್ ವಿರುದ್ಧ ವೈಟ್ ವಾಶ್ ಆಗಿತ್ತು. ಇದು ಭಾರತೀಯ ಅಭಿಮಾನಿಗಳನ್ನು ಆಘಾತಕ್ಕೊಳಪಡಿಸಿತ್ತು. ಇದೀಗ ಇಂಗ್ಲೆಂಡ್‌ ವಿರುದ್ಧ 14 ವರ್ಷಗಳ ನಂತರ ಮೊಟ್ಟ ಮೊದಲ ಬಾರಿಗೆ ಟಿ20 ಸರಣಿ ಸೋತಿದೆ. ಹಾಗಿದ್ದರೆ ಟೀಂ ಇಂಡಿಯಾದ ಈ ಸೋಲುಗಳಿಗೆ ಕಾರಣವೇನು ಎಂಬುದನ್ನು ನೋಡುವುದಾದರೆ..

ಕಳಪೆ ಬ್ಯಾಟಿಂಗ್‌

ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ವಿರುದ್ಧ ಟೀಂ ಇಂಡಿಯಾದ ಸೋಲಿಗೆ ಪ್ರಮುಖ ಕಾರಣಗಳಲ್ಲಿ ಪ್ರಮುಖವಾದದ್ದು, ತಂಡದ ಕಳಪೆ ಬ್ಯಾಟಿಂಗ್‌. ಈ ಪ್ರವಾಸದಲ್ಲಿ ಅಭಿಷೇಕ್ ಶರ್ಮಾ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಹೊರತುಪಡಿಸಿ ಉಳಿದ ಯಾವ ಆಟಗಾರನಿಂದಲೂ ಒಂದೇ ಒಂದು ಅರ್ಧಶತಕದ ಇನ್ನಿಂಗ್ಸ್ ಮೂಡಿ ಬಂದಿಲ್ಲ. ತಂಡದ ಪರ ಅಭಿಷೇಕ್ ಶರ್ಮಾ ಕೊಂಚ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡಿದ್ದನ್ನು ಬಿಟ್ಟರೆ, ಉಳಿದವರದ್ದು ಅತ್ಯಂತ ಹೀನಾಯ ಪ್ರದರ್ಶನ. ಸಂಜು ಸ್ಯಾಮ್ಸನ್, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ತಿಲಕ್ ವರ್ಮಾ ಶಿವಂ ದುಬೆರಂತಹ ಟಿ20 ಸ್ಪೆಷಲಿಸ್ಟ್​ಗಳೇ ತಂಡದಲ್ಲಿ ತುಂಬಿ ತುಳುಕುತ್ತಿದ್ದರೂ, ಅವರ್ಯಾರಿಗೂ ಇಂಗ್ಲೆಂಡ್‌ ಬೌಲರ್​ಗಳನ್ನು ದಂಡಿಸಲು ಸಾಧ್ಯವಾಗಲಿಲ್ಲ.

ಕಳಪೆ ಬೌಲಿಂಗ್

ಇಂಗ್ಲೆಂಡ್​ಗೆ ಹೋಲಿಸಿದರೆ, ಟೀಂ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಅನುಭವದ ಕೊರತೆ ಇದೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಅರ್ಷದೀಪ್ ಸಿಂಗ್​ರನ್ನು ಹೊರತುಪಡಿಸಿ ಉಳಿದವರಿಗೆ ಇಂಗ್ಲೆಂಡ್‌ ನೆಲದಲ್ಲಿ ಹೆಚ್ಚು ಆಡಿದ ಅನುಭವವಿಲ್ಲ. ಆದರೆ ಇಂಗ್ಲೆಂಡ್​ನಲ್ಲಿ ಆಡಿದ ಅರ್ಷದೀಪ್​ಗೆ ಸಿಂಗ್​ಗೆ ಪರಿಣಾಮ ಬೀರಲು ಸಾಧ್ಯವಾಗಲಿಲ್ಲ. ಇನ್ನ ಉಳಿದವರ ಸ್ಥಿತಿಯನ್ನು ಹೊಸದಾಗಿ ವಿವರಿಸಬೇಕಿಲ್ಲ. ಯಾವೊಬ್ಬ ವೇಗಿಯೂ ಪಿಚ್​ಗೆ ಅನುಗುಣವಾಗಿ ಬೌಲಿಂಗ್ ಮಾಡುವ ಸಾಮಾನ್ಯೂ ಜ್ಞಾನವನ್ನು ತೋರಲಿಲ್ಲ. ವಿಕೆಟ್ ಪಡೆಯುವುದಿರಲಿ, ಯಾರೊಬ್ಬರಿಗೂ ರನ್​ಗಳಿಗೆ ಕಡಿವಾಣ ಹಾಕುವುದಕ್ಕೆ, ಜೊತೆಯಾಟವನ್ನು ಮುರಿಯುವುದಕ್ಕೆ ಸಾಧ್ಯವಾಗಲಿಲ್ಲ. ಇದರ ಲಾಭ ಪಡೆದ ಇಂಗ್ಲೆಂಡ್‌ ಆಟಗಾರರು ಆರಂಭದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡರೂ ಆ ನಂತರ ಉತ್ತಮ ಜೊತೆಯಾಟಗಳನ್ನು ಕಟ್ಟಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಅತ್ಯಂತ ಕಳಪೆ ಫಿಲ್ಡಿಂಗ್

ಟೀಂ ಇಂಡಿಯಾದ ಈ ಹೀನಾಯ ಸೋಲಿಗೆ ತಂಡದ ಕಳಪೆ ಫಿಲ್ಡಿಂಗ್ ಪ್ರಮುಖ ಕಾರಣ ಎಂಬುದರಲ್ಲಿ ಯಾವುದೇ ಸುಳ್ಳಿಲ್ಲ. ಐರ್ಲೆಂಡ್ ಪ್ರವಾಸದಿಂದ ಹಿಡಿದು ಇದೀಗ ಇಂಗ್ಲೆಂಡ್‌ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಫಿಲ್ಡರ್​ಗಳಿಗೆ ಕ್ಯಾಚ್ ಹಿಡಿಯುವುದೆಂದರೆ ಅತ್ಯಂತ ಕಷ್ಟಕರವಾದ ಕೆಲಸವಾಗಿದೆ. ಜಡ ಹಿಡಿದವರಂತೆ ವರ್ತಿಸುತ್ತಿರುವ ಫಿಲ್ಡರ್​ಗಳು ಸೀದಾ ಕೈಗೆ ಬಂದು ಕೂರುತ್ತಿರುವ ಕ್ಯಾಚ್‌ಗಳನ್ನು ಹಿಡಿಯುತ್ತಿಲ್ಲ. ಇನ್ನ ಸ್ವಲ್ಪ ದೂರ ಓಡಿ ಹೋಗಿ ಹಿಡಿಯಬೇಕೆನ್ನುವ ಕ್ಯಾಚ್‌ಗಳನ್ನು ಬಿಟ್ಟೇ ಬಿಡುತ್ತಾರೆ ಎಂಬುದನ್ನು ಅವರು ಕೈಚೆಲ್ಲುವ ಮುನ್ನವೇ ಅಭಿಮಾನಿಗಳು ಊಹಿಸುತ್ತಿದ್ದಾರೆ. ಟೀಂ ಇಂಡಿಯಾ ಇಷ್ಟು ಕಳಪೆಯಾಗಿ ಫಿಲ್ಡಿಂಗ್ ಮಾಡಿದ್ದನ್ನು ಹಿಂದೆಂದೂ ನೋಡಿರಲಿಲ್ಲ.

IND vs ENG: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ; ತಂಡದಲ್ಲಿ 2 ಬದಲಾವಣೆ

ನಾಯಕತ್ವದಲ್ಲಿ ಚುರುಕುತನವಿಲ್ಲ

ಇನ್ನು ಇದೇ ಮೊದಲ ಬಾರಿಗೆ ಭಾರತ ಟಿ20 ತಂಡದ ನಾಯಕತ್ವವನ್ನು ನಿಭಾಯಿಸುತ್ತಿರುವ ಶ್ರೇಯಸ್ ಅಯ್ಯರ್​ಗೆ ಯಾವ ಸಂದರ್ಭದಲ್ಲಿ ಯಾವ ಬೌಲರ್​ನ ಬಳಸಬೇಕು? ಯಾರನ್ನು ಎಲ್ಲಿ ಫಿಲ್ಡಿಂಗ್​ಗೆ ನಿಲ್ಲಿಸಬೇಕು? ಯಾವ ಬ್ಯಾಟ್ಸ್‌ಮನ್​ಗೆ ಯಾವ ರೀತಿಯ ತಂತ್ರವನ್ನು ಹೆಣೆಯಬೇಕು? ಎಂಬುದನ್ನು ನಿರ್ಧರಿಸುವಲ್ಲಿ ಶ್ರೇಯಸ್ ಸಂಪೂರ್ಣವಾಗಿ ವಿಫಲರಾದರು. ತಂಡದಲ್ಲಿ ಇಷ್ಟೆಲ್ಲ ನ್ಯೂನತೆಗಳಿದ್ದರೂ ಆಡಿರುವ 7 ಪಂದ್ಯಗಳಲ್ಲಿ ಆಟಗಾರರಲ್ಲಿ ಒಂದೇ ಒಂದು ಬದಲಾವಣೆಗಳಾಗಿಲ್ಲ. ಯಾರೊಬ್ಬರು ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವ ಕೆಲಸಕ್ಕೂ ಕೈಹಾಕಿಲ್ಲ. ಇದರ ಪರಿಣಾಮವಾಗಿ ತಂಡಕ್ಕೆ ಹಿಂದೆಂದೂ ಕಾಣದ ಸೋಲುಗಳು ಎದುರಾಗುತ್ತಿವೆ. ಟೀಂ ಇಂಡಿಯಾ ಆದಷ್ಟು ಬೇಗ ತನ್ನ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ, ಮುಂದಿನ ಜಿಂಬಾಬ್ವೆ ಸರಣಿಯನ್ನು ಸೋಲುವುದರಲ್ಲಿ ಯಾವುದೇ ಅನುಮಾನವಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ