AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತದ ಎದುರು ಮಂಡಿಯೂರಿದ ಬಾಂಗ್ಲಾ; ಫೈನಲ್​ಗೇರಿದ ಸೂರ್ಯ ಪಡೆ

Asia Cup 2025: ಏಷ್ಯಾಕಪ್ ಸೂಪರ್ 4 ರ ಎರಡನೇ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ. ಅಭಿಷೇಕ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಅವರ ಅರ್ಧಶತಕದ ಸಹಾಯದಿಂದ ಭಾರತ 168 ರನ್ ಗಳಿಸಿತು. ಬಾಂಗ್ಲಾದೇಶದ ಬ್ಯಾಟಿಂಗ್ ವಿಫಲವಾಗಿ 41 ರನ್‌ಗಳಿಂದ ಸೋಲೊಪ್ಪಿಕೊಂಡರು. ಈ ಗೆಲುವಿನೊಂದಿಗೆ ಭಾರತ ಅಜೇಯವಾಗಿ ಫೈನಲ್‌ಗೆ ತಲುಪಿದೆ.

IND vs BAN: ಭಾರತದ ಎದುರು ಮಂಡಿಯೂರಿದ ಬಾಂಗ್ಲಾ; ಫೈನಲ್​ಗೇರಿದ ಸೂರ್ಯ ಪಡೆ
Ind Vs Ban
ಪೃಥ್ವಿಶಂಕರ
|

Updated on:Sep 24, 2025 | 11:46 PM

Share

ಏಷ್ಯಾಕಪ್ (Asia Cup 2025) ಸೂಪರ್ 4 ಸುತ್ತಿನ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿದ ಟೀಂ ಇಂಡಿಯಾ (India vs Bangladesh) ಅಜೇಯ ತಂಡವಾಗಿ 12ನೇ ಬಾರಿಗೆ ಏಷ್ಯಾಕಪ್ ಫೈನಲ್​ಗೇರಿದೆ. ಈ ಸುತ್ತಿನಲ್ಲಿ ಟೀಂ ಇಂಡಿಯಾಕ್ಕೆ ಇನ್ನೊಂದು ಬಾಕಿ ಉಳಿದಿದ್ದು, ಆ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಫೈನಲ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಜಾಕಿರ್ ಅಲಿ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 168 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡು 41 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಅಬ್ಬರಿಸಿದ ಅಭಿಷೇಕ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಅಭಿಷೇಕ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಉತ್ತಮ ಆರಂಭ ನೀಡಿದರು. ಇಬ್ಬರ ನಡುವೆ ಮೊದಲ ವಿಕೆಟ್‌ಗೆ 77 ರನ್‌ಗಳ ಪಾಲುದಾರಿಕೆ ಇತ್ತು. ಆದರೆ ಇವರಿಬ್ಬರ ಹೊರತುಪಡಿಸಿ ಭಾರತದ ಬ್ಯಾಟಿಂಗ್ ಕ್ರಮಾಂಕಕ್ಕೆ ವಿಶೇಷವಾದದ್ದನ್ನು ಮಾಡಲು ಸಾಧ್ಯವಾಗಲಿಲ್ಲ. 37 ಎಸೆತಗಳಲ್ಲಿ 75 ರನ್ ಗಳಿಸಿದ ನಂತರ ಅಭಿಷೇಕ್ ಔಟಾದರು. ಇತ್ತ ಶುಭ್​ಮನ್ ಗಿಲ್ 29 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ 29 ಎಸೆತಗಳಲ್ಲಿ 38 ರನ್ ಗಳಿಸಿದರು. ಬಾಂಗ್ಲಾದೇಶ ಪರ ರಿಷಾದ್ ಹುಸೇನ್ ಎರಡು ವಿಕೆಟ್ ಪಡೆದರೆ, ತಂಜಿಹ್ ಹಸನ್ ಸಕಿಬ್, ಮುಸ್ತಾಫಿಜುರ್ ರೆಹಮಾನ್ ಮತ್ತು ಮೊಹಮ್ಮದ್ ಸೈಫುದ್ದೀನ್ ತಲಾ ಒಂದು ವಿಕೆಟ್ ಪಡೆದರು.

ಪಂದ್ಯ ಗೆಲ್ಲಿಸಿದ ಬೌಲರ್‌ಗಳು

ಟೀಂ ಇಂಡಿಯಾದ ಬ್ಯಾಟಿಂಗ್ ಬಲಿಷ್ಠವೆಂದು ಪರಿಗಣಿಸಲಾಗಿದ್ದರೂ, ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ಬೌಲರ್‌ಗಳು. ಜಸ್ಪ್ರೀತ್ ಬುಮ್ರಾ ತಮ್ಮ ಮೊದಲ ಓವರ್‌ನಲ್ಲೇ ವಿಕೆಟ್ ಉರುಳಿಸಿ ಬಾಂಗ್ಲಾಗೆ ಆಘಾತ ನೀಡಿದರು. ಉಳಿದಂತೆ ಮಧ್ಯಮ ಓವರ್‌ಗಳಲ್ಲಿ ವರುಣ್ ಚಕ್ರವರ್ತಿ ಮತ್ತು ಕುಲ್ದೀಪ್ ಯಾದವ್ ಬಾಂಗ್ಲಾ ಬ್ಯಾಟರ್​ಗಳನ್ನು ಕಾಡಿದರು. ವರುಣ್ ಚಕ್ರವರ್ತಿ ಎರಡು ವಿಕೆಟ್‌ಗಳನ್ನು ಪಡೆದರೆ, ಕುಲ್ದೀಪ್ ಯಾದವ್ ಮೂರು ವಿಕೆಟ್‌ಗಳನ್ನು ಪಡೆದರು. ಈ ಇಬ್ಬರು ಬೌಲರ್‌ಗಳು ಎಂಟು ಓವರ್‌ಗಳಲ್ಲಿ 47 ರನ್‌ಗಳನ್ನು ನೀಡಿ ಬಾಂಗ್ಲಾದೇಶದ ಐದು ವಿಕೆಟ್‌ಗಳನ್ನು ಕಬಳಿಸಿದರು.

ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಪ್ರಾಬಲ್ಯ

ಏಷ್ಯಾಕಪ್‌ನಲ್ಲಿ ಭಾರತ ತಂಡ ಪ್ರಾಬಲ್ಯ ಮೆರೆದಿದ್ದು 12ನೇ ಬಾರಿಗೆ ಫೈನಲ್ ತಲುಪಿದೆ. ಭಾರತ ತಂಡ ಎಂಟು ಬಾರಿ ಟೂರ್ನಿಯನ್ನು ಗೆದ್ದಿದೆ. ಭಾರತ ತಂಡ 1984, 1988, 1990-91, 1995, 2010, 2016, 2018 ಮತ್ತು 2023 ರಲ್ಲಿ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:33 pm, Wed, 24 September 25

Follow Us
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ