AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಇಂದು ಭಾರತ- ಇಂಗ್ಲೆಂಡ್ ನಡುವೆ ಸೆಮಿ ಫೈನಲ್ ಪಂದ್ಯ: ಗೆದ್ದ ತಂಡ ಫೈನಲ್​ಗೆ ಎಂಟ್ರಿ

IND vs ENG, T20 World Cup Semi Fianl 2: ಇಂದು ಅಡಿಲೇಡ್​ನ ಓವಲ್​ನಲ್ಲಿ ದ್ವಿತೀಯ ಸೆಮಿ ಫೈನಲ್ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿ ಆಗಲಿದೆ. ಇದರಲ್ಲಿ ಗೆಲ್ಲುವ ಟೀಮ್ ಪಾಕ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

India vs England: ಇಂದು ಭಾರತ- ಇಂಗ್ಲೆಂಡ್ ನಡುವೆ ಸೆಮಿ ಫೈನಲ್ ಪಂದ್ಯ: ಗೆದ್ದ ತಂಡ ಫೈನಲ್​ಗೆ ಎಂಟ್ರಿ
IND vs ENG
TV9 Web
| Edited By: |

Updated on:Nov 10, 2022 | 7:51 AM

Share

ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಟೂರ್ನಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೊದಲ ಸೆಮಿ ಫೈನಲ್ ಪಂದ್ಯ ನಡೆದಿದ್ದು ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿರುವ ಪಾಕಿಸ್ತಾನ (New Zealand vs Pakistan) ತಂಡ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇಂದು ಅಡಿಲೇಡ್​ನ ಓವಲ್​ನಲ್ಲಿ ದ್ವಿತೀಯ ಸೆಮಿ ಫೈನಲ್ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಟೀಮ್ ಎರಡನೇ ತಂಡವಾಗಿ ಫೈನಲ್ ತಲುಪಿ ಪಾಕ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಭಾರತವೇ ಗೆಲ್ಲುವ ನೆಚ್ಚಿನ ತಂಡವಾಗಿದೆ. ಅಡಿಲೇಡ್​ನಲ್ಲಂತು ಹೈವೋಲ್ಟೇಜ್ ಪಂದ್ಯ ನಡೆಯುವುದರಲ್ಲಿ ಅನುಮಾನವಿಲ್ಲ.

ಗೆಲ್ಲುವ ವಿಶ್ವಾಸದಲ್ಲಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈಗಾಗಲೇ ನಾವು ಇಂಗ್ಲೆಂಡ್ ವಿರುದ್ಧ ಗೆದ್ದಿದ್ದೇವೆ ಎಂದಿದ್ದಾರೆ. ಭಾರತ ತಂಡ ಅಡಿಲೇಡ್​ನ ಓವಲ್​ ಮೈದಾನದಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿದೆ. ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶಕ್ಕೆ ಸೋಲುಣಿಸಿವೆ. ಈ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ಎದುರಾಗಿರುವ ಉಭಯ ತಂಡಗಳಿಗೆ ಅಡಿಲೇಡ್​ ಮೈದಾನ ಯಾರಿಗೆ ವರವಾಗಲಿದೆ ಎಂಬುದು ರೋಚಕತೆ ಸೃಷ್ಟಿಸಿದೆ. 2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್‌ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ರೋಹಿತ್ ನಾಯಕತ್ವಕ್ಕೆ ಇದೊಂದು ಉತ್ತಮ ಅವಕಾಶವಾಗಿದೆ.

ಭಾರತದ ಪ್ರಮುಖ ಅಸ್ತ್ರ ಬ್ಯಾಟರ್​ಗಳೇ. ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಅಮೋಘ ಫಾರ್ಮ್​ನಲ್ಲಿದ್ದಾರೆ. ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ರಿಷಭ್ ಪಂತ್ ಅಥವಾ ದಿನೇಶ್ ಕಾರ್ತಿಕ್ ಪೈಕಿ ಯಾರಿಗೆ ಸ್ಥಾನ ಸಿಗುತ್ತೊ ಅವರು ಕೂಡ ಇಂದಿನ ಪಂದ್ಯದಲ್ಲಿ ಅಬ್ಬರಿಸಿದರೆ ಇಂಗ್ಲೆಂಡ್​ಗೆ ಸವಾಲಾಗುವುದು ಖಚಿತ. ಈ ಬಾರಿಯ ಟೂರ್ನಿಯಲ್ಲಿ ಭಾರತದ ಬೌಲರ್​ಗಳು ಉತ್ತಮ ಆರಂಭ ಒದಗಿಸಿದ್ದಾರೆ. ಆದರೆ, ಮಧ್ಯಮ ಓವರ್ ಮತ್ತು ಡೆತ್ ಓವರ್​ನಲ್ಲಿ ಇನ್ನಷ್ಟು ಸುಧಾರಣೆಯ ಅಗತ್ಯ ಕಂಡಿತ ಇದೆ.

ಇದನ್ನೂ ಓದಿ
Image
PAK vs NZ: ಪವರ್‌ಪ್ಲೇ ಮುಗಿದ ತಕ್ಷಣವೇ ಗೆಲುವು ನಿರ್ಧಾರವಾಯಿತು! ಪಾಕ್ ಓಪನರ್ ರಿಜ್ವಾನ್
Image
ಮೊದಲೆರಡು ಪಂದ್ಯ ಸೋತರೂ ಫೈನಲ್​ಗೆ ಎಂಟ್ರಿ! ಟಿ20 ವಿಶ್ವಕಪ್‌ನಲ್ಲಿ ಪಾಕ್ ಪ್ರಯಾಣವೇ ರೋಚಕ
Image
PAK vs NZ: ಕಿವೀಸ್​ಗೆ ಮತ್ತೊಮ್ಮೆ ಕೈತಪ್ಪಿದ ಚಾಂಪಿಯನ್ ಪಟ್ಟ; ತನ್ನ ತಪ್ಪುಗಳಿಂದಲೇ ಸೋಲುಂಡ ನ್ಯೂಜಿಲೆಂಡ್..!
Image
NZ vs PAK: ಕಿವೀಸ್ ಕಿವಿ ಹಿಂಡಿದ ಬಾಬರ್ ಪಡೆ; ವಿಶ್ವಕಪ್​ ಫೈನಲ್​ಗೆ ಎಂಟ್ರಿಕೊಟ್ಟ ಪಾಕಿಸ್ತಾನ..!

ಇತ್ತ ಇಂಗ್ಲೆಂಡ್ ಪರ ಬ್ಯಾಟರ್​ ಡೇವಿಡ್​ ಮಲಾನ್​, ಬೌಲರ್​ ಮಾರ್ಕ್​ವುಡ್​ ಗಾಯಗೊಂಡಿದ್ದು ತಂಡಕ್ಕೆ ಹಿನ್ನಡೆ ಆಗುವುದರಲ್ಲಿ ಅನುಮಾವಿಲ್ಲ. ಅಲ್ಲದೇ, ಬ್ಯಾಟರ್​ಗಳು ಸ್ಥಿರ ಪ್ರದರ್ಶನ ನೀಡದೇ ಇರುವುದು ಕೂಡ ಮೈನಸ್​ ಆಗಿದೆ. ಅಲೆಕ್ಸ್​ ಹೇಲ್ಸ್, ನಾಯಕ ಜೋಸ್​ ಬಟ್ಲರ್​, ಆಲ್​ರೌಂಡರ್​ಗಳಾದ ಬೆನ್​ ಸ್ಟೋಕ್ಸ್​, ಲಿಯಾಮ್​ ಲಿವಿಂಗ್​ಸ್ಟೋನ್​, ಮೊಯಿನ್​ ಅಲಿ ಸಿಡಿಯಬೇಕಿದೆ. ಬೌಲಿಂಗ್​ನಲ್ಲಿ ಕ್ರಿಸ್​ ವೋಕ್ಸ್​, ಸ್ಯಾಮ್​ ಕರ್ರನ್​, ಡೇವಿಡ್​ ವಿಲ್ಲೆ ವಿಕೆಟ್​ ಉದುರಿಸಬೇಕಿದೆ.

ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅಚ್ಚುಮೆಚ್ಚು. ಬ್ಯಾಟ್​ಗೆ ಚೆಂಡು ನೇರವಾಗಿ ಸುಲಭವಾಗಿ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ. ಭಾರತ- ಇಂಗ್ಲೆಂಡ್ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿವೆ. 2007, 2009 ಮತ್ತು 2012ರಲ್ಲಿ ಪರಸ್ಪರ ವಿರುದ್ಧ ಆಡಿವೆ. ಗುರುವಾರ ಆಡಿದರೆ ನಾಲ್ಕು ಬಾರಿ ಮುಖಾಮುಖಿಯಾದಂತಾಗುತ್ತದೆ. ಈವರೆಗಿನ ವಿಶ್ವಕಪ್‌ನ ಮೂರು ಪಂದ್ಯಗಳಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಎರಡು ಬಾರಿ ಜಯ ಸಾಧಿಸಿದೆ ಮತ್ತು ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಒಂದು ಬಾರಿ ಗೆಲುವು ಕಂಡಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ. ಲೈವ್ ಸ್ಟ್ರೀಮಿಂಗ್ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ಇರುತ್ತದೆ. ಹಾಗೆಯೇ TV9Kannada.com ನಲ್ಲಿ ಈ ಪಂದ್ಯದ ಲೈವ್ ನವೀಕರಣಗಳನ್ನು ಸಹ ಓದಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ರಿಷಭ್ ಪಂತ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ದೀಪಕ್ ಹೂಡಾ, ಹರ್ಷಲ್ ಪಟೇಲ್, ಯುಜ್ವೇಂದ್ರ ಚಹಲ್.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ/ವಿಕೆಟ್‌ಕೀಪರ್), ಬೆನ್ ಸ್ಟೋಕ್ಸ್, ಅಲೆಕ್ಸ್ ಹೇಲ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಡೇವಿಡ್ ಮಲಾನ್, ಸ್ಯಾಮ್ ಕರನ್, ಮಾರ್ಕ್ ವುಡ್, ಮೋಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲಿ, ಆದಿಲ್ ರಶೀದ್, ಟೈಮಲ್ ಮಿಲ್ಸ್, ಕ್ರಿಸ್ ಜೋರ್ಡಾನ್.

Published On - 7:50 am, Thu, 10 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ