AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಬಲಿಷ್ಠ ಬ್ಯಾಟಿಂಗ್ ಪಡೆಗೆ ಬಲ ತುಂಬಿದ ಬೌಲರ್​ಗಳು

Team India: ಟೀಮ್ ಇಂಡಿಯಾದಲ್ಲಿ ಮರೆಯಾಗಿದ್ದ ಸಾಂಘಿಕ ಪ್ರದರ್ಶನ ಈ ಬಾರಿಯ ಏಷ್ಯಾಕಪ್​ನಲ್ಲಿ ಮತ್ತೆ ಗೋಚರಿಸಲಾರಂಭಿಸಿದೆ. ಇದಕ್ಕೆ ಸಾಕ್ಷಿಯೇ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅಗ್ರ ಕ್ರಮಾಂಕದ ನಾಲ್ವರು ಅಬ್ಬರಿಸಿರುವುದು. ಇಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಬಾರಿಸಿದರೆ, 3ನೇ ಮತ್ತು 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಶತಕ ಸಿಡಿಸಿದ್ದರು.

Team India: ಬಲಿಷ್ಠ ಬ್ಯಾಟಿಂಗ್ ಪಡೆಗೆ ಬಲ ತುಂಬಿದ ಬೌಲರ್​ಗಳು
Team India
TV9 Web
| Edited By: |

Updated on: Sep 14, 2023 | 3:41 PM

Share

ಏಷ್ಯಾಕಪ್​ನಲ್ಲಿ ಬಲಿಷ್ಠ ಬ್ಯಾಟಿಂಗ್ ಪಡೆಯೊಂದಿಗೆ ಕಾಣಿಸಿಕೊಂಡ ಟೀಮ್ ಇಂಡಿಯಾ ಪರ ಬೌಲರ್​ಗಳು ಪರಾಕ್ರಮ ಮೆರೆಯುತ್ತಿದ್ದಾರೆ. ಇದಕ್ಕೆ ಸಾಕ್ಷಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ ದಾಖಲೆಯ 228 ರನ್​ಗಳ ಭರ್ಜರಿ ಜಯ ಸಾಧಿಸಿರುವುದು. ಅಂದರೆ ಇಲ್ಲಿ ಭಾರತ ತಂಡವು ಗೆಲುವಿಗಾಗಿ ಕೇವಲ ಬ್ಯಾಟ್ಸ್​ಮನ್​ಗಳನ್ನು ಮಾತ್ರ ನೆಚ್ಚಿಕೊಂಡಿಲ್ಲ ಎಂಬುದು ಸ್ಪಷ್ಟ.

ಸೂಪರ್-4 ಹಂತದಲ್ಲಿ ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಬ್ಯಾಟರ್​ಗಳು ಅಬ್ಬರಿಸಿದ್ದರು. ಅಷ್ಟೇ ಅಲ್ಲದೆ ಕೇವಲ 2 ವಿಕೆಟ್ ನಷ್ಟಕ್ಕೆ 356 ರನ್​ ಕಲೆಹಾಕಿದ್ದರು. ಭಾರತೀಯ ಅಗ್ರ ಕ್ರಮಾಂಕದ ಬ್ಯಾಟರ್​ಗಳ ಅಬ್ಬರ ನೋಡಿದಾಗ ಪಿಚ್​ ಬ್ಯಾಟ್ಸ್​​​ಮನ್​ಗಳಿಗೆ ಸಹಕಾರಿ ಎನ್ನಲಾಗಿತ್ತು.

ಆದರೆ ಪಾಕ್ ಬೌಲರ್​ಗಳ ಪಾಲಿಗೆ ನರಕ ಸೃದಶವಾಗಿದ್ದ ಪಿಚ್​ನಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಕರಾರುವಾಕ್ ದಾಳಿ ಸಂಘಟಿಸಿದರು. ಅಷ್ಟೇ ಅಲ್ಲದೆ ಪಾಕ್ ತಂಡವನ್ನು ಕೇವಲ 128 ರನ್​ಗಳಿಗೆ ಆಲೌಟ್ ಮಾಡಿ ಅಮೋಘ ಗೆಲುವು ದಾಖಲಿಸಿತು. ಇದಾದ ಬಳಿಕ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಮುಗ್ಗರಿಸಿದರು. ಆದರೆ ಈ ಬಾರಿ ಕೂಡ ಭಾರತ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಬೌಲರ್​ಗಳು ಪ್ರಮುಖ ಪಾತ್ರವಹಿಸಿದರು.

214 ರನ್​ಗಳ ಸುಲಭ ಸವಾಲು ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಜಸ್​ಪ್ರೀತ್ ಬುಮ್ರಾ ಯಶಸ್ವಿಯಾಗಿದ್ದರು. ಆ ಬಳಿಕ ಕುಲ್ದೀಪ್ ಯಾದವ್ ಸ್ಪಿನ್ ಮೋಡಿ. ಅಷ್ಟರಲ್ಲಾಗಲೇ ಶ್ರೀಲಂಕಾ ತಂಡವು 172 ರನ್​ಗಳಿಗೆ ಆಲೌಟ್. ಅಂದರೆ ಎರಡೂ ಪಂದ್ಯಗಳಲ್ಲೂ ಭಾರತೀಯ ಬೌಲರ್​ಗಳು ಕರಾರುವಾಕ್ ದಾಳಿ ಸಂಘಟಿಸಿರುವುದು ಸ್ಪಷ್ಟ.

ಬೂಮ್ ಬೂಮ್ ಎಂಟ್ರಿ:

ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಅವರ ಎಂಟ್ರಿಯೊಂದಿಗೆ ಭಾರತ ತಂಡವು ಬೌಲಿಂಗ್ ವಿಭಾಗದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ. ಎದುರಾಳಿ ಬ್ಯಾಟ್ಸ್‌ಮನ್‌ಗಳ ಮೇಲೆ ಹೊಸ ಚೆಂಡಿನೊಂದಿಗೆ ಒತ್ತಡ ಹೇರುವಲ್ಲಿ ಬುಮ್ರಾ ಯಶಸ್ವಿಯಾಗುತ್ತಿದ್ದಾರೆ. ಇದರ ಫಲವಾಗಿ ಮೊದಲ ಪವರ್​ಪ್ಲೇನಲ್ಲಿ ಭಾರತಕ್ಕೆ ಯಶಸ್ಸು ಸಿಗುತ್ತಿದೆ.

ಇನ್ನು ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಿಗೆ ಪೆವಿಲಿಯನ್ ಹಾದಿ ತೋರಿಸುವಲ್ಲಿ ಎಡಗೈ ಸ್ಪಿನ್ನ ಕುಲ್ದೀಪ್ ಯಾದವ್ ನಿಸ್ಸೀಮರು ಎಂಬುದನ್ನು ಬ್ಯಾಕ್ ಟು ಬ್ಯಾಕ್ ಪಂದ್ಯಗಳಲ್ಲಿ ಸಾಬೀತುಪಡಿಸಿದ್ದಾರೆ. ಇದಕ್ಕೆ ಸಾಕ್ಷಿಯೇ ಪಾಕ್ ವಿರುದ್ಧದ 5 ವಿಕೆಟ್​ಗಳು ಹಾಗೂ ಶ್ರೀಲಂಕಾ ವಿರುದ್ಧದ 4 ವಿಕೆಟ್​ಗಳು.

ಬ್ಯಾಟರ್​ಗಳಿಗೆ ಬೌಲರ್​ಗಳ ಸಾಥ್:

ಟೀಮ್ ಇಂಡಿಯಾದಲ್ಲಿ ಮರೆಯಾಗಿದ್ದ ಸಾಂಘಿಕ ಪ್ರದರ್ಶನ ಈ ಬಾರಿಯ ಏಷ್ಯಾಕಪ್​ನಲ್ಲಿ ಮತ್ತೆ ಗೋಚರಿಸಲಾರಂಭಿಸಿದೆ. ಇದಕ್ಕೆ ಸಾಕ್ಷಿಯೇ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅಗ್ರ ಕ್ರಮಾಂಕದ ನಾಲ್ವರು ಅಬ್ಬರಿಸಿರುವುದು. ಇಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅರ್ಧಶತಕ ಬಾರಿಸಿದರೆ, 3ನೇ ಮತ್ತು 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಶತಕ ಸಿಡಿಸಿದ್ದರು.

ಇನ್ನು ಬೌಲಿಂಗ್​ನಲ್ಲಿ ಕುಲ್ದೀಪ್ ಯಾದವ್ 5 ವಿಕೆಟ್ ಪಡೆದರೆ, ಬುಮ್ರಾ ಆರಂಭಿಕ ವಿಕೆಟ್ ಕಬಳಿಸಿದ್ದರು. ಇಂತಹದೊಂದು ಸಾಂಘಿಕ ಪ್ರದರ್ಶನ ಫಲವಾಗಿ ಟೀಮ್ ಇಂಡಿಯಾ ಪಾಕ್ ತಂಡವನ್ನು ಹೀನಾಯವಾಗಿ ಸೋಲಿಸಲು ಸಾಧ್ಯವಾಗಿದೆ. ಹಾಗೆಯೇ ಶ್ರೀಲಂಕಾ ವಿರುದ್ಧ ಕಡಿಮೆ ಸ್ಕೋರ್​ಗಳಿಸಿದರೂ ಗೆಲುವು ದಾಖಲಿಸಿದೆ.

ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಅತ್ತ ಈ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ರೋಹಿತ್ ಶರ್ಮಾ ಒಟ್ಟು 194 ರನ್​ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿಯ ಏಷ್ಯಾಕಪ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಮತ್ತೊಂದೆಡೆ ಕುಲ್ದೀಪ್ ಯಾದವ್ ಒಟ್ಟು 9 ವಿಕೆಟ್ ಉರುಳಿಸುವ ಮೂಲಕ ವಿಕೆಟ್ ಟೇಕರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಂದರೆ ಇಲ್ಲಿ ಟೀಮ್ ಇಂಡಿಯಾ ಬ್ಯಾಟರ್-ಬೌಲರ್​ಗಳ ಜುಗಲ್​ಬಂದಿಯಿಂದ ಎದುರಾಳಿಗಳು ಕಂಗೆಟ್ಟಿದ್ದಾರೆ. ಈ ಕಂಗೆಡಿಸುವಿಕೆ ಮುಂಬರುವ ಏಕದಿನ ವಿಶ್ವಕಪ್​ನಲ್ಲೂ ಮುಂದುವರೆಯಲಿದೆಯಾ ಕಾದು ನೋಡಬೇಕಿದೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ