Team India: 8 ತಂಡಗಳ ಕದನ: ಟೀಮ್ ಇಂಡಿಯಾದ ಮುಂದಿನ ಟಾರ್ಗೆಟ್

Team india: 2013 ರಲ್ಲಿ ಭಾರತ ತಂಡವು ಕೊನೆಯ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿತ್ತು. 2017 ರಲ್ಲಿ ಫೈನಲ್​ಗೆ ತಲುಪಿದರೂ ಟೀಮ್ ಇಂಡಿಯಾಗೆ ಸೋಲುಣಿಸಿ ಪಾಕಿಸ್ತಾನ್ ತಂಡ ಚಾಂಪಿಯನ್ ಪಟ್ಟಕ್ಕೇರಿದ್ದರು. ಇದೀಗ ಮತ್ತೆ ಚಾಂಪಿಯನ್ಸ್ ಟ್ರೋಫಿಗೆ ವೇದಿಕೆ ಸಿದ್ಧವಾಗಿದೆ. ಅದರಂತೆ ಮುಂದಿನ ವರ್ಷ ಮತ್ತೊಂದು ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲು ಟೀಮ್ ಇಂಡಿಯಾ ಸಜ್ಜಾಗಲಿದೆ.

Team India: 8 ತಂಡಗಳ ಕದನ: ಟೀಮ್ ಇಂಡಿಯಾದ ಮುಂದಿನ ಟಾರ್ಗೆಟ್
Team India
Follow us
|

Updated on: Jul 02, 2024 | 9:24 AM

ಭಾರತ ತಂಡವು ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ವಿಶ್ವಕಪ್ ಗೆಲುವಿನ ಅಲೆಯ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಈ ಇಬ್ಬರು ದಿಗ್ಗಜರು ಏಕದಿನ ಮತ್ತು ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ.

ಅದರಲ್ಲೂ ಮುಂಬರುವ ಚಾಂಪಿಯನ್ಸ್ ಟ್ರೋಫಿವರೆಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಖಚಿತಪಡಿಸಿದ್ದಾರೆ. ಹೀಗಾಗಿ 2025 ರವರೆಗೆ ಕಿಂಗ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿದಾಯ ಹೇಳುವುದಿಲ್ಲ ಎಂದೇ ಹೇಳಬಹುದು.

8 ತಂಡಗಳ ಕದನ:

20 ತಂಡಗಳ ನಡುವಣ ಟಿ20 ವಿಶ್ವಕಪ್​ ಕದನದಲ್ಲಿ ಚಾಂಪಿಯನ್ ಪಟ್ಟಕ್ಕೇರಿರುವ ಭಾರತ ತಂಡದ ಮುಂದಿನ ಗುರಿ ಚಾಂಪಿಯನ್ಸ್ ಟ್ರೋಫಿ 2025. ಮುಂದಿನ ವರ್ಷ ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳಾವುವು ಎಂದರೆ…

  1. ಭಾರತ
  2. ಪಾಕಿಸ್ತಾನ್
  3. ಸೌತ್ ಆಫ್ರಿಕಾ
  4. ನ್ಯೂಝಿಲೆಂಡ್
  5. ಅಫ್ಘಾನಿಸ್ತಾನ್
  6. ಇಂಗ್ಲೆಂಡ್
  7. ಬಾಂಗ್ಲಾದೇಶ್
  8. ಆಸ್ಟ್ರೇಲಿಯಾ

ಈ ತಂಡಗಳ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಏಕದಿನ ಟೂರ್ನಿ ನಡೆಯಲಿದೆ. ಇಲ್ಲಿ 8 ತಂಡಗಳು ಬಲಿಷ್ಠವಾಗಿರುವ ಕಾರಣ ಮೊದಲ ಸುತ್ತಿನಿಂದಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಅದರಲ್ಲೂ ಕಳೆದ ಏಕದಿನ ವಿಶ್ವಕಪ್​ನ ಫೈನಲ್​ನಲ್ಲಿ ಸೋಲನುಭವಿಸಿದ್ದ ಭಾರತ ತಂಡವು ಮುಂದಿನ ವರ್ಷ ಮತ್ತೆ ಏಕದಿನ ಟೂರ್ನಿಯಲ್ಲಿ ವಿಶ್ವ ಚಾಂಪಿಯನ್ ಆಗುವ ಅವಕಾಶ ಹೊಂದಿದ್ದು, ಈ ಮೂಲಕ ಚಾಂಪಿಯನ್ಸ್ ಟ್ರೋಫಿಯ ಬರವನ್ನು ಟೀಮ್ ಇಂಡಿಯಾ ನೀಗಿಸಲಿದೆಯಾ ಕಾದು ನೋಡಬೇಕಿದೆ.

ಪಾಕಿಸ್ತಾನದಲ್ಲಿ ಟೂರ್ನಿ:

ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿರುವ ಬಹುನಿರೀಕ್ಷಿತ ಚಾಂಪಿಯನ್ಸ್​ ಟ್ರೋಫಿ ಟೂರ್ನಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆತಿಥ್ಯವಹಿಸುತ್ತಿದೆ. ಅಂದರೆ ಟೂರ್ನಿಯು ಪಾಕ್​ನಲ್ಲಿ ನಡೆಯಲಿದೆ. ಆದರೆ ಭಾರತ ತಂಡವು ಪಾಕ್​ಗೆ ತೆರಳಲು ಹಿಂದೇಟು ಹಾಕಲಿದೆ.

ಅಲ್ಲದೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಬೇಕಿದ್ದರೆ, ತಟಸ್ಥ ಸ್ಥಳದಲ್ಲಿ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಬೇಡಿಕೆ ಮುಂದಿಡಬಹುದು. ಅದರಂತೆ ಟೀಮ್ ಇಂಡಿಯಾದ ಪಂದ್ಯಗಳಿಗೆ ಯುಎಇ ಅಥವಾ ಶ್ರೀಲಂಕಾ ಆತಿಥ್ಯವಹಿಸುವ ಸಾಧ್ಯತೆ ಕೂಡ ಇದೆ.

ಇದನ್ನೂ ಓದಿ: T20 World Cup 2024: ಟೀಮ್ ಇಂಡಿಯಾ ಪರ ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು..!

ಏಕೆಂದರೆ ಈ ಹಿಂದೆ ಪಾಕಿಸ್ತಾನದಲ್ಲಿ ಏಷ್ಯಾಕಪ್ ಆಯೋಜನೆಗೊಂಡಿದ್ದಾಗ, ಭಾರತ ತಂಡವು ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಹೀಗಾಗಿ ಈ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಐಸಿಸಿಗೆ ಬಿಸಿಸಿಐ ಮನವಿ ಮಾಡುವ ಸಾಧ್ಯತೆ ಹೆಚ್ಚಿದೆ.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ