AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಆಡುವ ಬಳಗದಲ್ಲಿ 2 ಬದಲಾವಣೆ ಸಾಧ್ಯತೆ

India vs England ODI: ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡವು 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 248 ರನ್​ಗಳಿಸಿದರೆ, ಟೀಮ್ ಇಂಡಿಯಾ ಈ ಗುರಿಯನ್ನು ಕೇವಲ 38.4 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಭಾರತ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

IND vs ENG: ಟೀಮ್ ಇಂಡಿಯಾ ಆಡುವ ಬಳಗದಲ್ಲಿ 2 ಬದಲಾವಣೆ ಸಾಧ್ಯತೆ
Team India
ಝಾಹಿರ್ ಯೂಸುಫ್
|

Updated on: Feb 08, 2025 | 2:03 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಏಕದಿನ ಪಂದ್ಯ ನಾಳೆ (ಫೆ.9) ನಡೆಯಲಿದೆ. ಕಟಕ್​ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ 2 ಬದಲಾವಣೆ ಮಾಡಿಕೊಳ್ಳುವುದು ಖಚಿತ. ಏಕೆಂದರೆ ಮೊಣಕಾಲಿನ ನೋವಿನ ಕಾರಣ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ವಿರಾಟ್ ಕೊಹ್ಲಿ ಕಣಕ್ಕಿಳಿದರೆ ಮೊದಲ ಮ್ಯಾಚ್​ನಲ್ಲಿ ಆರಂಭಿಕನಾಗಿ ಆಡಿದ ಯಶಸ್ವಿ ಜೈಸ್ವಾಲ್ ಹೊರಗುಳಿಯಬಹುದು. ಇನ್ನು ಮೊದಲ ಪಂದ್ಯದಲ್ಲಿ 9.4 ಓವರ್​ಗಳನ್ನು ಎಸೆದಿದ್ದ ಕುಲ್ದೀಪ್ ಯಾದವ್ 53 ರನ್ ನೀಡಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದರು. ಹೀಗಾಗಿ ಕುಲ್ದೀಪ್ ಬದಲಿಗೆ ದ್ವಿತೀಯ ಪಂದ್ಯದಲ್ಲಿ ವರುಣ್ ಚಕ್ರವರ್ತಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಅದರಂತೆ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಆರಂಭಿಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ.

ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಅವಕಾಶ ಪಡೆಯಲಿದ್ದಾರೆ. ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೌಲರ್​ಗಳಾಗಿ ಮೊಹಮ್ಮದ್ ಶಮಿ, ಹರ್ಷಿತ್ ರಾಣಾ ಹಾಗೂ ವರುಣ್ ಚಕ್ರವರ್ತಿ ಸ್ಥಾನ ಪಡೆಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ…

  1. ರೋಹಿತ್ ಶರ್ಮಾ (ನಾಯಕ)
  2. ಶುಭ್​ಮನ್ ಗಿಲ್
  3. ವಿರಾಟ್ ಕೊಹ್ಲಿ
  4. ಶ್ರೇಯಸ್ ಅಯ್ಯರ್
  5. ಕೆಎಲ್ ರಾಹುಲ್ (ವಿಕೆಟ್ ಕೀಪರ್)
  6. ಹಾರ್ದಿಕ್ ಪಾಂಡ್ಯ
  7. ಅಕ್ಷರ್ ಪಟೇಲ್
  8. ರವೀಂದ್ರ ಜಡೇಜಾ
  9. ಹರ್ಷಿತ್ ರಾಣಾ
  10. ವರುಣ್ ಚಕ್ರವರ್ತಿ
  11. ಮೊಹಮ್ಮದ್ ಶಮಿ.

ಇದನ್ನೂ ಓದಿ: ಅಚ್ಚರಿಯ ನಿರ್ಧಾರ… ದಿಢೀರ್ ನಿವೃತ್ತಿ ಘೋಷಿಸಿದ ಮಾರ್ಕಸ್ ಸ್ಟೊಯಿನಿಸ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ