AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ನೂತನ ಜೆರ್ಸಿ ಬಿಡುಗಡೆ; ಫ್ಯಾನ್ಸ್ ಬೇಸರ

India's T20 World Cup Jersey: ಮುಂದಿನ ತಿಂಗಳು ಅಂದರೆ ಇದೆ ಜೂನ್ 1 ರಿಂದ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದ ಹೊಸ ಜೆರ್ಸಿಯನ್ನು ಇಂದು ಬಿಡುಗಡೆ ಮಾಡಲಾಗಿದೆ.

T20 World Cup 2024: ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ನೂತನ ಜೆರ್ಸಿ ಬಿಡುಗಡೆ; ಫ್ಯಾನ್ಸ್ ಬೇಸರ
ಟೀಂ ಇಂಡಿಯಾ
ಪೃಥ್ವಿಶಂಕರ
| Edited By: |

Updated on:May 16, 2024 | 12:34 PM

Share

ಮುಂದಿನ ತಿಂಗಳು ಅಂದರೆ ಇದೆ ಜೂನ್ 1 ರಿಂದ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ (T20 World Cup 2024) ಟೀಂ ಇಂಡಿಯಾದ ಹೊಸ ಜೆರ್ಸಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಟೀಂ ಇಂಡಿಯಾದ (Team India) ಕಿಟ್ ಪ್ರಾಯೋಜಕತ್ವದ ಹಕ್ಕನ್ನು ಖರೀದಿಸಿರುವ ಅಡಿಡಾಸ್‌, ಮುಂಬರುವ ಟಿ20 ವಿಶ್ವಕಪ್​ಗೆ ಹಸಿರು ಹಾಗೂ ಕೇಸರಿ ಮಿಶ್ರಿತ ನೂತನ ಜೆರ್ಸಿಯನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್ ಅವರ ಉಪಸ್ಥಿತಿಯಲ್ಲಿ ಧರ್ಮಶಾಲಾದಲ್ಲಿ ಬಿಡುಗಡೆ ಮಾಡಿದೆ ಎಂದು ವರದಿಗಳಾಗಿವೆ. ಬಿಸಿಸಿಐ (BCCI) ಜೆರ್ಸಿ ಬಿಡುಗಡೆ ಮಾಡಿರುವ ಅದರ ವಿಡಿಯೋಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಮುಂಬರುವ ಟಿ20 ವಿಶ್ವಕಪ್​ಗೆ ಇಂದು ಬಿಡುಗಡೆಯಾಗಿರುವ ಟೀಂ ಇಂಡಿಯಾದ ನೂತನ ಜೆರ್ಸಿ ಮೇಲೆ ಹೇಳಿದಂತೆ ನೀಲಿ ಮತ್ತು ಕೇಸರಿ ಬಣ್ಣದಲ್ಲಿದೆ. ಜೆರ್ಸಿಯ ಕಾಲರ್ ಮೇಲೆ ತ್ರಿವರ್ಣ ಧ್ವಜವನ್ನು ಹೊಲುವ ಅಂದರೆ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದ ಪಟ್ಟೆಗಳಿವೆ. ತೋಳುಗಳು ಕೇಸರಿ ಬಣ್ಣದಲ್ಲಿದ್ದರೆ, ಭುಜದ ಮೇಲೆ ಮೂರು ಬಿಳಿಯ ಗೆರೆಗಳಿವೆ. ಉಳಿದ ಭಾಗ ಸಂಪೂರ್ಣ ನೀಲಿ ಬಣ್ಣದ್ದಾಗಿದೆ. ಜರ್ಸಿಯ ಮಧ್ಯದಲ್ಲಿ ಟೀಂ ಇಂಡಿಯಾ ಎಂದು ಬರೆಯಲಾಗಿದೆ. ಈ ಜೆರ್ಸಿಯನ್ನು ಹೆಲಿಕಾಪ್ಟರ್‌ನಿಂದ ಬಿಡುಗಡೆ ಮಾಡಿರುವಂತೆ ತೋರಿಸಲಾಗಿದೆ.

ಏತನ್ಮಧ್ಯೆ, ಜೆರ್ಸಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾದ ಬಳಿಕ ಟೀಂ ಇಂಡಿಯಾ ಅಭಿಮಾನಿಗಳು ಬಿಡುಗಡೆಯಾಗಿರುವ ನೂತನ ಜೆರ್ಸಿಯ ಬಗ್ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಜರ್ಸಿಯನ್ನು ‘ಸ್ಟೈಲಿಶ್’ ಎಂದಿದ್ದರೆ, ಇನ್ನು ಕೆಲವರಿಗೆ ನೂತನ ಜೆರ್ಸಿ ಇಷ್ಟವಾಗಿಲ್ಲ.

ಇನ್ನು ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಆ ನಂತರ ಪಾಕಿಸ್ತಾನದ ವಿರುದ್ಧ ಜೂನ್ 9 ರಂದು ಹೈವೋಲ್ಟೇಜ್ ಕದನ ನಡೆಯಲ್ಲಿದೆ. ಬಳಿಕ ಕ್ರಮವಾಗಿ ಯುಎಸ್ಎ ಮತ್ತು ಕೆನಡಾ ವಿರುದ್ಧ ಜೂನ್ 12 ಮತ್ತು 15 ರಂದು ಗುಂಪು ಹಂತದ ಪಂದ್ಯಗಳನ್ನು ಆಡಲಿದೆ.

ಟಿ20 ವಿಶ್ವಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್​ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು  ಆಟಗಾರರು: ಶುಭ್​ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Mon, 6 May 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ