AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಟೀಮ್ ಇಂಡಿಯಾ ಸೋಲಿಗೆ ಕಾರಣವಾದ ಆ ಒಂದು ನಿರ್ಧಾರ..!

IND vs NZ: ಭಾರತದ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಝಿಲೆಂಡ್ ತಂಡ ಗೆಲುವಿನೊಂದಿಗೆ ಆರಂಭಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ 402 ರನ್ ಕಲೆಹಾಕಿತು.

IND vs NZ: ಟೀಮ್ ಇಂಡಿಯಾ ಸೋಲಿಗೆ ಕಾರಣವಾದ ಆ ಒಂದು ನಿರ್ಧಾರ..!
Team India
ಝಾಹಿರ್ ಯೂಸುಫ್
|

Updated on: Oct 20, 2024 | 12:30 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಈ ಸೋಲಿಗೆ ಪ್ರಮುಖ ಕಾರಣವಾಗಿದ್ದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ಆ ಒಂದು ನಿರ್ಧಾರ. ಹೌದು, ಭಾರತ ತಂಡದ ಸೋಲಿಗೆ ಪ್ರಮುಖ ಕಾರಣವಾಗಿದ್ದೇ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದು.

ಮೊದಲ ದಿನದಾಟ ಸಂಪೂರ್ಣ ಮಳೆಗೆ ಅಹುತಿಯಾದರೂ, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದರು. ಬ್ಯಾಟಿಂಗ್​ಗೆ ಪಿಚ್​ ಸಹಕಾರಿಯಾಗಲಿದೆ ಎಂಬ ಅತಿಯಾದ ಆತ್ಮ ವಿಶ್ವಾಸವೇ ಭಾರತದ ಪಾಲಿಗೆ ಮುಳುವಾಯಿತು.

ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಭಾರತೀಯ ಬ್ಯಾಟರ್​ಗಳು ರನ್​ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದರು. ಅಲ್ಲದೆ ಕೇವಲ 46 ರನ್​ಗಳಿಗೆ ಆಲೌಟ್ ಆಯಿತು. ಅದರಲ್ಲೂ ಮಳೆ ಬರುವ ಮುನ್ಸೂಚನೆ ಇದ್ದರೂ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು.

ಏಕೆಂದರೆ ಬಾಂಗ್ಲಾದೇಶ್ ವಿರುದ್ಧದ ಮಳೆಬಾಧಿತ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ವರವಾಗಿದ್ದು ನಾಲ್ಕನೇ ಇನಿಂಗ್ಸ್​. ಎರಡು ದಿನದಾಟಗಳು ಮಳೆಗೆ ಅಹುತಿಯಾದರೂ ಆ ಪಂದ್ಯವನ್ನು ಟೀಮ್ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

ಮಳೆಬಾಧಿತ ಪಂದ್ಯದಲ್ಲಿ ಗೆದ್ದು ಬೀಗಿದ ಇಂತಹದೊಂದು ತಾಜಾ ಉದಾಹರಣೆ ಟೀಮ್ ಇಂಡಿಯಾ ಮುಂದಿದ್ದರೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದ್ದೇ ಅಚ್ಚರಿ. ಈ ಅಚ್ಚರಿಯ ನಿರ್ಧಾರವೇ ಭಾರತ ತಂಡದ ಸೋಲಿಗೂ ಕಾರಣವಾಯಿತು ಎಂದರೆ ತಪ್ಪಾಗಲಾರದು.

ಗೆದ್ದು ಬೀಗಿದ ಕಿವೀಸ್ ಪಡೆ:

ಭಾರತದ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಝಿಲೆಂಡ್ ತಂಡ ಗೆಲುವಿನೊಂದಿಗೆ ಆರಂಭಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ 402 ರನ್ ಕಲೆಹಾಕಿತು.

ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

ಇನ್ನು 356 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 462 ರನ್​ಗಳಿಸಿ ಆಲೌಟ್ ಆಯಿತು. ಅತ್ತ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ 107 ರನ್​ಗಳ ಗುರಿ ಪಡೆದ ನ್ಯೂಝಿಲೆಂಡ್ ತಂಡವು ಐದನೇ ದಿನದಾಟದಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿದೆ. ಈ ಮೂಲಕ 8 ವಿಕೆಟ್​ಗಳ ಭರ್ಜರಿ ಜಯದೊಂದಿಗೆ ಟೆಸ್ಟ್ ಸರಣಿಯಲ್ಲಿ ಶುಭಾರಂಭ ಮಾಡಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ