Sign In

By signing in or creating an account, you agree with Associated Broadcasting Company's Terms & Conditions and Privacy Policy.

BAN vs IND: ಟೀಮ್ ಇಂಡಿಯಾ ಸ್ಟಾರ್ ಆಟಗಾರನಿಗೆ ಗಾಯ: 2ನೇ ಪಂದ್ಯಕ್ಕೆ ಅನುಮಾನ

India vs Bangladesh: ಒಂದು ವೇಳೆ ಸ್ಟಾರ್ ಆಲ್​ರೌಂಡರ್​ 2ನೇ ಏಕದಿನ ಪಂದ್ಯದಿಂದ ಹೊರಗುಳಿದರೆ ಅದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು.

BAN vs IND: ಟೀಮ್ ಇಂಡಿಯಾ ಸ್ಟಾರ್ ಆಟಗಾರನಿಗೆ ಗಾಯ: 2ನೇ ಪಂದ್ಯಕ್ಕೆ ಅನುಮಾನ
Shardul-Rohit Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 05, 2022 | 4:55 PM

Bangladesh vs India, 2nd ODI:  ಬಾಂಗ್ಲಾದೇಶ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ (Team India) ಇದೀಗ 2ನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಡಿಸೆಂಬರ್ 7 ರಂದು ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಅಲಭ್ಯರಾಗುವ ಸಾಧ್ಯತೆಯಿದೆ. ಏಕೆಂದರೆ ಢಾಕಾದಲ್ಲಿ ನಡೆದ ಮೊದಲ ಪಂದ್ಯದ ವೇಳೆ ಶಾರ್ದೂಲ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ಕೆಲ ಹೊತ್ತು ಮೈದಾನದಿಂದ ಹೊರಗುಳಿದಿದ್ದರು. ಇದಾದ ಬಳಿಕ ಮತ್ತೆ ಕಣಕ್ಕಿಳಿದರೂ ಸ್ನಾಯು ಸೆಳೆತದ ಸಮಸ್ಯೆ ಮರುಕಳಿಸಿತ್ತು. ಹೀಗಾಗಿ ಮುಂದಿನ ಪಂದ್ಯದ ವೇಳೆ ಶಾರ್ದೂಲ್​ಗೆ ವಿಶ್ರಾಂತಿ ನೀಡಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಬಯಸಿದೆ ಎಂದು ವರದಿಯಾಗಿದೆ.

ಶಾರ್ದೂಲ್ ಠಾಕೂರ್ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಕಾಣಿಸಿಕೊಳ್ಳಬೇಕಿದ್ದು, ಹೀಗಾಗಿ ಸಮಸ್ಯೆ ಬಿಗಡಾಯಿಸದಂತೆ ಎಚ್ಚರಿಕೆವಹಿಸಿಕೊಳ್ಳಲು ಟೀಮ್ ಮ್ಯಾನೇಜ್ಮೆಂಟ್ ಸೂಚಿಸಿದೆ. ಸದ್ಯ ವೈದ್ಯಕೀಯ ತಂಡವು ಶಾರ್ದೂಲ್ ಠಾಕೂರ್ ಅವರ ಸ್ನಾಯು ಸಮಸ್ಯೆಯ ಬಗ್ಗೆ ನಿಗಾವಹಿಸಿದ್ದು,  ಮಂಗಳವಾರದ ವೇಳೆಗೆ ಸಂಪೂರ್ಣ ಫಿಟ್​ ಆಗಿ ಅಭ್ಯಾಸ ನಡೆಸಲು ಸಾಧ್ಯವಾಗದಿದ್ದರೆ 2ನೇ ಏಕದಿನ ಪಂದ್ಯದಿಂದ ಹೊರಗುಳಿಯುವುದು ಖಚಿತ ಎನ್ನಬಹುದು.

ಟೀಮ್ ಇಂಡಿಯಾಗೆ ಹಿನ್ನಡೆ:

ಇದನ್ನೂ ಓದಿ
Image
IPL 2023: RCB ಈ ನಾಲ್ವರು ಆಟಗಾರರ ಖರೀದಿಗೆ ಮುಂದಾಗಬಹುದು..!
Image
IPL 2023: ಈ ಬಾರಿಯ ಐಪಿಎಲ್​ನಿಂದ 5 ಆಟಗಾರರು ಔಟ್..!
Image
IPL 2023 Mini Auction: ಐಪಿಎಲ್ ಮಿನಿ ಹರಾಜು ಲೀಸ್ಟ್ ಔಟ್: ಯಾವ ದೇಶದಿಂದ ಎಷ್ಟು ಆಟಗಾರರು?
Image
New Record: ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್

ಒಂದು ವೇಳೆ ಶಾರ್ದೂಲ್ ಠಾಕೂರ್ 2ನೇ ಏಕದಿನ ಪಂದ್ಯದಿಂದ ಹೊರಗುಳಿದರೆ ಅದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು. ಏಕೆಂದರೆ ಮೊದಲ ಏಕದಿನ ಪಂದ್ಯದಲ್ಲಿ 9 ಓವರ್​ಗಳನ್ನು ಎಸೆದಿದ್ದ ಶಾರ್ದೂಲ್ ಠಾಕೂರ್ ನೀಡಿದ್ದು ಕೇವಲ 21 ರನ್​ ಮಾತ್ರ. ಹೀಗಾಗಿ ನಿರ್ಣಾಯಕವಾಗಿರುವ 2ನೇ ಪಂದ್ಯದಲ್ಲಿ ಆಲ್​ರೌಂಡರ್ ಅಲಭ್ಯತೆಯಿಂದ ಹಿನ್ನಡೆ ಉಂಟಾಗಬಹುದು.

ಬದಲಿ ಆಟಗಾರ ಯಾರು?

ಇನ್ನು ಶಾರ್ದೂಲ್ ಠಾಕೂರ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿದರೆ ಅವರ ಸ್ಥಾನದಲ್ಲಿ ಯುವ ವೇಗಿ ಉಮ್ರಾನ್ ಮಲಿಕ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಉಮ್ರಾನ್ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಬದಲಿ ಆಟಗಾರನಾಗಿ ಉಮ್ರಾನ್ ಮಲಿಕ್​ಗೆ ಅವಕಾಶ ಸಿಗಬಹುದು.

ಭಾರತ ಏಕದಿನ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ) , ಶಿಖರ್ ಧವನ್ , ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ , ಕೆಎಲ್ ರಾಹುಲ್ ( ವಿಕೆಟ್ ಕೀಪರ್ ) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ದೀಪಕ್ ಚಾಹರ್ , ಶಾರ್ದೂಲ್ ಠಾಕೂರ್ , ಮೊಹಮ್ಮದ್ ಸಿರಾಜ್ , ಕುಲದೀಪ್ ಸೇನ್, ಇಶಾನ್ ಕಿಶನ್ , ರಾಹುಲ್ ತ್ರಿಪಾಠಿ , ರಜತ್ ಪಾಟಿದಾರ್ , ಉಮ್ರಾನ್ ಮಲಿಕ್.

ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್