ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್-ವಿರಾಟ್ ಕೊಹ್ಲಿ ವಾಪಸ್

ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಹಾಗೂ ಟಿ20 ಸರಣಿಗೆ ಬಿಸಿಸಿಐ, 15 ಸದಸ್ಯರ ಭಾರತ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ. ಎರಡು ತಿಂಗಳ ವಿರಾಮದ ಬಳಿಕ ಹಿರಿಯ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ತಂಡಕ್ಕೆ ವಾಪಸ್ ಆಗಿದ್ದಾರೆ. ಹಾಗಾದ್ರೆ, 15ರ ಬಳಗದಲ್ಲಿ ಯಾರೆಲ್ಲಾ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್-ವಿರಾಟ್ ಕೊಹ್ಲಿ ವಾಪಸ್
Team India
Image Credit source: BCCI Social Media

Updated on: Sep 16, 2026 | 10:59 PM

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತದ ಏಕದಿನ ಮತ್ತು ಟಿ20 ತಂಡಗಳನ್ನು ಬಿಸಿಸಿಐ ಪ್ರಕಟಿಸಿದ್ದು, ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ನಾಯಕರಾಗಿದ್ದಾರೆ. ‘ರೆಸ್ಟ್ ಆಫ್ ಇಂಡಿಯಾ’ ತಂಡವನ್ನು ರಿಷಬ್ ಪಂತ್ ಮುನ್ನಡೆಸಲಿದ್ದಾರೆ. ಇನ್ನು ಮುಖ್ಯವಾಗಿ ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಕಿಂಗ್ ಕೊಹ್ಲಿ ಹಾಗೂ ಹಿಟ್ ಮ್ಯಾನ್ ರೋಹಿತ್ ಶರ್ಮಾ ವಾಪಸ್ ಆಗಿದ್ದು, ತಂಡಕ್ಕೆ ಆನೆ ಬಲ ಬಂದಂತಾಗಿದೆ.

ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರ ಅನುಪಸ್ಥಿತಿಯಲ್ಲಿ ಋತುರಾಜ್ ಅವರು ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಏಷ್ಯನ್ ಗೇಮ್ಸ್‌ನ ಜವಾಬ್ದಾರಿಗಳ ಕಾರಣದಿಂದಾಗಿ ಭಾರತದ ಟಿ20 ತಂಡದ ನಾಯಕ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ.

ಇದನ್ನೂ ಓದಿ: ನಾಯಕನಾಗಿ ಭಾರತದಲ್ಲಿ ಚೊಚ್ಚಲ ಟಿ20 ಸರಣಿ ಗೆದ್ದ ಶ್ರೇಯಸ್ ಅಯ್ಯರ್

ತಂಡದಲ್ಲಿ ಇಬ್ಬರು ಕನ್ನಡಿಗರು

ಭಾರತ ಏಕದಿನ ತಂಡದಲ್ಲಿ ಕೆಎಲ್ ರಾಹುಲ್ ಮತ್ತು ವೇಗಿ ಪ್ರಸಿದ್ಧ ಕೃಷ್ಣ ಸ್ಥಾನ ಗಿಟ್ಟಿಸಿಕೊಂಡ ಇಬ್ಬರು ಕನ್ನಡಿಗರಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಅವರು ಪ್ಲೇಯಂಗ್ ಇಲೆವೆನ್ ನಲ್ಲಿ ಖಚಿತವಾಗಿ ಇರುತ್ತಾರೆ. ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಅನುಭವಿ ಮೊಹಮ್ಮದ್ ಸಿರಾಜ್ ಅವರೊಂದಿಗೆ ಪ್ರಸಿದ್ಧ ಕೃಷ್ಣ ಅವರು ಎರಡನೇ ವೇಗಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳು ಸೆಪ್ಟೆಂಬರ್ 27 ರಂದು ತಿರುವನಂತಪುರಂನಲ್ಲಿ, ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಹಾಗೂ ಅಕ್ಟೋಬರ್ 3 ರಂದು ಚಂಡೀಗಢದಲ್ಲಿ ನಡೆಯಲಿವೆ. ಇದಾದ ಬಳಿಕ ಐದು ಪಂದ್ಯಗಳ T20I ಸರಣಿ ಆರಂಭವಾಗಲಿದೆ. ಮೊದಲ T20I ಅಕ್ಟೋಬರ್ 6ರಂದು ಲಖನೌದಲ್ಲಿ ನಡೆಯಲಿದ್ದು, ನಂತರ ಅಕ್ಟೋಬರ್ 9ರಂದು ರಾಂಚಿ, ಅಕ್ಟೋಬರ್ 11ರಂದು ಇಂದೋರ್, ಅಕ್ಟೋಬರ್ 14ರಂದು ಹೈದರಾಬಾದ್ ಮತ್ತು ಅಕ್ಟೋಬರ್ 17ರಂದು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ.

ಭಾರತದ ಏಕದಿನ ತಂಡ

ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಧ್ರುವ್ ಜುರೆಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ನಬಿ, ನಮನ್ ಧೀರ್.

ಭಾರತ T20 ತಂಡ

ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್‌ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್.

ಜಪಾನ್ T20I ಮತ್ತು ಏಷ್ಯನ್ ಗೇಮ್ಸ್‌ಗಾಗಿ ಪರಿಷ್ಕೃತ ಭಾರತ ತಂಡ

ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಇಶಾನ್ ಕಿಶನ್ (ವಿಕೆಟ್‌ಕೀಪರ್), ಶಿವಂ ದುಬೆ, ತಿಲಕ್ ವರ್ಮಾ [ಉಪನಾಯಕ], ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವೈಭವ್ ಸೂರ್ಯವಂಶಿ, ಯಶ್ ಠಾಕೂರ್, ವಿಪ್ರಜ್ ನಿಗಮ್

Published On - 10:58 pm, Wed, 16 September 26

Loading...
Unable to load recommendations.
Follow Us