AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು ಭಯ್ಯಾ..!

India vs England: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಢಿಯಾ ಮೊದಲ ಇನಿಂಗ್ಸ್​ನಲ್ಲಿ 224 ರನ್ ಕಲೆಹಾಕಿದರೆ, ಇಂಗ್ಲೆಂಡ್ 247 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 396 ರನ್​ಗಳಿಸಿತು. ಮೊದಲ ಇನಿಂಗ್ಸ್​ನಲ್ಲಿನ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 374 ರನ್​ಗಳ ಗುರಿ ಪಡೆದ ಇಂಗ್ಲೆಂಡ್ 367 ರನ್​ಗಳಿಸಿ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ 5 ವಿಕೆಟ್ ಕಬಳಿಸಿ ರೋಚಕ ಗೆಲುವಿನ ರೂವಾರಿ ಎನಿಸಿಕೊಂಡರು.

Mohammed Siraj: ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು ಭಯ್ಯಾ..!
Virat Kohli - Siraj
ಝಾಹಿರ್ ಯೂಸುಫ್
|

Updated on: Aug 05, 2025 | 7:54 AM

Share

ಓವಲ್ ಮೈದಾನದಲ್ಲಿ ನಡೆದ 5ನೇ ಮತ್ತು ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 6 ರನ್​ಗಳಿಂದ ಸೋಲಿಸಿ ಭಾರತ ತಂಡ ಅದ್ಭುತ ಗೆಲುವು ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಇತ್ತ ಟೀಮ್ ಇಂಡಿಯಾ ಐತಿಹಾಸಿಕ ಗೆಲುವು ದಾಖಲಿಸುತ್ತಿದ್ದಂತೆ ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಕೊನೆಯ ದಿನದಂದು ಭಾರತಕ್ಕೆ ಗೆಲ್ಲಲು 4 ವಿಕೆಟ್‌ಗಳು ಬೇಕಾಗಿದ್ದವು. ಅತ್ತ ಇಂಗ್ಲೆಂಡ್‌ ತಂಡಕ್ಕೆ 35 ರನ್‌ಗಳು ಬೇಕಿತ್ತು. ಆದರೆ ಐದನೇ ದಿನದಾಟದಲ್ಲಿ ಮಿಂಚಿನ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ ಮೂರು ವಿಕೆಟ್ ಉರುಳಿಸುವ ಮೂಲಕ ಭಾರತ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

ಈ ಗೆಲುವನ್ನು ಶ್ಲಾಘಿಸಿದ ಕೊಹ್ಲಿ, ಟೀಮ್ ಇಂಡಿಯಾದ ಅದ್ಭುತ ಗೆಲುವು. ಸಿರಾಜ್ ಮತ್ತು ಪ್ರಸಿದ್ಧ್ ಅವರ ದೃಢಸಂಕಲ್ಪ ನಮಗೆ ಈ ಅದ್ಭುತ ಗೆಲುವನ್ನು ತಂದುಕೊಟ್ಟಿದೆ. ತಂಡಕ್ಕಾಗಿ ಎಲ್ಲವನ್ನೂ ಪಣಕ್ಕಿಡುವ ಸಿರಾಜ್ ಅವರಿಗೆ ವಿಶೇಷ ಗೌರವ. ಸಿರಾಜ್ ಅವರ ಪ್ರದರ್ಶನ ನೋಡಿ ತುಂಬಾ  ಸಂತೋಷಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅತ್ತ ಗುರುವಿನ ಅಭಿನಂದನೆಗೆ ಪ್ರತಿಕ್ರಿಯಿಸಿರುವ ಮೊಹಮ್ಮದ್ ಸಿರಾಜ್, ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು ಭಯ್ಯಾ ಎಂದು ತಿಳಿಸಿದ್ದಾರೆ. ಈ ಮೂಲಕ ತನ್ನ ಕೆರಿಯರ್​ನ ಉದ್ದಕ್ಕೂ ಬೆಂಬಲಿಸುತ್ತಾ ಬಂದಿದ್ದ ವಿರಾಟ್ ಕೊಹ್ಲಿಗೆ ಟೀಮ್ ಇಂಡಿಯಾ ವೇಗಿ ಸಂತೋಷದ ಸಮಯದಲ್ಲೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಮೊಹಮ್ಮದ್ ಸಿರಾಜ್ ಟೆಸ್ಟ್ ಕೆರಿಯರ್ ಆರಂಭಿಸಿದ್ದು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ. ಅದರಲ್ಲೂ ಕಿಂಗ್ ಕೊಹ್ಲಿ ಗರಡಿಯಲ್ಲಿ ಪಳಗಿದ್ದ ಸಿರಾಜ್ ಅತ್ಯುತ್ತಮ ಬೌಲರ್ ಆಗಿ ರೂಪುಗೊಂಡಿದ್ದರು. ಹೀಗೆ ಸಿರಾಜ್​ನನ್ನು ಮುಂದಿಟ್ಟು ಕೊಹ್ಲಿ ರೂಪಿಸುತ್ತಿದ್ದ ತಂತ್ರಗಳು ಟೀಮ್ ಇಂಡಿಯಾಗೆ ಫಲ ನೀಡುತ್ತಿತ್ತು. ಈ ಯಶಸ್ವಿ ಪ್ರದರ್ಶನದಿಂದಾಗಿ ಮೊಹಮ್ಮದ್ ಸಿರಾಜ್ ಭಾರತ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿದ್ದರು.

 ವಿರಾಟ್ ಕೊಹ್ಲಿ ತಂಡದಲ್ಲಿದ್ದಾಗ ಮೊಹಮ್ಮದ್ ಸಿರಾಜ್ 51 ಟೆಸ್ಟ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಸಿರಾಜ್ ಪಡೆದಿರುವುದು ಬರೋಬ್ಬರಿ 81 ವಿಕೆಟ್​​ಗಳು. ಅಂದರೆ ಕೊಹ್ಲಿ ಜೊತೆಗಿದ್ದಾಗ ಸಿರಾಜ್ 49ರ ಸ್ಟ್ರೈಕ್ ರೇಟ್​ನಲ್ಲಿ ವಿಕೆಟ್ ಕಬಳಿಸಿದ್ದಾರೆ. ಈ ಅಂಕಿ ಅಂಶಗಳೇ ಮೊಹಮ್ಮದ್ ಸಿರಾಜ್ ಪಾಲಿಗೆ ವಿರಾಟ್ ಕೊಹ್ಲಿ ನಾಯಕತ್ವ ಎಷ್ಟು ಮುಖ್ಯವಾಗಿತ್ತು ಎಂಬುದನ್ನು ತೋರಿಸುತ್ತದೆ. ಹೀಗಾಗಿಯೇ ಕೊಹ್ಲಿ ಟೆಸ್ಟ್​ ನಿವೃತ್ತಿ ಘೋಷಿಸಿದಾಗ ನನ್ನ ಸೂಪರ್​ ಹೀರೋನನ್ನು ನಾನು ಇನ್ಮುಂದೆ ಮಿಸ್ ಮಾಡಿಕೊಳ್ಳಲಿದ್ದೇನೆ ಎಂದಿದ್ದರು.

ಇದನ್ನೂ ಓದಿ: 93 ವರ್ಷಗಳಲ್ಲೇ ಇದೇ ಮೊದಲ ಬಾರಿ… ಇದು ಟೀಮ್ ಇಂಡಿಯಾದ ಅಂತಿಂಥ ಗೆಲುವಲ್ಲ..!

ಇದೀಗ ಆಂಗ್ಲರ ನಾಡಿನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿಯಿಂದಲೇ ಸಿರಾಜ್ ಭೇಷ್ ಎನಿಸಿಕೊಂಡಿದ್ದಾರೆ. ಈ ಹೊಗಳಿಕೆಯ ನಡುವೆಯೂ ತನ್ನ ಮೇಲೆ ನಂಬಿಕೆ ಇಟ್ಟು ಬೆಳೆಸಿದ ವಿರಾಟ್ ಕೊಹ್ಲಿಗೆ ಧನ್ಯವಾದಗಳನ್ನು ತಿಳಿಸಲು ಸಿರಾಜ್ ಮರೆಯಲಿಲ್ಲ ಎಂಬುದು ವಿಶೇಷ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ