AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಗೆಳೆಯ, ಇದು ಅತ್ಯದ್ಭುತ ಇನಿಂಗ್ಸ್​…ಕೊಹ್ಲಿ ಬಗ್ಗೆ ಎಬಿಡಿ ಹೇಳಿದ್ದೇನು ಗೊತ್ತಾ?

India vs Pakistan: ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್​ನಲ್ಲಿ 17 ರನ್ ಕಲೆಹಾಕಿದರು.

Virat Kohli: ಗೆಳೆಯ, ಇದು ಅತ್ಯದ್ಭುತ ಇನಿಂಗ್ಸ್​...ಕೊಹ್ಲಿ ಬಗ್ಗೆ ಎಬಿಡಿ ಹೇಳಿದ್ದೇನು ಗೊತ್ತಾ?
AB De Villiers - Virat Kohli
TV9 Web
| Edited By: |

Updated on: Oct 24, 2022 | 5:31 PM

Share

T20 World Cup 2022: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲೇ ಬಲಿಷ್ಠ ಪಾಕಿಸ್ತಾನ್ (India vs Pakistan) ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ (Team India) ಶುಭಾರಂಭ ಮಾಡಿದೆ. ಇಂತಹದೊಂದು ಭರ್ಜರಿ ಗೆಲುವಿನ ಕಾರಣಕರ್ತ ಕಿಂಗ್ ಕೊಹ್ಲಿ. ಏಕೆಂದರೆ ಪಾಕಿಸ್ತಾನ್ ನೀಡಿದ 160 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡಿದರು. ಈ ಉತ್ತಮ ಜೊತೆಯಾಟದ ಪರಿಣಾಮ ಟೀಂ್ ಇಂಡಿಯಾಗೆ ಅಂತಿಮ 3 ಓವರ್​ಗಳ ವೇಳೆ 48 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಅಕ್ಷರಶಃ ವಿರಾಟ್ ಕೊಹ್ಲಿ ಅಬ್ಬರಿಸಲಾರಂಭಿಸಿದರು.

ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್​ನಲ್ಲಿ 17 ರನ್ ಕಲೆಹಾಕಿದರು. ಅಂತಿಮ 12 ಎಸೆತಗಳಲ್ಲಿ 31 ರನ್ ಗಳಿಸಬೇಕಿತ್ತು. ಪಾಕ್ ವೇಗಿ ಹ್ಯಾರಿಸ್ ರೌಫ್ ಎಸೆದ 19ನೇ ಓವರ್​ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು. ಹಾಗೆಯೇ ಕೊನೆಯ ಓವರ್​ನಲ್ಲಿ 16 ರನ್​ಗಳ ಗುರಿಯೊಂದಿಗೆ ಬ್ಯಾಟ್ ಬೀಸಿದ ಕೊಹ್ಲಿ ಬೌಲರ್​ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಮೊಹಮ್ಮದ್ ನವಾಜ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಗೆಲುವನ್ನು ಖಚಿತಪಡಿಸಿದರು. ಅಂತಿಮವಾಗಿ ಕೊನೆಯ ಎಸೆತದಲ್ಲಿ ಅಶ್ವಿನ್ 1 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ 4 ವಿಕೆಟ್​ಗಳ ಜಯ ಸಾಧಿಸಿತು.

ಇತ್ತ 53 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸುವ ಮೂಲಕ ಅಜೇಯರಾಗಿ ಉಳಿದ ವಿರಾಟ್ ಕೊಹ್ಲಿಯ ಇನಿಂಗ್ಸ್​ಗೆ ಇದೀಗ ಬಹುಪರಾಕ್ ಕೇಳಿ ಬರುತ್ತಿದೆ. ಅದರಲ್ಲೂ ದೇಶ-ವಿದೇಶದ ಸ್ಟಾರ್ ಕ್ರಿಕೆಟಿಗರು ಕೂಡ ಕೊಹ್ಲಿ ಬ್ಯಾಟಿಂಗ್​ಗೆ ಮೆಚ್ಚುಗೆಗಳ ಸುರಿಮಳೆ ಸುರಿಸಿದ್ದಾರೆ. ಮುಖ್ಯವಾಗಿ ಎಬಿ ಡಿವಿಲಿಯರ್ಸ್ ವಿಶೇಷವಾಗಿ ಟ್ವೀಟ್ ಮಾಡಿ ಗೆಳೆಯನನ್ನು ಹಾಡಿಹೊಗಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಎಬಿ ಡಿವಿಲಿಯರ್ಸ್, ಗೆಳೆಯಾ, ಈ ಇನಿಂಗ್ಸ್​ ಅತ್ಯದ್ಭುತವಾಗಿತ್ತು. ಇದು ಶ್ರೇಷ್ಠ ಇನಿಂಗ್ಸ್​ಗಳಲ್ಲೇ ಅತೀ ಶ್ರೇಷ್ಠ ಇನಿಂಗ್ಸ್​ ಎಂದು ಕಿಂಗ್ ಕೊಹ್ಲಿಯ ಬ್ಯಾಟಿಂಗ್​ಗೆ ಮಿಸ್ಟರ್ 360 ಡಿಗ್ರಿ ಬಹುಪರಾಕ್ ಅಂದಿದ್ದಾರೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್​ನ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ

ಇದೀಗ ಎಬಿಡಿಯ ಈ ಟ್ವೀಟ್ ವೈರಲ್ ಆಗಿದ್ದು, ಅಭಿಮಾನಿಗಳು ಇಬ್ಬರ ಗೆಳೆತನವನ್ನೂ ಕೂಡ ಹಾಡಿಹೊಗಳುತ್ತಿದ್ದಾರೆ. ಜೊತೆಯಾಗಿ ಆರ್​ಸಿಬಿ ಪರ ಆಡಿದ್ದ ಕಿಂಗ್ ಕೊಹ್ಲಿ-ಎಬಿಡಿ ಹಲವು ಅದ್ಭುತ ಇನಿಂಗ್ಸ್​ಗಳನ್ನು ಆಡಿದ್ದರು. ಇದೀಗ ವಿರಾಟ್ ಕೊಹ್ಲಿ ಏಕಾಂಗಿಯಾಗಿ ಆಡಿರುವ ಇನಿಂಗ್ಸ್​ಗೆ ಎಬಿಡಿ ಮೆಚ್ಚುಗೆಗಳನ್ನು ಸೂಚಿಸಿರುವುದು ವಿಶೇಷ.

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು