AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದು ನನ್ನ ಸ್ಟೈಲ್… ಕ್ಷಮೆಯಾಚಿಸಿದ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್

India vs Pakistan: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 241 ರನ್​ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಈ ಪಂದ್ಯದಲ್ಲಿ ಗಿಲ್ ಅವರನ್ನು ಔಟ್ ಮಾಡಿ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ವಿಚಿತ್ರವಾಗಿ ಸಂಭ್ರಮಿಸಿದ್ದರು.

ಅದು ನನ್ನ ಸ್ಟೈಲ್... ಕ್ಷಮೆಯಾಚಿಸಿದ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್
Abrar Ahmed
ಝಾಹಿರ್ ಯೂಸುಫ್
|

Updated on:Mar 08, 2025 | 1:05 PM

Share

ಭಾರತ ಮತ್ತು ಪಾಕಿಸ್ತಾನ್ ನಡುವಣ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಸಖತ್ ಸುದ್ದಿಯಾಗಿದ್ದು ಇಬ್ಬರೇ… ಒಬ್ಬರು ವಿರಾಟ್ ಕೊಹ್ಲಿ. ಮತ್ತೊಬ್ಬರು ಅಬ್ರಾರ್ ಅಹ್ಮದ್. ಕಿಂಗ್ ಕೊಹ್ಲಿ ಸೆಂಚುರಿ ಸಿಡಿಸಿ ಸುದ್ದಿಯಾದರೆ, ಅಬ್ರಾರ್ ಅಹ್ಮದ್ ವಿಚಿತ್ರ ಶೈಲಿಯ ಸಂಭ್ರಮದೊಂದಿಗೆ ಎಲ್ಲರ ಗಮನ ಸೆಳೆದಿದ್ದರು. ಆದರೆ ಈ ಸಂಭ್ರಮವೇ ಅವರ ಪಾಲಿಗೆ ಮುಳುವಾಗಿ ಮಾರ್ಪಟ್ಟಿತ್ತು.

ಶುಭ್​ಮನ್ ಗಿಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಬಳಿಕ ಅಬ್ರಾರ್ ಅಹ್ಮದ್, ಹೋಯ್ತಾ ಇರು ಎಂಬಾರ್ಥದಲ್ಲಿ ಕಣ್ಸನ್ನೆ ಮಾಡಿ ಸಂಭ್ರಮಿಸಿದ್ದರು. ಆದರೆ ಈ ಸಂಭ್ರಮಕ್ಕೆ ಪಾಕಿಸ್ತಾನದ ಮಾಜಿ ಆಟಗಾರರು ಸೇರಿದಂತೆ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದರು.

ಅದರಲ್ಲೂ ಸೋಷಿಯಲ್ ಮೀಡಿಯಾದಲ್ಲಿ ವಿಪರೀತ ಟ್ರೋಲ್​ಗೆ ಒಳಗಾಗಿದ್ದ ಅಬ್ರಾರ್ ಅಹ್ಮದ್ ಇದೀಗ ತಮ್ಮ ನಡೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ
Image
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
Image
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
Image
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Image
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಖಾಸಗಿ ಚಾನೆಲ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಬ್ರಾರ್ ಅಹ್ಮದ್, ಶುಭ್​ಮನ್ ಗಿಲ್ ಅವರನ್ನು ಔಟ್ ಮಾಡಿ ನಾನು ಸಂಭ್ರಮಿಸಿದ್ದು ನನ್ನ ಶೈಲಿಯಾಗಿತ್ತು. ಅಂದರೆ ನಾನು ವಿಕೆಟ್ ಸಿಕ್ಕಾಗ ಸಂಭ್ರಮಿಸುವುದೇ ಹಾಗೆ. ಆದರೆ ಇದರಿಂದ ಯಾರಿಗಾದರೂ ನೋವುಂಟಾಗಿದ್ದರೆ, ಅದಕ್ಕಾಗಿ ನಾನು ವಿಷಾದಿಸುತ್ತೇನೆ. ಯಾರನ್ನೂ ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ಹೀಗಾಗಿ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಪಾಕಿಸ್ತಾನ್ ಸ್ಪಿನ್ನರ್ ಹೇಳಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಅಬ್ರಾರ್ ಅಹ್ಮದ್ 10 ಓವರ್​ಗಳಲ್ಲಿ ಕೇವಲ 28 ರನ್ ನೀಡಿ 1 ವಿಕೆಟ್ ಕಬಳಿಸಿ ಮಿಂಚಿದ್ದರು. ಅಬ್ರಾರ್ ಅವರ ಹತ್ತು ಓವರ್ ಪೂರ್ಣಗೊಳ್ಳುತ್ತಿದ್ದಂತೆ ಪಾಕ್ ಸ್ಪಿನ್ನರ್​ನ ಬಳಿ ತೆರಳಿದ ವಿರಾಟ್ ಕೊಹ್ಲಿ ಶ್ಲಾಘನೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: IPL 2026: ಐಪಿಎಲ್​ಗೆ ಪಾಕಿಸ್ತಾನ್ ವೇಗಿ ಮೊಹಮ್ಮದ್ ಅಮೀರ್

ಈ ಬಗ್ಗೆ ಮಾತನಾಡಿದ ಅಬ್ರಾರ್, ನಾನು ಅಂಡರ್-19 ಆಡುವಾಗಿಂದಲೇ ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಬೇಕೆಂಬ ಕನಸು ಕಟ್ಟಿಕೊಂಡಿದೆ. ಅದು ಈಗ ನೆರವೇರಿದೆ. ಅದರಲ್ಲೂ ಅವರೇ ಉತ್ತಮವಾಗಿ ಬೌಲಿಂಗ್ ಮಾಡಿದ್ದೀಯಾ ಎಂದಿರುವುದು ನನ್ನ ಸಂತಸವನ್ನು ದುಪ್ಪಟ್ಟುಗೊಳಿಸಿತು ಎಂದು ತಿಳಿಸಿದ್ದಾರೆ.

Published On - 1:03 pm, Sat, 8 March 25

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು