AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ರಾರ್ ಅಹ್ಮದ್​ನ ಕಾವ್ಯ ಮಾರನ್ ಖರೀದಿಸಿದ್ಯಾಕೆ? ಮೌನ ಮುರಿದ ಹೆಡ್ ಕೋಚ್

Vettori Explains Abrar Ahmed Buy: ಡೇನಿಯಲ್ ವೆಟ್ಟೋರಿ ಅಬ್ರಾರ್ ಅಹ್ಮದ್ ಅವರನ್ನು ಸನ್‌ರೈಸರ್ಸ್ ಲೀಡ್ಸ್ ಖರೀದಿಸಲು ಕಾರಣ ವಿವರಿಸಿದ್ದಾರೆ. ಆದಿಲ್ ರಶೀದ್ ಲಭ್ಯವಿಲ್ಲದ ಕಾರಣ ವಿದೇಶಿ ಸ್ಪಿನ್ನರ್ ಅವಶ್ಯಕತೆ ಇತ್ತು, ಹಾಗಾಗಿ ಅಬ್ರಾರ್ ಸೂಕ್ತ ಆಯ್ಕೆಯಾಗಿದ್ದರು. ಪಾಕಿಸ್ತಾನಿ ಆಟಗಾರರನ್ನು ಖರೀದಿಸದಿರುವ ಬಗ್ಗೆ ಯಾವುದೇ ಚರ್ಚೆ ಇರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಂಡದ ಗೆಲುವಿಗೆ ಸಮರ್ಥ ಆಟಗಾರರ ಆಯ್ಕೆಯೇ ಮುಖ್ಯ ಎಂದು ವೆಟ್ಟೋರಿ ಹೇಳಿದ್ದಾರೆ.

ಅಬ್ರಾರ್ ಅಹ್ಮದ್​ನ ಕಾವ್ಯ ಮಾರನ್ ಖರೀದಿಸಿದ್ಯಾಕೆ? ಮೌನ ಮುರಿದ ಹೆಡ್ ಕೋಚ್
Abrar Ahmed
ಪೃಥ್ವಿಶಂಕರ
|

Updated on: Mar 13, 2026 | 3:17 PM

Share

ಇಂಗ್ಲೆಂಡ್​ನಲ್ಲಿ ನಡೆಯುವ ದಿ ಹಂಡ್ರೆಡ್ (The Hundred) ಲೀಗ್ ಪ್ರಸ್ತುತ ಭಾರತದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ, ದಿ ಹಂಡ್ರೆಡ್ ಲೀಗ್​ನಲ್ಲಿ ಫ್ರಾಂಚೈಸಿಯನ್ನು ಖರೀದಿಸಿರುವ ಭಾರತದ ಕಾವ್ಯ ಮಾರನ್ (Kavya Maran). ವಾಸ್ತವವಾಗಿ ಮುಂಬರುವ ದಿ ಹಂಡ್ರೆಡ್ ಲೀಗ್​ಗೆ ನಿನ್ನೆ ಹರಾಜು ನಡೆಯಿತು. ಈ ಹರಾಜಿನಲ್ಲಿ ಕಾವ್ಯ ಮಾರನ್ ಒಡೆತನದ ಸನ್​ರೈಸರ್ಸ್​ ಲೀಡ್ಸ್ (Sunrisers Leeds) ಫ್ರಾಂಚೈಸಿ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ (Abrar Ahmed) ಅವರನ್ನು ಖರೀದಿ ಮಾಡಿತು. ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದೊಂದಿಗೆ ಯಾವ ಸಂಬಂದಕ್ಕೂ ಸಿದ್ಧರಿಲ್ಲದ ಭಾರತೀಯರನ್ನು ಕಾವ್ಯ ಮಾರನ್ ಮಾಡಿದ್ದು ಕೆರಳುವಂತೆ ಮಾಡಿದೆ. ಹೀಗಾಗಿ ಕಾವ್ಯ ಮಾರನ್ ಹಾಗೂ ಐಪಿಎಲ್​ನಲ್ಲಿ ಅವರ ಒಡೆತನದ ಸನ್​ರೈಸರ್ಸ್​ ಹೈದರಾಬಾದ್ ತಂಡದ ವಿರುದ್ಧ ಅಭಿಮಾನಿಗಳು ಕೆರಳಿದ್ದಾರೆ. ಐಪಿಎಲ್​ನಿಂದ ಈ ತಂಡವನ್ನು ಬ್ಯಾನ್ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಇದೆಲ್ಲದರ ನಡುವೆ ತಂಡದ ಹೆಡ್ ಕೋಚ್ ಡೇನಿಯಲ್ ವೆಟ್ಟೋರಿ ನೀಡಿರುವ ಹೇಳಿಕೆ ಭಾರತೀಯರನ್ನು ಇನ್ನಷ್ಟು ಕೆರಳಿಸಿದೆ.

ನಮಗೆ ಸಂತಸ ತಂದಿದೆ

ವಾಸ್ತವವಾಗಿ ಅಬ್ರಾರ್ ಅಹ್ಮದ್ ಅವರನ್ನು 2.35 ಕೋಟಿ ರೂ.ಗೆ ಖರೀದಿ ಮಾಡಿದ ಬಳಿಕ ಅವರನ್ನು ಏಕೆ ಖರೀದಿಸಲಾಯಿತು ಎಂಬುದರ ಬಗ್ಗೆ ವಿವರಣೆ ನೀಡಿರುವ ಡೇನಿಯಲ್ ವೆಟ್ಟೋರಿ, ‘ಆರಂಭದಲ್ಲಿ, ನಾವು ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಅವರನ್ನು ಖರೀದಿ ಮಾಡಲು ಯೋಚಿಸಿದ್ದೆವು. ಆದರೆ ಅವರನ್ನು ಸದರ್ನ್ ಬ್ರೇವ್ಸ್ ಖರೀದಿ ಮಾಡುವಲ್ಲಿ ಯಶಸ್ವಿಯಾಗಿತು. ಹೀಗಾಗಿ ನಮಗೆ ವಿದೇಶಿ ಸ್ಪಿನ್ನರ್​ನ ಅವಶ್ಯಕತೆ ಇದ್ದ ಕಾರಣ, ನಾವು ನಾಲ್ಕೈದು ಆಟಗಾರರ ಮೇಲೆ ಕಣ್ಣಿಟ್ಟಿದ್ದೆವು. ಅವರುಗಳಲ್ಲಿ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಕೂಡ ಒಬ್ಬರು. ಅದರಂತೆ ನಾವು ಅವರನ್ನು ಖರೀದಿ ಮಾಡುವಲ್ಲಿ ಯಶಸ್ವಿಯಾಗಿದ್ದು, ಅವರು ನಮ್ಮ ತಂಡವನ್ನು ಸೇರಿಕೊಂಡಿರುವುದು ನಮಗೆ ಸಂತಸ ತಂದಿದೆ’ ಎಂದಿದ್ದಾರೆ.

ಯಾವುದೇ ಚರ್ಚೆ ನಡೆದಿರಲಿಲ್ಲ

ಇನ್ನು ದಿ ಹಂಡ್ರೆಡ್ ಲೀಗ್​ನಲ್ಲಿ ಭಾರತೀಯರ ಒಡೆತನದಲ್ಲಿರುವ ಫ್ರಾಂಚೈಸಿಗಳು ಪಾಕಿಸ್ತಾನದ ಆಟಗಾರರನ್ನು ಖರೀದಿಸುವ ಸಾಧ್ಯತೆಗಳಿಲ್ಲ ಎಂಬುದು ಈ ಮೊದಲು ಕೇಳಿಬಂದ ಸುದ್ದಿಯಾಗಿತ್ತು. ಆದರೆ ಅದೆಲ್ಲವನ್ನು ಸುಳ್ಳು ಮಾಡಿದ ಸನ್‌ರೈಸರ್ಸ್ ಲೀಡ್ಸ್ ಫ್ರಾಂಚೈಸಿ ಪಾಕ್ ಆಟಗಾರನನ್ನು ಖರೀದಿ ಮಾಡಿದೆ. ಈ ಬಗ್ಗೆ ವೆಟ್ಟೋರಿ ಬಳಿ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ ವೆಟ್ಟೋರಿ, ‘ಪಾಕಿಸ್ತಾನಿ ಆಟಗಾರರನ್ನು ಖರೀದಿಸದಿರುವ ವಿಷಯದ ಬಗ್ಗೆ ಯಾವುದೇ ಚರ್ಚೆ ನಡೆದಿರಲಿಲ್ಲ. ಪಾಕಿಸ್ತಾನಿ ಆಟಗಾರರನ್ನು ಆಯ್ಕೆ ಮಾಡದಿರುವ ಬಗ್ಗೆ ಯಾವುದೇ ಚರ್ಚೆ ನಡೆಯಲಿಲ್ಲ. ಉತ್ತಮ ಆಯ್ಕೆ ಯಾರು ಎಂಬುದನ್ನು ಮಾತ್ರ ನಾವು ಚರ್ಚಿಸಿದ್ದೇವು’ ಎಂದು ವೆಟ್ಟೋರಿ ಹೇಳಿದ್ದಾರೆ.

ಪಾಕ್ ಆಟಗಾರನನ್ನು 2.34 ಕೋಟಿಗೆ ಖರೀದಿಸಿದ ಸನ್‌ರೈಸರ್ಸ್; ಭುಗಿಲೆದ್ದ ಆಕ್ರೋಶ

2.3 ಕೋಟಿ ರೂ.ಗೆ ಖರೀದಿ

ಕಾವ್ಯಾ ಮಾರನ್, ಅಬ್ರಾರ್ ಅಹ್ಮದ್ ಅವರನ್ನು 2.3 ಕೋಟಿ ರೂ.ಗೆ ಖರೀದಿಸಿದರು. ಈ ಮೂಲಕ ಟಿ20 ಲೀಗ್‌ನಲ್ಲಿ ಐಪಿಎಲ್‌ನೊಂದಿಗೆ ಸಂಯೋಜಿತವಾಗಿರುವ ಭಾರತೀಯ ಮಾಲೀಕರು ಖರೀದಿಸಿದ ಮೊದಲ ಪಾಕಿಸ್ತಾನಿ ಆಟಗಾರ ಅಬ್ರಾರ್ ಅಹ್ಮದ್. ಪಾಕಿಸ್ತಾನಿ ಆಟಗಾರರು ಕೊನೆಯ ಬಾರಿಗೆ 2009 ರ ಐಪಿಎಲ್‌ನಲ್ಲಿ ಆಡಿದ್ದರು. ಅಂದಿನಿಂದ, ಪಾಕಿಸ್ತಾನಿ ಆಟಗಾರರನ್ನು ಐಪಿಎಲ್​ನಿಂದ ನಿಷೇಧಿಸಲಾಗಿದೆ. ಆದಾಗ್ಯೂ, ಅವರನ್ನು ದಿ ಹಂಡ್ರೆಡ್‌ ಲೀಗ್​ನಲ್ಲಿ ಖರೀದಿ ಮಾಡುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡವು ವಿವಾದಾತ್ಮಕ ನಿರ್ಧಾರವನ್ನು ತೆಗೆದುಕೊಂಡಿದೆ. ಇದರಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ವ್ಯಾಪಕ ಟೀಕೆಗಳನ್ನು ಎದುರಿಸುತ್ತಿದೆ. ಮುಂದಿನ ದಿನಗಳಲ್ಲಿ ಈ ವಿಷಯವನ್ನು ಕಾವ್ಯ ಮಾರನ್ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ