AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಹಂಡ್ರೆಡ್ ಲೀಗ್​ನತ್ತ ಮುಖ ಮಾಡಿದ LSG

The Hundred: ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿಗಳು ಇದೀಗ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಮುಖ ಮಾಡಿದೆ. ಈಗಾಗಲೇ ಐಪಿಎಲ್ ಮತ್ತು ಸೌತ್ ಆಫ್ರಿಕಾ ಟಿ20 ಲೀಗ್​​ಗಳಲ್ಲಿ ತಂಡಗಳನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಗಳು ಇದೀಗ ದಿ ಹಂಡ್ರೆಡ್ ಲೀಗ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದೆ.

ದಿ ಹಂಡ್ರೆಡ್ ಲೀಗ್​ನತ್ತ ಮುಖ ಮಾಡಿದ LSG
Manchester Originals
ಝಾಹಿರ್ ಯೂಸುಫ್
|

Updated on: Feb 04, 2025 | 11:18 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ ಲಕ್ನೋ ಸೂಪರ್ ಜೈಂಟ್ಸ್‌ ಫ್ರಾಂಚೈಸಿ ಮಾಲೀಕರಾದ ಸಂಜೀವ್ ಗೋಯೆಂಕಾ ಅವರು ದಿ ಹಂಡ್ರೆಡ್ ಲೀಗ್​ನಲ್ಲಿ ತಂಡ ಖರೀದಿಸಲು ಮುಂದಾಗಿದ್ದಾರೆ. ಈ ಲೀಗ್​ನಲ್ಲಿ ಕಣಕ್ಕಿಳಿಯುತ್ತಿರುವ ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯ ಶೇ.49 ರಷ್ಟು ಪಾಲನ್ನು ಖರೀದಿಸಲು ಗೋಯೆಂಕಾ ಅವರ ಆರ್‌ಪಿಎಸ್‌ಜಿ ಗ್ರೂಪ್ ಅತ್ಯಧಿಕ ಬಿಡ್ ಸಲ್ಲಿಸಿದೆ.

ಶುಕ್ರವಾರ ನಡೆದ ಬಿಡ್ಡಿಂಗ್​ನಲ್ಲಿ ಆರ್‌ಪಿಎಸ್‌ಜಿ ಗ್ರೂಪ್ ಲಂಡನ್ ಸ್ಪಿರಿಟ್‌ ಫ್ರಾಂಚೈಸಿಯನ್ನು ಖರೀದಿಸುವ ಪ್ರಯತ್ನ ಮಾಡಿತ್ತು. ಆದರೆ ಈ ಪ್ರಯತ್ನದಲ್ಲಿ ವಿಫಲರಾದ ಬೆನ್ನಲ್ಲೇ ಇದೀಗ ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯ ಬಹುಪಾಲನ್ನು ಖರೀದಿಸಲು ಅತ್ಯಧಿಕ ಬಿಡ್ ಸಲ್ಲಿಸಿದೆ.

ಸದ್ಯ ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯು ಲಂಕಾಷೈರ್ ಕೌಂಟಿ ಕ್ಲಬ್​ ಒಡೆತನದಲ್ಲಿದ್ದು, ಇದೀಗ ಸಂಜೀವ್ ಗೋಯೆಂಕಾ ಈ ಫ್ರಾಂಚೈಸಿಯ ಶೇ. 49 ರಷ್ಟು ಪಾಲನ್ನು ಖರೀದಿಸಲು ಮುಂದಾಗಿದ್ದಾರೆ. ಅತ್ತ ಸಾಲದ ಸುಳಿಯಲ್ಲಿರುವ ಲಂಕಾಷೈರ್ ಈ ಹಿಂದೆ ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯ ಶೇ.51 ರಷ್ಟು ಷೇರು ಮಾರಾಟ ಮಾಡುವುದಾಗಿ ತಿಳಿಸಿದ್ದರು.

ಇದೀಗ ಲಕ್ನೋ ಸೂಪರ್ ಜೈಂಟ್ಸ್ ಮಾಲೀಕರು ದಿ ಹಂಡ್ರೆಡ್ ಲೀಗ್​ನತ್ತ ಮುಖ ಮಾಡಿರುವುದರಿಂದ ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯು ಸಂಜೀವ್ ಗೋಯೆಂಕಾ ಪಾಲಾಗುವ ಸಾಧ್ಯತೆ ಹೆಚ್ಚಿದೆ.

ಒಂದು ವೇಳೆ ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯು ಸಂಜೀವ್ ಗೋಯೆಂಕಾ ಪಾಲಾದರೆ, ಇದು ಆರ್‌ಪಿಎಸ್‌ಜಿ ಗ್ರೂಪ್‌ನ ಮೂರನೇ ತಂಡವಾಗಲಿದೆ. ಇದಕ್ಕೂ ಮುನ್ನ ಆರ್‌ಪಿಎಸ್‌ಜಿ ಗ್ರೂಪ್ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ತಂಡಗಳನ್ನು ಖರೀದಿಸಿದೆ.

ಇದೀಗ ಮೂರನೇ ತಂಡದ ಖರೀದಿಗಾಗಿ ಸಂಜೀವ್ ಗೋಯೆಂಕಾ ಮುಂದಾಗಿದ್ದು, ಅದರ ಮೊದಲ ಹೆಜ್ಜೆಯಾಗಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯ ಪಾಲು ಖರೀದಿಗಾಗಿ ಅತ್ಯಧಿಕ ಮೊತ್ತವನ್ನು ಬಿಡ್ ಮಾಡಿದೆ.

MI ಓವಲ್​-ಮುಂಬೈ ಇಂಡಿಯನ್ಸ್:

ಮುಂಬೈ ಇಂಡಿಯನ್ಸ್ (ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್) ಈಗಾಗಲೇ ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟಿದೆ. ಈ ಬಾರಿ ನಡೆದ ತಂಡಗಳ ಬಿಡ್ಡಿಂಗ್​ನಲ್ಲಿ ಓವಲ್ ಇನ್ವಿನ್ಸಿಬಲ್ ತಂಡದ ಶೇ. 49 ರಷ್ಟು ಪಾಲನ್ನು ಖರೀದಿಸುವಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ.

ಈ ಮೂಲಕ ಇಂಗ್ಲೆಂಡ್​ನ ಕ್ರಿಕೆಟ್​ ಟೂರ್ನಿಗೆ ಕಾಲಿಟ್ಟಿರುವ ಮುಂಬೈ ಇಂಡಿಯನ್ಸ್, ಮುಂಬರುವ ದಿ ಹಂಡ್ರೆಡ್ ಲೀಗ್​ನಲ್ಲಿ ಓವಲ್ ಇನ್ವಿನ್ಸಿಬಲ್ ತಂಡವನ್ನು MI ಓವಲ್​ ಹೆಸರಿನಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಆ್ಯಂಡ್ರೆ ರಸೆಲ್ ಆರ್ಭಟಕ್ಕೆ ಮ್ಯಾಕ್ಸ್​ವೆಲ್ ವಿಶ್ವ ದಾಖಲೆ ಉಡೀಸ್

ಇದರ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್​ನತ್ತ ಮುಖ ಮಾಡಿದ್ದು, ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡದ ಪಾಲನ್ನು ಖರೀದಿಸುವ ಪ್ರಯತ್ನದಲ್ಲಿದೆ. ಹೀಗಾಗಿ ಮುಂಬರುವ ದಿ ಹಂಡ್ರೆಡ್ ಲೀಗ್​ನಲ್ಲಿ MI ಓವಲ್, ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಹೆಸರಿನ ತಂಡಗಳು ಕಾಣಿಸಿಕೊಂಡರೆ ಅಚ್ಚರಿಪಡಬೇಕಿಲ್ಲ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?