AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup: ಟಿ20 ಸ್ವರೂಪದಲ್ಲಿ ಏಷ್ಯಾಕಪ್

Asia Cup 2025: 2025 ರಲ್ಲಿ ನಡೆಯುತ್ತಿರುವ 17ನೇ ಏಷ್ಯಾಕಪ್ ಟೂರ್ನಿ. 16 ಆವೃತ್ತಿಗಳಲ್ಲಿ ಕೇವಲ 2 ಬಾರಿ ಮಾತ್ರ ಟಿ20 ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದೆ. ಈ ವೇಳೆ  ಭಾರತ ತಂಡ ಒಂದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

Asia Cup: ಟಿ20 ಸ್ವರೂಪದಲ್ಲಿ ಏಷ್ಯಾಕಪ್
Asia Cup
TV9 Web
| Updated By: ಝಾಹಿರ್ ಯೂಸುಫ್|

Updated on:Jan 30, 2024 | 8:42 AM

Share

ಏಷ್ಯಾ ಕಪ್ 2025 ಟಿ20 ಸ್ವರೂಪದಲ್ಲೇ ನಡೆಯಲಿದೆ. 2026ರಲ್ಲಿ ಟಿ20 ವಿಶ್ವಕಪ್​ ಜರುಗಲಿದ್ದು, ಹೀಗಾಗಿ ಏಷ್ಯಾಕಪ್ ಟೂರ್ನಿಯನ್ನು (Asia Cup 2025) ಚುಟುಕು ಸ್ವರೂಪದಲ್ಲಿ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ನಿರ್ಧರಿಸಿದೆ. ವಿಶೇಷ ಎಂದರೆ 2023ರ ಏಷ್ಯಾಕಪ್​ ಅನ್ನು ಏಕದಿನ ಮಾದರಿಯಲ್ಲಿ ಆಯೋಜಿಸಲಾಗಿತ್ತು.

ಅಂದರೆ ಇಲ್ಲಿ ಆಯಾ ಏಷ್ಯಾಕಪ್​ನ ನಂತರ ಐಸಿಸಿ ಟೂರ್ನಿ ಜರುಗುತ್ತಿದ್ದರೆ ಅದೇ ಸ್ವರೂಪದಲ್ಲಿ ಟೂರ್ನಿಯನ್ನು ಆಯೋಜಿಸಲಾಗುತ್ತದೆ. 2022ರಲ್ಲಿ ಟಿ20 ವಿಶ್ವಕಪ್ ನಡೆದಿದ್ದರಿಂದ ಅದಕ್ಕೂ ಮುಂಚಿತವಾಗಿ ಏಷ್ಯಾಕಪ್ ಅನ್ನು ಕೂಡ ಟಿ20 ಮಾದರಿಯಲ್ಲಿ ಆಯೋಜಿಸಲಾಗಿತ್ತು.

ಹಾಗೆಯೇ 2023 ರ ಏಕದಿನ ವಿಶ್ವಕಪ್​ಗೂ ಮುನ್ನ ಏಷ್ಯಾಕಪ್ ಅನ್ನು​ 50 ಓವರ್​ಗಳಲ್ಲಿ ನಡೆಸಲಾಗಿತ್ತು. ಇದೀಗ 2025 ರ ಏಷ್ಯಾಕಪ್​ ಅನ್ನು ಟಿ20 ವಿಶ್ವಕಪ್​ ಹಿನ್ನಲೆಯಲ್ಲಿ ಟಿ20 ಸ್ವರೂಪದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಯುಎಇ-ಒಮಾನ್​ನಲ್ಲಿ ಏಷ್ಯಾಕಪ್​?

ಮುಂಬರುವ ಏಷ್ಯಾಕಪ್ ಟೂರ್ನಿ ಆಯೋಜನೆ ಹಕ್ಕಿಗಾಗಿ ಯುಎಇ ಹಾಗೂ ಒಮಾನ್ ಕ್ರಿಕೆಟ್ ಬೋರ್ಡ್​ಗಳು ಬಿಡ್ಡಿಂಗ್ ನಡೆಸಿದೆ. ಈಗಾಗಲೇ ಯುಎಇ ಐದು ಬಾರಿ ಏಷ್ಯಾಕಪ್​ಗೆ ಆತಿಥ್ಯವಹಿಸಿದೆ. ಹೀಗಾಗಿ 2025 ರ ಟೂರ್ನಿಯನ್ನು ಒಮಾನ್-ಯುಎಇ ಜಂಟಿಯಾಗಿ ಆಯೋಜಿಸುವ ಸಾಧ್ಯತೆಯಿದೆ.

17ನೇ ಏಷ್ಯಾಕಪ್ ಟೂರ್ನಿ:

2025 ರಲ್ಲಿ ನಡೆಯುತ್ತಿರುವ 17ನೇ ಏಷ್ಯಾಕಪ್ ಟೂರ್ನಿ. 16 ಆವೃತ್ತಿಗಳಲ್ಲಿ ಕೇವಲ 2 ಬಾರಿ ಮಾತ್ರ ಟಿ20 ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದೆ. ಈ ವೇಳೆ  ಭಾರತ ತಂಡ ಒಂದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಅತೀ ಹೆಚ್ಚು ಬಾರಿ ಏಷ್ಯಾಕಪ್ ಗೆದ್ದ  ದಾಖಲೆ ಕೂಡ ಟೀಮ್ ಇಂಡಿಯಾ ಹೆಸರಿನಲ್ಲಿದೆ. ಭಾರತ ತಂಡವು ಇದುವರೆಗೆ 8 ಬಾರಿ ಏಷ್ಯನ್ ಚಾಂಪಿಯನ್ಸ್​​​ ಆಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ: IND vs ENG 2nd Test: ಟೀಮ್ ಇಂಡಿಯಾದ ನಾಲ್ವರು ಸ್ಟಾರ್ ಆಟಗಾರರು ಅಲಭ್ಯ

ಇದೀಗ ಮತ್ತೆ ಟಿ20 ಸ್ವರೂಪದಲ್ಲಿ ಏಷ್ಯಾಕಪ್ ಆಯೋಜನೆಗೆ ಸಿದ್ಧತೆಗಳು ಶುರುವಾಗಿದ್ದು, ಆಯೋಜನೆ ಹಕ್ಕಿನ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಶೀಘ್ರದಲ್ಲೇ ಸಭೆ ಸೇರಲಿದೆ ಎಂದು ತಿಳಿದು ಬಂದಿದೆ.

Published On - 8:37 am, Tue, 30 January 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್