AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup: ಟಿ20 ಸ್ವರೂಪದಲ್ಲಿ ಏಷ್ಯಾಕಪ್

Asia Cup 2025: 2025 ರಲ್ಲಿ ನಡೆಯುತ್ತಿರುವ 17ನೇ ಏಷ್ಯಾಕಪ್ ಟೂರ್ನಿ. 16 ಆವೃತ್ತಿಗಳಲ್ಲಿ ಕೇವಲ 2 ಬಾರಿ ಮಾತ್ರ ಟಿ20 ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದೆ. ಈ ವೇಳೆ  ಭಾರತ ತಂಡ ಒಂದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

Asia Cup: ಟಿ20 ಸ್ವರೂಪದಲ್ಲಿ ಏಷ್ಯಾಕಪ್
Asia Cup
TV9 Web
| Edited By: |

Updated on:Jan 30, 2024 | 8:42 AM

Share

ಏಷ್ಯಾ ಕಪ್ 2025 ಟಿ20 ಸ್ವರೂಪದಲ್ಲೇ ನಡೆಯಲಿದೆ. 2026ರಲ್ಲಿ ಟಿ20 ವಿಶ್ವಕಪ್​ ಜರುಗಲಿದ್ದು, ಹೀಗಾಗಿ ಏಷ್ಯಾಕಪ್ ಟೂರ್ನಿಯನ್ನು (Asia Cup 2025) ಚುಟುಕು ಸ್ವರೂಪದಲ್ಲಿ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ನಿರ್ಧರಿಸಿದೆ. ವಿಶೇಷ ಎಂದರೆ 2023ರ ಏಷ್ಯಾಕಪ್​ ಅನ್ನು ಏಕದಿನ ಮಾದರಿಯಲ್ಲಿ ಆಯೋಜಿಸಲಾಗಿತ್ತು.

ಅಂದರೆ ಇಲ್ಲಿ ಆಯಾ ಏಷ್ಯಾಕಪ್​ನ ನಂತರ ಐಸಿಸಿ ಟೂರ್ನಿ ಜರುಗುತ್ತಿದ್ದರೆ ಅದೇ ಸ್ವರೂಪದಲ್ಲಿ ಟೂರ್ನಿಯನ್ನು ಆಯೋಜಿಸಲಾಗುತ್ತದೆ. 2022ರಲ್ಲಿ ಟಿ20 ವಿಶ್ವಕಪ್ ನಡೆದಿದ್ದರಿಂದ ಅದಕ್ಕೂ ಮುಂಚಿತವಾಗಿ ಏಷ್ಯಾಕಪ್ ಅನ್ನು ಕೂಡ ಟಿ20 ಮಾದರಿಯಲ್ಲಿ ಆಯೋಜಿಸಲಾಗಿತ್ತು.

ಹಾಗೆಯೇ 2023 ರ ಏಕದಿನ ವಿಶ್ವಕಪ್​ಗೂ ಮುನ್ನ ಏಷ್ಯಾಕಪ್ ಅನ್ನು​ 50 ಓವರ್​ಗಳಲ್ಲಿ ನಡೆಸಲಾಗಿತ್ತು. ಇದೀಗ 2025 ರ ಏಷ್ಯಾಕಪ್​ ಅನ್ನು ಟಿ20 ವಿಶ್ವಕಪ್​ ಹಿನ್ನಲೆಯಲ್ಲಿ ಟಿ20 ಸ್ವರೂಪದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಯುಎಇ-ಒಮಾನ್​ನಲ್ಲಿ ಏಷ್ಯಾಕಪ್​?

ಮುಂಬರುವ ಏಷ್ಯಾಕಪ್ ಟೂರ್ನಿ ಆಯೋಜನೆ ಹಕ್ಕಿಗಾಗಿ ಯುಎಇ ಹಾಗೂ ಒಮಾನ್ ಕ್ರಿಕೆಟ್ ಬೋರ್ಡ್​ಗಳು ಬಿಡ್ಡಿಂಗ್ ನಡೆಸಿದೆ. ಈಗಾಗಲೇ ಯುಎಇ ಐದು ಬಾರಿ ಏಷ್ಯಾಕಪ್​ಗೆ ಆತಿಥ್ಯವಹಿಸಿದೆ. ಹೀಗಾಗಿ 2025 ರ ಟೂರ್ನಿಯನ್ನು ಒಮಾನ್-ಯುಎಇ ಜಂಟಿಯಾಗಿ ಆಯೋಜಿಸುವ ಸಾಧ್ಯತೆಯಿದೆ.

17ನೇ ಏಷ್ಯಾಕಪ್ ಟೂರ್ನಿ:

2025 ರಲ್ಲಿ ನಡೆಯುತ್ತಿರುವ 17ನೇ ಏಷ್ಯಾಕಪ್ ಟೂರ್ನಿ. 16 ಆವೃತ್ತಿಗಳಲ್ಲಿ ಕೇವಲ 2 ಬಾರಿ ಮಾತ್ರ ಟಿ20 ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದೆ. ಈ ವೇಳೆ  ಭಾರತ ತಂಡ ಒಂದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಅತೀ ಹೆಚ್ಚು ಬಾರಿ ಏಷ್ಯಾಕಪ್ ಗೆದ್ದ  ದಾಖಲೆ ಕೂಡ ಟೀಮ್ ಇಂಡಿಯಾ ಹೆಸರಿನಲ್ಲಿದೆ. ಭಾರತ ತಂಡವು ಇದುವರೆಗೆ 8 ಬಾರಿ ಏಷ್ಯನ್ ಚಾಂಪಿಯನ್ಸ್​​​ ಆಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ: IND vs ENG 2nd Test: ಟೀಮ್ ಇಂಡಿಯಾದ ನಾಲ್ವರು ಸ್ಟಾರ್ ಆಟಗಾರರು ಅಲಭ್ಯ

ಇದೀಗ ಮತ್ತೆ ಟಿ20 ಸ್ವರೂಪದಲ್ಲಿ ಏಷ್ಯಾಕಪ್ ಆಯೋಜನೆಗೆ ಸಿದ್ಧತೆಗಳು ಶುರುವಾಗಿದ್ದು, ಆಯೋಜನೆ ಹಕ್ಕಿನ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಶೀಘ್ರದಲ್ಲೇ ಸಭೆ ಸೇರಲಿದೆ ಎಂದು ತಿಳಿದು ಬಂದಿದೆ.

Published On - 8:37 am, Tue, 30 January 24

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ