Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭ್ಯಾಸಕ್ಕೆ ಆಗಮಿಸಿದ ವಿರಾಟ್ ಕೊಹ್ಲಿಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ..!

India vs England, 2nd ODI: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ಇಂದು (ಫೆ.9) ಬಾರಾಬತಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್​​ಗಳ ಜಯ ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

ಅಭ್ಯಾಸಕ್ಕೆ ಆಗಮಿಸಿದ ವಿರಾಟ್ ಕೊಹ್ಲಿಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ..!
Virat Kohli
Follow us
ಝಾಹಿರ್ ಯೂಸುಫ್
|

Updated on:Feb 09, 2025 | 7:56 AM

ಭಾರತ ಮತ್ತು ಇಂಗ್ಲೆಂಡ್ ನಡುವಣ ದ್ವಿತೀಯ ಏಕದಿನ ಪಂದ್ಯವು ಇಂದು (ಫೆ.9) ನಡೆಯಲಿದೆ. ಕಟಕ್​ನ ಬಾರಾಬತಿ ಕ್ರೀಡಾಂಗಣದಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಮೊಣಕಾಲು ನೋವಿನ ಕಾರಣ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಕೊಹ್ಲಿ ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದು, ಅದರಂತೆ ಶನಿವಾರ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಹೀಗೆ ಅಭ್ಯಾಸಕ್ಕೆ ಆಗಮಿಸಿದ ಕಿಂಗ್ ಕೊಹ್ಲಿಯನ್ನು ಅಭಿಮಾನಿಗಳು ಹರ್ಷೋದ್ಘಾರದೊಂದಿಗೆ ಸ್ವಾಗತಿಸಿದ್ದು ವಿಶೇಷವಾಗಿತ್ತು. ಬಾರಾಬತಿ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸುತ್ತಿರುವುದನ್ನು ವೀಕ್ಷಿಸಲು ಕೆಲ ಗೇಟ್​ಗಳನ್ನು ಓಪನ್​ ಮಾಡಲಾಗಿತ್ತು.

ಇತ್ತ ಭಾರತೀಯ ಆಟಗಾರರ ಕಸರತ್ತನ್ನು ವೀಕ್ಷಿಸಲು ಸ್ಟೇಡಿಯಂಗೆ ಅಭಿಮಾನಿಗಳ ದಂಡೇ ಆಗಮಿಸಿದೆ. ಅದರಲ್ಲೂ ಕಿಂಗ್ ಕೊಹ್ಲಿಯ ಫ್ಯಾನ್ಸ್ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಇದಾಗ್ಯೂ ವಿರಾಟ್ ಕೊಹ್ಲಿ ಶನಿವಾರ ಅಭ್ಯಾಸ ಮಾಡಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಖಚಿತತೆ ಇರಲಿಲ್ಲ.

ಹೀಗಾಗಿ ವಿರಾಟ್ ಕೊಹ್ಲಿ ಆಗಮನಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದರು. ಈ ಕಾಯುವಿಕೆಗೆ ನಿರಾಸೆಯಾಗಲಿಲ್ಲ. ಟೀಮ್ ಇಂಡಿಯಾ ಅಭ್ಯಾಸ ಆರಂಭಿಸಿದ ಕೆಲ ಹೊತ್ತಿನ ಬಳಿಕ ಕಿಂಗ್ ಕೊಹ್ಲಿಯ ಎಂಟ್ರಿಯಾಗಿದೆ. ಇತ್ತ ವಿರಾಟ್ ಕೊಹ್ಲಿ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹರ್ಷೋದ್ಘಾರ ಮುಗಿಲು ಮುಟ್ಟಿದೆ.  ಇದೀಗ ವಿರಾಟ್ ಕೊಹ್ಲಿ ಅಭಿಮಾನಿಗಳ ಭರ್ಜರಿ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿರಾಟ್ ಕೊಹ್ಲಿಯ ಕ್ರೇಝ್:

ಎಷ್ಟು ಗಂಟೆಗೆ ಪಂದ್ಯ?

ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಏಕದಿನ ಪಂದ್ಯವು ಮಧ್ಯಾಹ್ನ 1.30 ಕ್ಕೆ ಶುರುವಾಗಲಿದೆ. ಅದಕ್ಕೂ ಮುನ್ನ 1 ಗಂಟೆಗೆ ಟಾಸ್ ಪ್ರಕ್ರಿಯೆ ಜರುಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ಗಳಲ್ಲಿ ಹಾಗೂ ಡಿಸ್ನಿ ಹಾಟ್​ಸ್ಟಾರ್ ಆ್ಯಪ್​ ಮತ್ತು ವೆಬ್​ಸೈಟ್​ನಲ್ಲಿ ಲೈವ್ ವೀಕ್ಷಿಸಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

ಇದನ್ನೂ ಓದಿ: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕೊಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

Published On - 7:53 am, Sun, 9 February 25

ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ
ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ