AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಕೆಳಗಾದ ಲೆಕ್ಕಾಚಾರ… ನನ್ನ ಮನೆಗೇನು ತರಲ್ಲ ಎಂದು ಕಿಡಿಕಾರಿದ ಅಮೀರ್

T20 World Cup 2026: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್​ಗಳ ಅಮೋಘ ಗೆಲುವು ದಾಖಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ತಲೆಕೆಳಗಾದ ಲೆಕ್ಕಾಚಾರ... ನನ್ನ ಮನೆಗೇನು ತರಲ್ಲ ಎಂದು ಕಿಡಿಕಾರಿದ ಅಮೀರ್
Mohammad Amir
ಝಾಹಿರ್ ಯೂಸುಫ್
|

Updated on: Mar 09, 2026 | 12:58 PM

Share

T20 World Cup 2026: ಟಿ20 ವಿಶ್ವಕಪ್​ನ ಆರಂಭದಿಂದಲೂ ಈ ಬಾರಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರಲ್ಲ ಎಂದು ಭವಿಷ್ಯ ನುಡಿಯುತ್ತಾ ಬಂದಿದ್ದ ಪಾಕಿಸ್ತಾನ್ ಕ್ರಿಕೆಟಿಗ ಮೊಹಮ್ಮದ್ ಅಮಿರ್ ಇದೀಗ ಪೇಚಿಗೆ ಸಿಲುಕಿದ್ದಾರೆ. ಅದರಲ್ಲೂ ಸೆಮಿಫೈನಲ್​​ ತಲುಪಲ್ಲ ಎಂದಿದ್ದ ಅಮಿರ್ ಲೆಕ್ಕಾಚಾರವನ್ನು ಟೀಮ್ ಇಂಡಿಯಾ ತಲೆ ಕೆಳಗೆ ಮಾಡಿತ್ತು.

ಇದಾಗ್ಯೂ ಸೆಮಿಫೈನಲ್​ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆದ್ದೇ ಗೆಲ್ಲುತ್ತೆ ಎಂದು ಮೊಹಮ್ಮದ್ ಅಮಿರ್ ಖಾಸಗಿ ಚಾನೆಲ್​ನಲ್ಲಿ ಹೇಳಿಕೊಂಡಿದ್ದರು. ಆದರೆ ಅಲ್ಲೂ ಕೂಡ ಅವರ ಲೆಕ್ಕಾಚಾರ ತಲೆಕೆಳಗಾಯಿತು. ಇಂಗ್ಲೆಂಡ್ ವಿರುದ್ಧ 7 ರನ್​ಗಳ ಜಯದೊಂದಿಗೆ ಟೀಮ್ ಇಂಡಿಯಾ ಫೈನಲ್​ಗೇರಿತು.

ಇನ್ನು ಫೈನಲ್ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡ ಯಾವುದು ಎಂಬ ಪ್ರಶ್ನೆಗೂ ಮೊಹಮ್ಮದ್ ಅಮಿರ್ ಕಡೆಯಿಂದ ಬಂದಂತಹ ಉತ್ತರ ನ್ಯೂಝಿಲೆಂಡ್. ಭಾರತ ತಂಡವನ್ನು ನ್ಯೂಝಿಲೆಂಡ್ ಸೋಲಿಸಿಯೇ ಸೋಲಿಸುತ್ತದೆ ಎಂದು ಪಾಕ್ ಕ್ರಿಕೆಟಿಗ ಭವಿಷ್ಯ ನುಡಿದಿದ್ದರು. ಈ ಭವಿಷ್ಯವನ್ನು ಕೂಡ ಟೀಮ್ ಇಂಡಿಯಾ ಸುಳ್ಳಾಗಿಸಿದೆ.

ಅಹಮದಾಬಾದ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಫೈನಲ್ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 255 ರನ್​ಗಳು. ಈ ಮೂಲಕ ಭಾರತ ತಂಡ ಗೆಲುವನ್ನು ಮೊದಲ ಇನಿಂಗ್ಸ್​ನಲ್ಲೇ ಖಚಿತಪಡಿಸಿಕೊಂಡಿದ್ದರು.

ಇನ್ನು ಈ ಬೃಹತ್ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡ 19 ಓವರ್​ಗಳಲ್ಲಿ ಕೇವಲ 159 ರನ್​ಗಳಿಸಿ ಆಲೌಟ್ ಆಗಿತ್ತು. ಈ ಮೂಲಕ ಟೀಮ್ ಇಂಡಿಯಾ 96 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನ ಬೆನ್ನಲ್ಲೇ ಖಾಸಗಿ ಚಾನೆಲ್​ನ ಕಾರ್ಯಕ್ರಮದ ನಡುವೆ ಮೊಹಮ್ಮದ್ ಅಮಿರ್ ಜೊತೆ ವ್ಯಕ್ತಿಯೋರ್ವರು ಪಂದ್ಯದ ಫಲಿತಾಂಶದ ಬಗ್ಗೆ ಕೇಳಿದ್ದಾರೆ.

ನಿಮ್ಮ ಭವಿಷ್ಯ ಸುಳ್ಳಾಗಿದೆ, ಭಾರತ ತಂಡ ಗೆಲುವು ದಾಖಲಿಸಿದೆ. ಈ ಬಗ್ಗೆ ಈಗ ನೀವೇನು ಹೇಳುತ್ತೀರಾ ಎಂಬ ಪ್ರಶ್ನೆಯನ್ನು ಅಮಿರ್ ಮುಂದಿಡಲಾಗಿತ್ತು.

ಈ ಸರಳ ಪ್ರಶ್ನೆಗೆ ಕುಪಿತಗೊಂಡ ಮೊಹಮ್ಮದ್ ಅಮಿರ್, “ಅವರು (ಭಾರತ) ಗೆದ್ದರೆ ಟ್ರೋಫಿಯನ್ನು ನನ್ನ ಮನೆಗೆ ತರುವುದಿಲ್ಲ, ಅವರ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ ಅಷ್ಟೆ,” ಎಂದು ಕಿಡಿಕಾರಿದ್ದಾರೆ.

ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು. ಇದೀಗ ಮೊಹಮ್ಮದ್ ಅಮಿರ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!