AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಕೆಳಗಾದ ಲೆಕ್ಕಾಚಾರ… ನನ್ನ ಮನೆಗೇನು ತರಲ್ಲ ಎಂದು ಕಿಡಿಕಾರಿದ ಅಮೀರ್

T20 World Cup 2026: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್​ಗಳ ಅಮೋಘ ಗೆಲುವು ದಾಖಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ತಲೆಕೆಳಗಾದ ಲೆಕ್ಕಾಚಾರ... ನನ್ನ ಮನೆಗೇನು ತರಲ್ಲ ಎಂದು ಕಿಡಿಕಾರಿದ ಅಮೀರ್
Mohammad Amir
ಝಾಹಿರ್ ಯೂಸುಫ್
|

Updated on: Mar 09, 2026 | 12:58 PM

Share

T20 World Cup 2026: ಟಿ20 ವಿಶ್ವಕಪ್​ನ ಆರಂಭದಿಂದಲೂ ಈ ಬಾರಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರಲ್ಲ ಎಂದು ಭವಿಷ್ಯ ನುಡಿಯುತ್ತಾ ಬಂದಿದ್ದ ಪಾಕಿಸ್ತಾನ್ ಕ್ರಿಕೆಟಿಗ ಮೊಹಮ್ಮದ್ ಅಮಿರ್ ಇದೀಗ ಪೇಚಿಗೆ ಸಿಲುಕಿದ್ದಾರೆ. ಅದರಲ್ಲೂ ಸೆಮಿಫೈನಲ್​​ ತಲುಪಲ್ಲ ಎಂದಿದ್ದ ಅಮಿರ್ ಲೆಕ್ಕಾಚಾರವನ್ನು ಟೀಮ್ ಇಂಡಿಯಾ ತಲೆ ಕೆಳಗೆ ಮಾಡಿತ್ತು.

ಇದಾಗ್ಯೂ ಸೆಮಿಫೈನಲ್​ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆದ್ದೇ ಗೆಲ್ಲುತ್ತೆ ಎಂದು ಮೊಹಮ್ಮದ್ ಅಮಿರ್ ಖಾಸಗಿ ಚಾನೆಲ್​ನಲ್ಲಿ ಹೇಳಿಕೊಂಡಿದ್ದರು. ಆದರೆ ಅಲ್ಲೂ ಕೂಡ ಅವರ ಲೆಕ್ಕಾಚಾರ ತಲೆಕೆಳಗಾಯಿತು. ಇಂಗ್ಲೆಂಡ್ ವಿರುದ್ಧ 7 ರನ್​ಗಳ ಜಯದೊಂದಿಗೆ ಟೀಮ್ ಇಂಡಿಯಾ ಫೈನಲ್​ಗೇರಿತು.

ಇನ್ನು ಫೈನಲ್ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡ ಯಾವುದು ಎಂಬ ಪ್ರಶ್ನೆಗೂ ಮೊಹಮ್ಮದ್ ಅಮಿರ್ ಕಡೆಯಿಂದ ಬಂದಂತಹ ಉತ್ತರ ನ್ಯೂಝಿಲೆಂಡ್. ಭಾರತ ತಂಡವನ್ನು ನ್ಯೂಝಿಲೆಂಡ್ ಸೋಲಿಸಿಯೇ ಸೋಲಿಸುತ್ತದೆ ಎಂದು ಪಾಕ್ ಕ್ರಿಕೆಟಿಗ ಭವಿಷ್ಯ ನುಡಿದಿದ್ದರು. ಈ ಭವಿಷ್ಯವನ್ನು ಕೂಡ ಟೀಮ್ ಇಂಡಿಯಾ ಸುಳ್ಳಾಗಿಸಿದೆ.

ಅಹಮದಾಬಾದ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಫೈನಲ್ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 255 ರನ್​ಗಳು. ಈ ಮೂಲಕ ಭಾರತ ತಂಡ ಗೆಲುವನ್ನು ಮೊದಲ ಇನಿಂಗ್ಸ್​ನಲ್ಲೇ ಖಚಿತಪಡಿಸಿಕೊಂಡಿದ್ದರು.

ಇನ್ನು ಈ ಬೃಹತ್ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡ 19 ಓವರ್​ಗಳಲ್ಲಿ ಕೇವಲ 159 ರನ್​ಗಳಿಸಿ ಆಲೌಟ್ ಆಗಿತ್ತು. ಈ ಮೂಲಕ ಟೀಮ್ ಇಂಡಿಯಾ 96 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನ ಬೆನ್ನಲ್ಲೇ ಖಾಸಗಿ ಚಾನೆಲ್​ನ ಕಾರ್ಯಕ್ರಮದ ನಡುವೆ ಮೊಹಮ್ಮದ್ ಅಮಿರ್ ಜೊತೆ ವ್ಯಕ್ತಿಯೋರ್ವರು ಪಂದ್ಯದ ಫಲಿತಾಂಶದ ಬಗ್ಗೆ ಕೇಳಿದ್ದಾರೆ.

ನಿಮ್ಮ ಭವಿಷ್ಯ ಸುಳ್ಳಾಗಿದೆ, ಭಾರತ ತಂಡ ಗೆಲುವು ದಾಖಲಿಸಿದೆ. ಈ ಬಗ್ಗೆ ಈಗ ನೀವೇನು ಹೇಳುತ್ತೀರಾ ಎಂಬ ಪ್ರಶ್ನೆಯನ್ನು ಅಮಿರ್ ಮುಂದಿಡಲಾಗಿತ್ತು.

ಈ ಸರಳ ಪ್ರಶ್ನೆಗೆ ಕುಪಿತಗೊಂಡ ಮೊಹಮ್ಮದ್ ಅಮಿರ್, “ಅವರು (ಭಾರತ) ಗೆದ್ದರೆ ಟ್ರೋಫಿಯನ್ನು ನನ್ನ ಮನೆಗೆ ತರುವುದಿಲ್ಲ, ಅವರ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ ಅಷ್ಟೆ,” ಎಂದು ಕಿಡಿಕಾರಿದ್ದಾರೆ.

ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು. ಇದೀಗ ಮೊಹಮ್ಮದ್ ಅಮಿರ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!