AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಗಂಭೀರ್ ನೀಡಿದ ಎಚ್ಚರಿಕೆ..!

ಸ್ಟೀವ್ ಹಾರ್ಮಿಸನ್ ಇಂಗ್ಲೆಂಡ್ ಪರ 63 ಟೆಸ್ಟ್​, 58 ಏಕದಿನ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಟೆಸ್ಟ್​ನಲ್ಲಿ 226 ವಿಕೆಟ್ ಕಬಳಿಸಿದರೆ, ಏಕದಿನ ಕ್ರಿಕೆಟ್​ನಲ್ಲಿ 76 ವಿಕೆಟ್ ಪಡೆದಿದ್ದಾರೆ. ಇನ್ನು ಎರಡು ಟಿ20 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಹಾರ್ಮಿಸನ್ 1 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಇದೀಗ ಕಾಮೆಂಟೇಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಹಾರ್ಮಿಸನ್ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ನೀಡಿದ ಹೇಳಿಕೆಯನ್ನು ವಿಮರ್ಶಿಸಿದ್ದಾರೆ.

ಇದು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಗಂಭೀರ್ ನೀಡಿದ ಎಚ್ಚರಿಕೆ..!
Virat Kohli - Rohit -Gambhir
ಝಾಹಿರ್ ಯೂಸುಫ್
|

Updated on: Mar 14, 2026 | 8:42 AM

Share

2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದ ನಂತರ, ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಆಟಗಾರರ ವೈಯಕ್ತಿಕ ಮೈಲಿಗಲ್ಲುಗಳ (ಶತಕ, ಅರ್ಧಶತಕ) ಕುರಿತು ಕಟುವಾದ ಮಾತುಗಳನ್ನಾಡಿದ್ದರು. ಭಾರತೀಯ ಕ್ರಿಕೆಟ್‌ನಲ್ಲಿ ಬಹಳ ಕಾಲದಿಂದ ನಾವು ವೈಯಕ್ತಿಕ ಮೈಲಿಗಲ್ಲುಗಳ ಬಗ್ಗೆಯೇ ಮಾತನಾಡುತ್ತಿದ್ದೇವೆ. ಇನ್ಮುಂದೆ ವೈಯಕ್ತಿಕ ದಾಖಲೆಗಳಿಗಾಗಿ ಆಡುವುದನ್ನು ನಿಲ್ಲಿಸಿ, ಟ್ರೋಫಿ ಗೆಲುವುದನ್ನು ಆಚರಿಸಬೇಕೆಂದು ಎಂದು ಗಂಭೀರ್ ಹೇಳಿಕೆ ನೀಡಿದ್ದರು.

ಗೌತಮ್ ಗಂಭೀರ್ ಅವರ ಈ ಹೇಳಿಕೆಯು ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ನೀಡಿದ ಎಚ್ಚರಿಕೆ ಎಂದು ಇಂಗ್ಲೆಂಡ್‌ನ ಮಾಜಿ ವೇಗಿ ಸ್ಟೀವ್ ಹಾರ್ಮಿಸನ್ ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್ ಮತ್ತು ಕೊಹ್ಲಿ ಭಾರತೀಯ ಕ್ರಿಕೆಟ್‌ನ ದಿಗ್ಗಜರು. ಅತಿ ಹೆಚ್ಚು ಶತಕ ಮತ್ತು ದಾಖಲೆಗಳನ್ನು ಹೊಂದಿರುವವರು ಅವರೇ. ಆದ್ದರಿಂದ ಗಂಭೀರ್ ಅವರ ಮಾತುಗಳು ನೇರವಾಗಿ ಇವರಿಬ್ಬರಿಗೇ ಅನ್ವಯಿಸುತ್ತವೆ ಎಂದು ಹಾರ್ಮಿಸನ್ ಹೇಳಿದ್ದಾರೆ.

ಇಲ್ಲಿ ಒಂದು ಗೆಲುವಿನ ಬಳಿಕ ಇಂತಹ ಹೇಳಿಕೆ ನೀಡಬೇಕಾದ ಅವಶ್ಯಕತೆ ಇರಲಿಲ್ಲ. ಅದರಲ್ಲೂ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ದಾಖಲೆಗಳಿಗಾಗಿ ಆಡಿಲ್ಲ ಎಂಬುದು ಗಂಭೀರ್​ಗೆ ಗೊತ್ತಿತ್ತು. ಇದಾಗ್ಯೂ ಅವರು ಇನ್ಮುಂದೆ ದಾಖಲೆಗಳಿಗಾಗಿ ಆಡುವುದನ್ನು ನಿಲ್ಲಿಸಬೇಕೆಂದು ಹೇಳಿರುವುದು ಯಾರಿಗೆ? ಎಂಬ ಪ್ರಶ್ನೆ ಮೂಡುತ್ತದೆ.

ಈ ಪ್ರಶ್ನೆಗೆ ಉತ್ತರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ. ಈ ಇಬ್ಬರನ್ನು ಗುರಿಯಾಗಿಸಿ ಗಂಭೀರ್ ಪರೋಕ್ಷ ಟಾಂಗ್ ನೀಡಿದ್ದಾರೆ. ಏಕೆಂದರೆ ರೋಹಿತ್ ಹಾಗೂ ಕೊಹ್ಲಿ ಹೆಸರಿನಲ್ಲಿ ಹಲವು ದಾಖಲೆಗಳಿವೆ. ಇದೀಗ ಅವರು ತಂಡದಲ್ಲಿಲ್ಲ. ಮುಂದೆ ಏಕದಿನ ಸರಣಿ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದಕ್ಕೂ ಮುನ್ನ ಇಬ್ಬರಿಗೆ ದಾಖಲೆಗಳನ್ನು ಬದಿಗಿರಿಸಿ ಟ್ರೋಫಿ ಗೆಲ್ಲಲು ನೋಡಬೇಕು ಎಂದು ಗೌತಮ್ ಗಂಭೀರ್ ಪರೋಕ್ಷ ಎಚ್ಚರಿಕೆ ರವಾನಿಸಿದ್ದಾರೆ ಎಂದು ಸ್ಟೀವ್ ಹಾರ್ಮಿಸನ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಮುಂದಿನ ಏಕದಿನ ಸರಣಿಗಳಿಗೆ ಈ ಇಬ್ಬರು ಹಿರಿಯ ಆಟಗಾರರು ಮರಳಿದಾಗ ಗೌತಮ್ ಗಂಭೀರ್ ಅವರ ಈ ಕಠಿಣ ನಿಲುವು ತಂಡದ ಒಳಗಿನ ವಾತಾವರಣದ ಮೇಲೆ ಹೇಗೆ ಪ್ರಭಾವ ಬೀರಬಹುದು ಎಂದು ಸಹ ಹಾರ್ಮಿಸನ್ ಆಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭಾರತವನ್ನು ಹೊರಹಾಕಬಹುದಿತ್ತು, ಸೌತ್ ಆಫ್ರಿಕನ್ನರು ದಡ್ಡರು..!

ಒಟ್ಟಾರೆಯಾಗಿ, ಗಂಭೀರ್ ಅವರು “ತಂಡ ಮೊದಲು, ವೈಯಕ್ತಿಕ ದಾಖಲೆ ಆಮೇಲೆ” ಎಂಬ ಹೊಸ ಸಂಸ್ಕೃತಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದು, ಇದರ ನಡುವೆ ಅವರು ನೀಡಿದ ಹೇಳಿಕೆಯು ನೇರವಾಗಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರನ್ನು ಗುರಿಯಾಗಿಸಿದೆ. ಗಂಭೀರ್ ಅವರ ನಡೆಯು ಉತ್ತಮವಾಗಿದ್ದರೂ ಇಂತಹ ಹೇಳಿಕೆಗಳು ತಂಡದ ಡ್ರೆಸ್ಸಿಂಗ್ ರೂಮ್​ನ ವಾತಾವರಣದ ಮೇಲೆ ಪರಿಣಾಮ ಬೀರಬಹುದು ಎಂದು ಸ್ಟೀವ್ ಹಾರ್ಮಿಸನ್ ಅಭಿಪ್ರಾಯಪಟ್ಟಿದ್ದಾರೆ.

Follow Us