AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇದಕ್ಕಾಗಿಯೇ ಈ ನಿಯಮ ಇರೋದು: ರೋಹಿತ್, ಧೋನಿಗೆ ಫಾಫ್ ಡುಪ್ಲೆಸಿಸ್ ತಿರುಗೇಟು

IPL 2025 DC vs LSG: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ನಾಲ್ಕನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಅಶುತೋಷ್ ಶರ್ಮಾ. ಬದಲಿ ಆಟಗಾರನಾಗಿ ಮೈದಾನಕ್ಕಿಳಿದ ಅಶುತೋಷ್ ಕೇವಲ 31 ಎಸೆತಗಳಲ್ಲಿ ಅಜೇಯ 66 ರನ್ ಬಾರಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಟ್ಟರು.

IPL 2025: ಇದಕ್ಕಾಗಿಯೇ ಈ ನಿಯಮ ಇರೋದು: ರೋಹಿತ್, ಧೋನಿಗೆ ಫಾಫ್ ಡುಪ್ಲೆಸಿಸ್ ತಿರುಗೇಟು
Faf Du Plessis
ಝಾಹಿರ್ ಯೂಸುಫ್
|

Updated on:Mar 25, 2025 | 9:41 AM

Share

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಸೀಸನ್-18 ರಲ್ಲಿ ಶುಭಾರಂಭ ಮಾಡಿದೆ. ಅದು ಸಹ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನ ರೋಚಕ ಜಯ ಸಾಧಿಸುವ ಮೂಲಕ. ವಿಶಾಖಪಟ್ಟಣದ ವೈಎಸ್​ಆರ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ (LSG) 20 ಓವರ್​ಗಳಲ್ಲಿ 209 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 7 ರನ್​ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತು. ಇನ್ನು 65 ರನ್ ಆಗುವಷ್ಟರಲ್ಲಿ ವಿಕೆಟ್​ಗಳ ಸಂಖ್ಯೆ 5 ಕ್ಕೇರಿತು. ಈ ಹಂತದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಅಶುತೋಷ್ ಶರ್ಮಾ ಕೇವಲ 31 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 66 ರನ್ ಬಾರಿಸಿದರು. ಅಲ್ಲದೆ 19.3 ಓವರ್​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಗೆಲುವು ತಂದುಕೊಟ್ಟರು.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

ಅಶುತೋಷ್ ಶರ್ಮಾ ಝಲಕ್:

ಈ ಗೆಲುವಿನ ಬಳಿಕ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಉಪನಾಯಕ ಫಾಫ್ ಡುಪ್ಲೆಸಿಸ್, ಇದೊಂದು ಅದ್ಭುತ ಪಂದ್ಯವಾಗಿತ್ತು ಎಂದಿದ್ದಾರೆ. ಅಲ್ಲದೆ ಬಹಳಷ್ಟು ಕ್ರಿಕೆಟಿಗರು ಐಪಿಎಲ್‌ನಲ್ಲಿನ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ದೂರುತ್ತಾರೆ. ಈ ನಿಯಮ ಯಾಕಿದೆ ಎಂಬುದಕ್ಕೆ ಈ ಪಂದ್ಯದ ಫಲಿತಾಂಶವೇ ಸಾಕ್ಷಿ.

ಏಕೆಂದರೆ ಒಂದು ಮ್ಯಾಚ್ ಸಂಪೂರ್ಣ ಮುಗಿದೇ ಹೋಯ್ತು ಎಂದು ಅಂದುಕೊಂಡಾಗ, ಯಾರಾದರೂ ಬಂದು ಹೀಗೆಲ್ಲಾ ಆಡುತ್ತಾರೆ. ಇಡೀ ಪಂದ್ಯದ ಚಿತ್ರಣವನ್ನು ಬದಲಿಸುತ್ತಾರೆ. ಅಲ್ಲದೆ ರೋಚಕ ಹೋರಾಟದೊಂದಿಗೆ ಗೆಲುವು ತಂದುಕೊಡುತ್ತಾರೆ. ಇಂತಹ ರೋಚಕತೆಗಾಗಿಯೇ ಈ ನಿಯಮವಿದೆ ಎಂದಿದ್ದಾರೆ.

ನಮ್ಮ ತಂಡ 5 ವಿಕೆಟ್ ಕಳೆದುಕೊಂಡಾಗ ಖುದ್ದು ನಾನೇ ಇನ್ನೂ ನಾವು ಗೆಲ್ಲಲ್ಲ ಅಂದುಕೊಂಡಿದ್ದೆ. ಇದಾಗ್ಯೂ ಇಂಪ್ಯಾಕ್ ಪ್ಲೇಯರ್ ಆಗಿ ಕಣಕ್ಕಿಳಿಯುವ ಆಟಗಾರ ಒಂದಷ್ಟು ವ್ಯತ್ಯಾಸವನ್ನು ಉಂಟು ಮಾಡಬಲ್ಲರು ಎಂದು ನನ್ನ ಒಳ ಮನಸ್ಸು ಹೇಳಿತ್ತು. ಅದರಂತೆ ಅಶುತೋಷ್ ಶರ್ಮಾ ಹಾಗೂ ವಿಪ್ರಾಜ್ ನಿಗಮ್ ತುಂಬಾ ಸಲೀಸಾಗಿ ಆಡಿದರು.

ಅದರಲ್ಲೂ ಕೊನೆಯ ಓವರ್​ನಲ್ಲಿ ಮೋಹಿತ್ ಶರ್ಮಾ ಕಲೆಹಾಕಿದ ಒಂದು ರನ್, ನನಗೆ ಆಸ್ಟ್ರೇಲಿಯಾ ವಿರುದ್ಧ ಸೌತ್ ಆಫ್ರಿಕಾ 438 ರನ್ ಚೇಸ್ ಮಾಡಿದಾಗ ಮಖಾಯ ಎನ್ಟಿನಿ ಗಳಿಸಿದ 1 ರನ್ ಅನ್ನು ನೆನಪಿಸಿತು. ಇದು ಮೋಹಿತ್ ಶರ್ಮಾ ಅವರ ವೃತ್ತಿಜೀವನದಲ್ಲೇ ಅತ್ಯಂತ ಪ್ರಮುಖವಾದ ಒಂದು ರನ್ ಆಗಿರಲಿದೆ ಎಂದು ಫಾಫ್ ಡುಪ್ಲೆಸಿಸ್ ಹೇಳಿದರು.

ಒಟ್ಟಿನಲ್ಲಿ ರಣರೋಚಕ ಹೋರಾಟದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಶುಭಾರಂಭ ಮಾಡಿರುವುದು ಸಖತ್ ಖುಷಿ ಕೊಟ್ಟಿದೆ. ನಮ್ಮ ತಪ್ಪುಗಳನ್ನು ತಿದ್ದಿಕೊಂಡು ಮುಂದಿನ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಡೆ ಮತ್ತಷ್ಟು ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದು ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆಗೆ ವಿರೋಧ:

ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ರೋಹಿತ್ ಶರ್ಮಾ, ಸಿಎಸ್​ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಸೇರಿದಂತೆ ಅನೇಕರು ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಆಲ್​ರೌಂಡರ್​ನ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: VIDEO: ಗೆಲ್ಲುವ ಪಂದ್ಯವನ್ನು ‘ಕೈ ಚೆಲ್ಲಿದ’ ರಿಷಭ್ ಪಂತ್

ಇದನ್ನೆ ಪರೋಕ್ಷವಾಗಿ ಪ್ರಸ್ತಾಪಿಸಿರುವ ಫಾಫ್ ಡುಪ್ಲೆಸಿಸ್, ಬಹಳಷ್ಟು ಕ್ರಿಕೆಟಿಗರು ಐಪಿಎಲ್‌ನಲ್ಲಿನ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ದೂರುತ್ತಿದ್ದಾರೆ. ಆದರೆ ಈ ನಿಯಮ ಯಾಕಿದೆ ಎಂಬುದಕ್ಕೆ ಅಶುತೋಷ್ ಶರ್ಮಾ ಅವರ ಈ ಪ್ರದರ್ಶನವೇ ಸಾಕ್ಷಿ ಎಂದು ಉತ್ತರ ನೀಡಿದ್ದಾರೆ.

Published On - 9:04 am, Tue, 25 March 25

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ