AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್, ಗಂಭೀರ್ ಆಸೆಗೆ ತಣ್ಣೀರೆರಚಿದ ಮೂವರು ಆಯ್ಕೆಗಾರರು

T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಈ ಹಿಂದೆ ವೈಸ್ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಶುಭ್​​ಮನ್ ಗಿಲ್ ಅವರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ.

ಗಿಲ್, ಗಂಭೀರ್ ಆಸೆಗೆ ತಣ್ಣೀರೆರಚಿದ ಮೂವರು ಆಯ್ಕೆಗಾರರು
Shubman Gill - Gambhir
ಝಾಹಿರ್ ಯೂಸುಫ್
|

Updated on: Dec 23, 2025 | 2:31 PM

Share

ಟಿ20 ವಿಶ್ವಕಪ್​ಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಶುಭ್​ಮನ್ ಗಿಲ್ ಕಾಣಿಸಿಕೊಂಡಿಲ್ಲ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ವೈಸ್ ಕ್ಯಾಪ್ಟನ್ ಆಗಿ  ಕಣಕ್ಕಿಳಿದಿದ್ದ ಗಿಲ್ ಅವರನ್ನು ಏಕಾಏಕಿ ಕೈ ಬಿಡಲು ಕಾರಣವೇನು? ಎಂಬ ಪ್ರಶ್ನೆಗೆ ಸಿಗುವ ಉತ್ತರ ಕಳಪೆ ಫಾರ್ಮ್. ಇದಾಗ್ಯೂ ಶುಭ್​ಮನ್ ಗಿಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಬಯಸಿದ್ದರು ಎಂಬ ವಿಚಾರ ಬಹಿರಂಗವಾಗಿದೆ.

ಕೆಲ ವರದಿಗಳ ಪ್ರಕಾರ, ಗೌತಮ್ ಗಂಭೀರ್​ ಟಿ20 ವಿಶ್ವಕಪ್​ಗೂ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡುವಂತೆ ಕೇಳಿಕೊಂಡಿದ್ದರು. ಇದಕ್ಕೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಕೂಡ ಸಮ್ಮತಿ ವ್ಯಕ್ತಪಡಿಸಿದ್ದರು. ಇದರಿಂದ ಆಯ್ಕೆ ಸಮಿತಿ ಸದಸ್ಯರುಗಳಲ್ಲಿ ಈ ಬಗ್ಗೆ ಭಿನ್ನಾಭಿಪ್ರಾಯಗಳು ಏರ್ಪಟ್ಟಿದೆ.  ಈ ಭಿನ್ನಾಭಿಪ್ರಾಯಗಳಿಂದಲೇ ಶುಭ್​ಮನ್ ಗಿಲ್ ತಂಡದಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

ಬಿಸಿಸಿಐ ಆಯ್ಕೆ ಸಮಿತಿ ನಿಯಮಗಳ ಪ್ರಕಾರ, ಹೆಚ್ಚಿನ ಸಮ್ಮತಿಯನ್ನು ಮೊದಲು ಪರಿಗಣಿಸಬೇಕು. ಅಂದರೆ ಐವರು ಆಯ್ಕೆಗಾರರಲ್ಲಿ ಮೂವರು ಓರ್ವ ಆಟಗಾರನ ಪರ ಬ್ಯಾಟ್ ಬೀಸಿದರೆ ಅವರಿಗೆ ಅವಕಾಶ ನೀಡಬೇಕಾಗುತ್ತದೆ. ಶುಭ್​ಮನ್ ಗಿಲ್ ವಿಷಯದಲ್ಲಿ ಮೂವರು ಆಯ್ಕೆಗಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿಯೇ ಅವರು ಭಾರತ ಟಿ20 ತಂಡದಿಂದ ಹೊರಬಿದ್ದಿದ್ದಾರೆ ಎನ್ನಲಾಗುತ್ತಿದೆ.

ಇಲ್ಲಿ ಮುಖ್ಯವಾಗಿ ಆಯ್ಕೆ ಸಮಿತಿ ಸದಸ್ಯರುಗಳಾದ ಆರ್​ಪಿ ಸಿಂಗ್ ಹಾಗೂ ಪ್ರಗ್ಯಾನ್ ಓಜಾ ಶುಭ್​ಮನ್ ಗಿಲ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ದೇಶೀಯ ಟಿ20 ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಇಶಾನ್ ಕಿಶನ್ ಆಯ್ಕೆಗೆ ಹೆಚ್ಚಿನ ಒಲವು ತೋರಿದ್ದಾರೆ.

ಆರ್​ಪಿ ಸಿಂಗ್ ಹಾಗೂ ಓಜಾ ಅವರ ನಿಲುವಿಗೆ ಮತ್ತೋರ್ವ ಆಯ್ಕೆ ಸಮಿತಿ ಸದಸ್ಯ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಐವರಲ್ಲಿ ಮೂರು ಗಿಲ್ ಆಯ್ಕೆಗೆ ಅಸಮ್ಮತಿ ವ್ಯಕ್ತಪಡಿಸಿದ್ದರಿಂದಾಗಿ ಕೈ ಬಿಡಲೇಬೇಕಾಯಿತು. ಇದರಿಂದಾಗಿ ಗೌತಮ್ ಗಂಭೀರ್ ಹಾಗೂ ಅಜಿತ್ ಅಗರ್ಕರ್​ಗೆ ಹಿನ್ನಡೆಯಾಗಿದೆ.

ಅತ್ತ ಆರ್​ಪಿ ಸಿಂಗ್, ಪ್ರಗ್ಯಾನ್ ಓಜಾ ಹಾಗೂ ಮತ್ತೋರ್ವ ಆಯ್ಕೆ ಸಮಿತಿ ಸದಸ್ಯ ಗಿಲ್ ಅವರನ್ನು ಕೈ ಬಿಟ್ಟು ಪ್ರಸ್ತುತ ಫಾರ್ಮ್​ನಲ್ಲಿರುವ ಆಟಗಾರನಿಗೆ ಅವಕಾಶ ಕಲ್ಪಿಸಬೇಕೆಂಬ ನಿರ್ಧಾರಕ್ಕೆ ಬದ್ಧರಾಗಿದ್ದರಿಂದ ಇಶಾನ್ ಕಿಶನ್​ಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಲಭಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ವಿಜಯ ಹಝಾರೆ ಟೂರ್ನಿಯಲ್ಲಿ ವಿರಾಟ್ ಕೊಹ್ಲಿಯ ಅಂಕಿ ಅಂಶಗಳು ಹೇಗಿದೆ?

ಇದರಿಂದ ಕಳಪೆ ಫಾರ್ಮ್​ ಹೊರತಾಗಿಯೂ ಶುಭ್​ಮನ್ ಗಿಲ್​ ಅವರನ್ನು ನ್ಯೂಝಿಲೆಂಡ್ ಸರಣಿ ಹಾಗೂ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲು ಬಯಸಿದ ಟೀಮ್ ಇಂಡಿಯಾ ಕೋಚ್​ ಗೌತಮ್ ಗಂಭೀರ್​ಗೆ ಹಿನ್ನಡೆಯಾಗಿದೆ.  ಇದಾಗ್ಯೂ ಶುಭ್​ಮನ್ ಗಿಲ್ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ. ಈ ಸರಣಿಯು ಜನವರಿ 11 ರಿಂದ ಶುರುವಾಗಲಿದ್ದು, ಈ ಸರಣಿಗಾಗಿ ಈ ತಿಂಗಳಾಂತ್ಯದೊಳಗೆ ತಂಡ ಪ್ರಕಟವಾಗುವ ಸಾಧ್ಯತೆಯಿದೆ.

Follow Us
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ