AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ವನಿಂದು ಹಸರಂಗ vs ಟಿಮ್ ಡೇವಿಡ್: ಯಾರಿಗೆ ಸಿಗಲಿದೆ ಚೊಚ್ಚಲ ಚಾನ್ಸ್​

Tim David vs Wanindu Hasaranga: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಮೊಹಮ್ಮದ್ ಸಿರಾಜ್, ನವ್​ದೀಪ್ ಸೈನಿ, ಆಕಾಶ್ ದೀಪ್ , ಯುಜ್ವೇಂದ್ರ ಚಹಲ್,  ಸಚಿನ್ ಬೇಬಿ,

IPL 2021: ವನಿಂದು ಹಸರಂಗ vs ಟಿಮ್ ಡೇವಿಡ್: ಯಾರಿಗೆ ಸಿಗಲಿದೆ ಚೊಚ್ಚಲ ಚಾನ್ಸ್​
Tim David vs Wanindu Hasaranga
TV9 Web
| Edited By: |

Updated on: Sep 19, 2021 | 10:12 PM

Share

IPL 2021 ರ ದ್ವಿತಿಯಾರ್ಧದಲ್ಲಿ ಆರ್​ಸಿಬಿ (RCB) ತಂಡದಲ್ಲಿ ನಾಲ್ಕು ಪ್ರಮುಖ ಬದಲಾವಣೆ ಆಗಿದೆ. ಅದರಂತೆ ತಂಡಕ್ಕೆ ವನಿಂದು ಹಸರಂಗ, ಟಿಮ್ ಡೇವಿಡ್, ದುಷ್ಮಂತ ಚಮೀರಾ ಹಾಗೂ ಜಾರ್ಜ್ ಗಾರ್ಟನ್​ ಆಗಮನವಾಗಿದೆ. ಸೆಪ್ಟೆಂಬರ್ 20 ರಂದು ಆರ್​ಸಿಬಿ ಮೊದಲ ಪಂದ್ಯವನ್ನಾಡಲಿದ್ದು, ಈ ಪಂದ್ಯದಲ್ಲಿ ಯಾವ ವಿದೇಶಿ ಆಟಗಾರನಿಗೆ ಚಾನ್ಸ್​ ಸಿಗಲಿದೆ ಎಂಬುದು ಈಗ ಕುತೂಹಲ. ಏಕೆಂದರೆ ತಂಡದಲ್ಲಿ ಈಗಾಗಲೇ ಖಾಯಂ ಸದಸ್ಯರಾಗಿ ಎಬಿ ಡಿವಿಲಿಯರ್ಸ್ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ಇದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಕೈಲ್ ಜೇಮಿಸನ್ ಸ್ಥಾನ ಪಡೆಯುವುದು ಖಚಿತ. ಇದಾಗ್ಯೂ ನಾಲ್ಕನೇ ವಿದೇಶಿ ಆಟಗಾರನಾಗಿ ಯಾರಿಗೆ ಚಾನ್ಸ್​ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಒಂದೆಡೆ ಅದ್ಭುತ ಫಾರ್ಮ್​ನಲ್ಲಿರುವ ಟಿಮ್ ಡೇವಿಡ್​ ಇದ್ದರೆ, ಇನ್ನೊಂದೆಡೆ ಸ್ಪಿನ್ ಮೋಡಿ ಮಾಡುವ ವನಿಂದು ಹಸರಂಗ ಇದ್ದಾರೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರನ್ನು ಮೊದಲ ಪಂದ್ಯಕ್ಕೆ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು. ಅದರಲ್ಲೂ ಟಿಮ್ ಡೇವಿಡ್ ಅವರನ್ನು ಆಯ್ಕೆ ಮಾಡಿಕೊಂಡರೆ 6ನೇ ಕ್ರಮಾಂಕದಲ್ಲಿ ಬಳಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಡೇವಿಡ್​ ಡೆತ್ ಓವರ್​ಗಳಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ ಆರ್​ಸಿಬಿ ಬ್ಯಾಟಿಂಗ್ ಲೈನಪ್​ ಬಲಿಷ್ಠವಾಗಿದೆ. ಇದಾಗ್ಯೂ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾದರೆ ವನಿಂದು ಹಸರಂಗಗೆ ಚಾನ್ಸ್ ನೀಡಬಹುದು. ಏಕೆಂದರೆ ಅಬುಧಾಬಿ ಪಿಚ್​ನಲ್ಲಿ ಆಡಲಾದ ಕೊನೆಯ ಪಂದ್ಯದಲ್ಲಿ ಬೌಲರುಗಳು ಯಶಸ್ಸು ಸಾಧಿಸಿದ್ದರು.

ಇದಾಗ್ಯೂ ಈ ಪಿಚ್​ ಬೌಲರುಗಳಿಗೆ ಮತ್ತು ಬ್ಯಾಟ್ಸ್​ಮನ್​ಗಳಿಗೆ ಸಹಕಾರಿ ಎಂಬುದು ವಿಶೇಷ. ಇನ್ನು ಈ ಪಿಚ್​ನ ಅವರೇಜ್ ಸ್ಕೋರ್ 150 ರಿಂದ 170 ರನ್​. ಆದರೆ ಇಲ್ಲಿ ಆಡಲಾದ 53 ಪಂದ್ಯಗಳಲ್ಲಿ 14 ಬಾರಿ 150 ಕ್ಕಿಂತ ಕಡಿಮೆ ಮೊತ್ತ ಮೂಡಿಬಂದಿತ್ತು. ಹಾಗಾಗಿ ಆರ್​ಸಿಬಿ ಕೂಡ ಬೌಲರ್​ಗೆ ಮಣೆ ಹಾಕುವ ಸಾಧ್ಯತೆ ಹೆಚ್ಚಿದೆ. ಅದರಂತೆ ವನಿಂದು ಹಸರಂಗಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು ಎನ್ನಬಹುದು.

ಆರ್​ಸಿಬಿ ಸಂಪೂರ್ಣ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಮೊಹಮ್ಮದ್ ಸಿರಾಜ್, ನವ್​ದೀಪ್ ಸೈನಿ, ಆಕಾಶ್ ದೀಪ್ , ಯುಜ್ವೇಂದ್ರ ಚಹಲ್,  ಸಚಿನ್ ಬೇಬಿ, ಹರ್ಷಲ್ ಪಟೇಲ್, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ಕೈಲ್ ಜೇಮಿಸನ್, ಶ್ರೀಕರ್ ಭರತ್, ಸುಯೇಶ್ ಪ್ರಭುದೇಸಾಯ್, ಡೆನಿಯಲ್ ಕ್ರಿಸ್ಟಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ದುಷ್ಮಂತ ಚಮೀರಾ, ಟಿಮ್ ಡೇವಿಡ್.

ಇದನ್ನೂ ಓದಿ: RCB ತಂಡದ ನಾಯಕತ್ವಕ್ಕೂ ವಿರಾಟ್ ಕೊಹ್ಲಿ ರಾಜೀನಾಮೆ ನೀಡಲಿದ್ದಾರೆ..!

ಇದನ್ನೂ ಓದಿ: IPL 2021: 5 ತಂಡಗಳಲ್ಲಿ 10 ಹೊಸ ವಿದೇಶಿ ಆಟಗಾರರು

ಇದನ್ನೂ ಓದಿ: IPL 2021: RCB ತಂಡದ ಗೇಮ್ ಚೇಂಜರ್ ಆಗಲಿದ್ದಾರೆ ಟಿಮ್ ಡೇವಿಡ್

ಇದನ್ನೂ ಓದಿ: ಗೂಗಲ್ ಬಿಗ್ ಆಫರ್: ಸ್ಮಾರ್ಟ್​ಫೋನ್ ಜೊತೆ ಕೇವಲ 1 ರೂ.ಗೆ ಸ್ಮಾರ್ಟ್​ ಸ್ಪೀಕರ್

(Tim David vs Wanindu Hasaranga: Who will Make Debut in Virat Kohli-Led RCB)

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ