AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2023: w,w,w,w,w! ಟಿಎನ್‌ಪಿಎಲ್​ನಲ್ಲಿ ದಾಖಲೆ ಬರೆದ ಯುವ ವೇಗಿ; ವಿಡಿಯೋ ನೋಡಿ

TNPL 2023: ಈ ಪಂದ್ಯದಲ್ಲಿ ಐಡ್ರೀಮ್ ತಿರುಪ್ಪೂರ್ ತಂಡದ ಪರ ಕಣಕ್ಕಿಳಿದಿದ್ದ 29 ವರ್ಷದ ಭುವನೇಶ್ವರನ್ ತಮ್ಮ ಖೋಟಾದ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ ಎದುರಾಳಿಯ ಅರ್ಧದಷ್ಟು ತಂಡವನ್ನು ಪೆವಿಲಿಯನ್​ಗಟ್ಟಿದರು.

TNPL 2023: w,w,w,w,w! ಟಿಎನ್‌ಪಿಎಲ್​ನಲ್ಲಿ ದಾಖಲೆ ಬರೆದ ಯುವ ವೇಗಿ; ವಿಡಿಯೋ ನೋಡಿ
ಭುವನೇಶ್ವರನ್
ಪೃಥ್ವಿಶಂಕರ
|

Updated on:Jun 21, 2023 | 11:13 AM

Share

ಈ ಬಾರಿಯ ಟಿಎನ್‌ಪಿಎಲ್ (TNPL 2023) ಅಂದರೆ ತಮಿಳುನಾಡು ಪ್ರೀಮಿಯರ್ ಲೀಗ್‌ ಹಿಂದಿಗಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿದೆ. ಒಂದರ ಹಿಂದೆ ಒಂದರಂತೆ ಶತಕಗಳು ಸಿಡಿಯುವುದರೊಂದಿಗೆ ಟೂರ್ನಿಗೆ ಹೆಚ್ಚಿನ ಕಳೆಬಂದಿದೆ. ಹಾಗೆಯೇ ಡಿಆರ್​ಎಸ್ ವಿರುದ್ಧವೇ ಇನ್ನೊಂದು ಡಿಆರ್​ಎಸ್ (DRS) ತೆಗೆದುಕೊಂಡಿದ್ದ ಟೀಂ ಇಂಡಿಯಾದ (Team India) ಅನುಭವಿ ಆಟಗಾರ ಆರ್​. ಅಶ್ವಿನ್ (Ravichandran Ashwin), ಟೂರ್ನಿಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದರು. ಇದೀಗ 29ರ ಹರೆಯದ ಬೌಲರ್ ಭುವನೇಶ್ವರನ್ (Bhuvaneswaran) ಕೇವಲ 17 ರನ್​ ನೀಡಿ 5 ವಿಕೆಟ್ ಪಡೆದು ಲೀಗ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ನೆಲ್ಲೈ ರಾಯಲ್ ಕಿಂಗ್ಸ್ ಮತ್ತು ಐಡ್ರೀಮ್ ತಿರುಪ್ಪೂರ್ ನಡುವಿನ ಪಂದ್ಯ ಈ ದಾಖಲೆಗೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಐಡ್ರೀಮ್ ತಿರುಪ್ಪೂರ್ ತಂಡದ ಪರ ಕಣಕ್ಕಿಳಿದಿದ್ದ 29 ವರ್ಷದ ಭುವನೇಶ್ವರನ್ ತಮ್ಮ ಖೋಟಾದ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ ಎದುರಾಳಿಯ ಅರ್ಧದಷ್ಟು ತಂಡವನ್ನು ಪೆವಿಲಿಯನ್​ಗಟ್ಟಿದರು. ಅಂದರೆ ಭುವನೇಶ್ವರನ್ ಒಬ್ಬರೆ ತಿರುಪ್ಪೂರ್ ತಂಡದ 5 ವಿಕೆಟ್ ಕಬಳಿಸಿದರು. ಇದರೊಂದಿಗೆ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಭುವನೇಶ್ವರನ್ ಇತಿಹಾಸ ಸೃಷ್ಟಿಸಿದರು.

R Ashwin DRS in TNPL: ಒಂದು ಎಸೆತಕ್ಕೆ ಎರಡೆರಡು ಡಿಆರ್​ಎಸ್; ಅಚ್ಚರಿ ಮೂಡಿಸಿದ ಅಶ್ವಿನ್ ನಿರ್ಧಾರ..!

17 ರನ್​ ನೀಡಿ 5 ವಿಕೆಟ್

ಈ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ನೆಲ್ಲೈ ರಾಯಲ್ ಕಿಂಗ್ಸ್ ತಂಡಕ್ಕೆ ಉತ್ತಮ ಆರಂಭ ಪಡೆಯಲು ಭುವನೇಶ್ವರನ್ ಅವಕಾಶ ನೀಡಲಿಲ್ಲ. ರಾಯಲ್ ಕಿಂಗ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಇಬ್ಬರೂ ಆರಂಭಿಕರನ್ನು ಭುವನೇಶ್ವರನ್ ಬೇಟೆಯಾಡಿದರು. ನಂತರ ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ನೆಲ್ಲೈ ರಾಯಲ್ ಕಿಂಗ್ಸ್ ನಾಯಕ ಅರುಣ್ ಕಾರ್ತಿಕ್ ಕೂಡ ಭುವನೇಶ್ವರನ್​ಗೆ ವಿಕೆಟ್ ಒಪ್ಪಿಸಿದರು. ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಭುವನೇಶ್ವರನ್ ಅವರ 2 ಎಸೆತಗಳಲ್ಲಿ 2 ವಿಕೆಟ್ ಒಪ್ಪಿಸುವ ಮೂಲಕ ರಾಯಲ್ ಕಿಂಗ್ಸ್ ಇನ್ನಿಂಗ್ಸ್​ಗೆ ಅಂತ್ಯ ಹಾಡಿದ್ದರು.

ಈ ಮೂಲಕ ಬಲಗೈ ವೇಗದ ಬೌಲರ್ ಭುವನೇಶ್ವರನ್ ಕೇವಲ 3.2 ಓವರ್‌ಗಳನ್ನು ಹಾಕುವ ಮೂಲಕ ನೆಲ್ಲೈ ರಾಯಲ್ ಕಿಂಗ್ಸ್‌ ತಂಡದ 5 ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್​ಗಟ್ಟುವಲ್ಲಿ ಯಶಸ್ವಿಯಾದರು. ಭುವನೇಶ್ವರನ್ ದಾಳಿಗೆ ನಲುಗಿದ ನೆಲ್ಲೈ ರಾಯಲ್ ಕಿಂಗ್ಸ್ ಪೂರ್ಣ 20 ಓವರ್‌ಗಳನ್ನು ಸಹ ಆಡಲು ಸಾಧ್ಯವಾಗದೆ ಕೇವಲ 18.2 ಓವರ್‌ಗಳಲ್ಲಿ 124 ರನ್ ಗಳಿಸಿ ಆಲೌಟ್ ಆಯಿತು.

7 ವಿಕೆಟ್​ಗಳಿಂದ ಗೆಲುವು

ಇದಕ್ಕೆ ಉತ್ತರವಾಗಿ ತಿರುಪ್ಪೂರು ತಂಡ 18.2 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 125 ರನ್‌ಗಳ ಗುರಿ ತಲುಪಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ತುಷಾರ್ ರಹೇಜಾ 43 ಎಸೆತಗಳಲ್ಲಿ 4 ಬೌಂಡರಿ, ಹಾಗೂ 3 ಸಿಕ್ಸರ್ ಸಹಿತ 49 ರನ್ ಸಿಡಿಸಿದರೆ, ಮತ್ತೊಬ್ಬ ಆರಂಭಿಕ ರಾಧಾಕೃಷ್ಣನ್ 30 ಎಸೆತಗಳಲ್ಲಿ 34 ರನ್ ಸಿಡಿಸಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಈ ಇಬ್ಬರ ಅರ್ಧಶತಕದ ಜೊತೆಯಾಟದಿಂದಾಗಿ ಐಡ್ರೀಮ್ ತಿರುಪ್ಪೂರ್ ತಂಡ ಪಂದ್ಯವನ್ನು 7 ವಿಕೆಟ್​ಗಳಿಂದ ಗೆದ್ದು ಬೀಗಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:11 am, Wed, 21 June 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್