AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2023 Final: ಚಾಂಪಿಯನ್ ಪಟ್ಟಕ್ಕೇರಿದ ಲೈಕಾ ಕೋವೈ ಕಿಂಗ್ಸ್; ಲೀಗ್​ನಲ್ಲಿ 17 ಬಲಿ ಪಡೆದ ಶಾರುಖ್ ಖಾನ್!

TNPL 2023 Final: ತಮಿಳುನಾಡು ಪ್ರೀಮಿಯರ್ ಲೀಗ್ ಪಂದ್ಯಾವಳಿ ಫೈನಲ್ ಪಂದ್ಯದಲ್ಲಿ ನೆಲ್ಲೈ ರಾಯಲ್ ಕಿಂಗ್ಸ್ ತಂಡವನ್ನು 104 ರನ್​ಗಳಿಂದ ಮಣಿಸಿದ ಲೈಕಾ ಕೋವೈ ಕಿಂಗ್ಸ್ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

TNPL 2023 Final: ಚಾಂಪಿಯನ್ ಪಟ್ಟಕ್ಕೇರಿದ ಲೈಕಾ ಕೋವೈ ಕಿಂಗ್ಸ್; ಲೀಗ್​ನಲ್ಲಿ 17 ಬಲಿ ಪಡೆದ ಶಾರುಖ್ ಖಾನ್!
ತಮಿಳುನಾಡು ಪ್ರೀಮಿಯರ್ ಲೀಗ್
ಪೃಥ್ವಿಶಂಕರ
|

Updated on: Jul 13, 2023 | 9:28 AM

Share

ತಮಿಳುನಾಡು ಪ್ರೀಮಿಯರ್ ಲೀಗ್ (Tamil Nadu Premier League) ಪಂದ್ಯಾವಳಿ ಫೈನಲ್ ಪಂದ್ಯದಲ್ಲಿ ನೆಲ್ಲೈ ರಾಯಲ್ ಕಿಂಗ್ಸ್ (Lyca Kovai Kings vs Nellai Royal Kings) ತಂಡವನ್ನು 104 ರನ್​ಗಳಿಂದ ಮಣಿಸಿದ ಲೈಕಾ ಕೋವೈ ಕಿಂಗ್ಸ್ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಕೋವೈ ಕಿಂಗ್ಸ್‌ನ ಈ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ ನಾಯಕ ಶಾರುಖ್ ಖಾನ್ (Shahrukh Khan) ಪ್ರಮುಖ ಮೂರು ವಿಕೆಟ್ ಉರುಳಿಸಿ ನೆಲ್ಲೈ ರಾಯಲ್ ಕಿಂಗ್ಸ್ ತಂಡ ಕೇವಲ 101 ರನ್​ಗಳಿಗೆ ಆಲೌಟ್ ಆಗುವಂತೆ ಮಾಡಿದರು. ಇಡೀ ಪಂದ್ಯಾವಳಿಯಲ್ಲಿ ಬಲಿಷ್ಠ ತಂಡಗಳೆನಿಸಿಕೊಂಡಿದ್ದ ಕೋವೈ ಕಿಂಗ್ಸ್ ಮತ್ತು ರಾಯಲ್ ಕಿಂಗ್ಸ್ ತಂಡಗಳು ನಿರೀಕ್ಷೆಯಂತೆ ಫೈನಲ್​ಗೆ ಲಗ್ಗೆ ಇಟ್ಟಿದ್ದವು. ಹೀಗಿರುವಾಗ ಉಭಯ ತಂಡಗಳ ನಡುವಿನ ಫೈನಲ್ ಪಂದ್ಯ ಸಾಕಷ್ಟು ರೋಚಕತೆ ಹುಟ್ಟಿಸಿತ್ತು. ಆದರೆ ಲೈಕಾ ಕೋವೈ ಕಿಂಗ್ಸ್ ತಂಡದ ಮಾರಕ ಬೌಲಿಂಗ್​ಗೆ ಧೂಳಿಪಟವಾದ ನೆಲ್ಲೈ ರಾಯಲ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು.

205 ರನ್​ಗಳ ಟಾರ್ಗೆಟ್

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶಾರುಖ್ ಖಾನ್ ನೇತೃತ್ವದ ಲೈಕಾ ಕೋವೈ ಕಿಂಗ್ಸ್ ತಂಡ ನಿಗದಿತ 20 ಓವರ್​ಗಳಿಗೆ ಐದು ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು. ತಂಡದ ಪರ ಒಟ್ಟು ಮೂರು ಅರ್ಧಶತಕಗಳು ಸಿಡಿದವು. ಮೊದಲನೆಯದಾಗಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಸುರೇಶ್ ಕುಮಾರ್ 33 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 57 ರನ್ ಕಲೆಹಾಕಿದರು. ಆ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮುಕಿಲೇಶ್ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 51 ರನ್ ಬಾರಿಸಿದರು.

TNPL 2023: w,w,w,w,w! ಟಿಎನ್‌ಪಿಎಲ್​ನಲ್ಲಿ ದಾಖಲೆ ಬರೆದ ಯುವ ವೇಗಿ; ವಿಡಿಯೋ ನೋಡಿ

ಇವರೊಂದಿಗೆ ಕೆಳಕ್ರಮಾಂಕದಲ್ಲಿ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ ಅತೀಕ್ ಉರ್ ರೆಹಮಾನ್ ಕೇವಲ 21 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡಂತೆ 50 ರನ್ ಕಲೆಹಾಕಿದರು. ಇನ್ನು ನೆಲ್ಲೈ ರಾಯಲ್ ಕಿಂಗ್ಸ್ ತಂಡದ ಪರ ಸೋನು ಯಾದವ್ ಹಾಗೂ ಸಂದೀಪ್ ವಾರಿಯರ್ ತಲಾ ಎರಡು ವಿಕೆಟ್ ಪಡೆದರು.

ತತ್ತರಿಸಿದ ನೆಲ್ಲೈ ರಾಯಲ್ ಕಿಂಗ್ಸ್ ಬ್ಯಾಟಿಂಗ್

205 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ನೆಲ್ಲೈ ರಾಯಲ್ ಕಿಂಗ್ಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ತಂಡದ ಆರಂಭಿಕ ಆಟಗಾರ ನಿರಂಜನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಮತ್ತೊಬ್ಬ ಆರಂಭಿಕ ಅರುಣ್ ಕಾರ್ತಿಕ್ 27 ರನ್ ಬಾರಿಸಿದರೆ, ಲಕ್ಷ್ಮೇಶ ಸೂರ್ಯಪ್ರಕಾಶ್ 22 ರನ್​ಗಳ ಇನ್ನಿಂಗ್ಸ್ ಆಡಿದರು. ಇನ್ನುಳಿದಂತೆ ತಂಡದ ಪರ ಯಾರು ಹೇಳಿಕೊಳ್ಳುವಂತಹ ಇನ್ನಿಂಗ್ಸ್ ಆಡಲಿಲ್ಲ. ಹೀಗಾಗಿ ನೆಲ್ಲೈ ರಾಯಲ್ ಕಿಂಗ್ಸ್ ತಂಡ ಕೇವಲ 101 ರನ್​ಗಳಿಗೆ ಆಲೌಟ್ ಆಗಿ, 104 ರನ್​ಗಳ ಹೀನಾಯ ಸೋಲು ಕಂಡಿತು.

17 ವಿಕೆಟ್ ಪಡೆದ ಶಾರುಖ್

ಲೈಕಾ ಕೋವೈ ಕಿಂಗ್ಸ್ ತಂಡದ ಪರ ಮಾರಕ ದಾಳಿ ನಡೆಸಿದ ಜಾತವೇಧ್ ಸುಬ್ರಮಣ್ಯನ್ ಪ್ರಮುಖ 4 ವಿಕೆಟ್ ಪಡೆದು ಮಿಂಚಿದರೆ, ಇವರಿಗೆ ಸಾಥ್ ನೀಡಿದ ನಾಯಕ ಶಾರುಖ್ ಖಾನ್ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಶಾರುಖ್, ಟಿಎನ್​ಪಿಎಲ್ 2023 ರಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್ ಎನಿಸಿಕೊಂಡರು. ಈ ಲೀಗ್​ನಲ್ಲಿ 9 ಪಂದ್ಯಗಳನ್ನಾಡಿದ ಶಾರುಖ್ ಒಟ್ಟು 17 ವಿಕೆಟ್‌ಗಳನ್ನು ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!