Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2023: ಸಚಿನ್ ಸಿಡಿಲಬ್ಬರ: ಫೈನಲ್​ಗೆ ಕೋವೈ ಕಿಂಗ್ಸ್

Lyca Kovai Kings vs Dindigul Dragons: ದಿಂಡಿಗಲ್ ಡ್ರಾಗನ್ಸ್​ ವಿರುದ್ಧದ ಗೆಲುವಿನೊಂದಿಗೆ ಶಾರುಖ್ ಖಾನ್ ನೇತೃತ್ವದ ಲೈಕಾ ಕೋವೈ ಕಿಂಗ್ಸ್ ತಂಡವು ತಮಿಳುನಾಡು ಪ್ರೀಮಿಯರ್ ಲೀಗ್​ನ ಫೈನಲ್​ಗೆ ಪ್ರವೇಶಿಸಿದೆ.

TNPL 2023: ಸಚಿನ್ ಸಿಡಿಲಬ್ಬರ: ಫೈನಲ್​ಗೆ ಕೋವೈ ಕಿಂಗ್ಸ್
Lyca Kovai Kings
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 08, 2023 | 7:42 PM

TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ದಿಂಡಿಗಲ್ ಡ್ರಾಗನ್ಸ್ ವಿರುದ್ಧ ಜಯ ಸಾಧಿಸಿ ಲೈಕಾ ಕೋವೈ ಕಿಂಗ್ಸ್ ತಂಡ ಫೈನಲ್​ಗೆ ಲಗ್ಗೆಯಿಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಿಂಡಿಗಲ್ ಡ್ರಾಗನ್ಸ್ ತಂಡದ ನಾಯಕ ಬಾಬಾ ಇಂದ್ರಜಿತ್ ಬೌಲಿಂಗ್ ಆಯ್ಕೆ ಮಾಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಲೈಕಾ ಕೋವೈ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕರಾದ ಸುಜಯ್ (12) ಹಾಗೂ ಸುರೇಶ್ ಕುಮಾರ್ (26) ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ 19ರ ಹರೆಯದ ಯುವ ದಾಂಡಿಗ ಬಿ ಸಚಿನ್ ಸ್ಪೋಟಕ ಇನಿಂಗ್ಸ್ ಆಡಿದರು. ಬಿರುಸಿನ ಆಟಕ್ಕೆ ಒತ್ತು ನೀಡಿದ ಸಚಿನ್ ದಿಂಡಿಗಲ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಸಚಿನ್ ಬ್ಯಾಟ್​ನಿಂದ 7 ಫೋರ್ ಹಾಗೂ 2 ಭರ್ಜರಿ ಸಿಕ್ಸ್​ಗಳು ಮೂಡಿಬಂತು. ಅಲ್ಲದೆ 46 ಎಸೆತಗಳಲ್ಲಿ 70 ರನ್ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಮುಕಿಲೇಶ್ 27 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ 3 ಫೋರ್​ನೊಂದಿಗೆ 44 ರನ್ ಸಿಡಿಸಿದರು. ಪರಿಣಾಮ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಲೈಕಾ ಕೋವೈ ಕಿಂಗ್ಸ್ ತಂಡವು 197 ರನ್​ಗಳಿಸಿತು.

198 ರನ್​ಗಳ ಕಠಿಣ ಗುರಿ ಪಡೆದ ದಿಂಡಿಗಲ್ ಡ್ರಾಗನ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಲೈಕಾ ಕೋವೈ ಕಿಂಗ್ಸ್ ಬೌಲರ್​ಗಳು ಯಶಸ್ವಿಯಾದರು. 58 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಡ್ರಾಗನ್ಸ್ ತಂಡವು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಈ ಹಂತದಲ್ಲಿ ಕಣಕ್ಕಿಳಿದ ಸರತ್ ಕುಮಾರ್ ಅಕ್ಷರಶಃ ಅಬ್ಬರಿಸಿದರು.

ಕೇವಲ 26 ಎಸೆತಗಳನ್ನು ಎದುರಿಸಿದ ಸರತ್ ಕುಮಾರ್ 8 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 62 ರನ್​ ಚಚ್ಚಿದರು. ಆದರೆ ಮತ್ತೊಂದೆಡೆ ವಿಕೆಟ್ ಉರುಳಿಸುತ್ತಾ ಸಾಗಿದ ಕೋವೈ ಕಿಂಗ್ಸ್ ಬೌಲರ್​ಗಳು ದಿಂಡಿಗಲ್ ಡ್ರಾಗನ್ಸ್ ತಂಡವನ್ನು 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 163 ರನ್​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು.

ಇದರೊಂದಿಗೆ ಲೈಕಾ ಕೋವೈ ಕಿಂಗ್ಸ್ ತಂಡವು 30 ರನ್​ಗಳಿಂದ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಶಾರುಖ್ ಖಾನ್ ನೇತೃತ್ವದ ಲೈಕಾ ಕೋವೈ ಕಿಂಗ್ಸ್ ತಂಡವು ತಮಿಳುನಾಡು ಪ್ರೀಮಿಯರ್ ಲೀಗ್ 2023 ರ ಫೈನಲ್​ಗೆ ಪ್ರವೇಶಿಸಿದೆ.

ದಿಂಡಿಗಲ್ ಡ್ರಾಗನ್ಸ್ ಪ್ಲೇಯಿಂಗ್ 11: ವಿಮಲ್ ಖುಮರ್ , ಶಿವಂ ಸಿಂಗ್ , ಬಾಬಾ ಇಂದ್ರಜಿತ್ (ನಾಯಕ) , ಆದಿತ್ಯ ಗಣೇಶ್ , ಬೂಪತಿ ಕುಮಾರ್ , ಸುಭೋತ್ ಭಾಟಿ , ಪಿ ಸರವಣ ಕುಮಾರ್ , ಎಂ ಮತಿವಣ್ಣನ್ , ವರುಣ್ ಚಕ್ರವರ್ತಿ , ಸರತ್ ಕುಮಾರ್, ಜಿ ಕಿಶೂರ್.

ಇದನ್ನೂ ಓದಿ: TNPL 2023: 10 ಫೋರ್​, 5 ಸಿಕ್ಸ್​ನೊಂದಿಗೆ ಅರುಣ್ ಅಬ್ಬರದ ಶತಕ..!

ಲೈಕಾ ಕೋವೈ ಕಿಂಗ್ಸ್ ಪ್ಲೇಯಿಂಗ್ 11: ಎಸ್ ಸುಜಯ್ , ಜೆ ಸುರೇಶ್ ಕುಮಾರ್ (ವಿಕೆಟ್ ಕೋರ್) , ಬಿ ಸಚಿನ್ , ರಾಮ್ ಅರವಿಂದ್ , ಅತೀಕ್ ಉರ್ ರೆಹಮಾನ್ , ಮುಕಿಲೇಶ್ , ಶಾರುಖ್ ಖಾನ್ (ನಾಯಕ) , ಎಂ ಮೊಹಮ್ಮದ್ , ಮಣಿಮಾರನ್ ಸಿದ್ಧಾರ್ಥ್ , ಜಾತವೇಧ್ ಸುಬ್ರಮಣ್ಯನ್ , ವಲ್ಲಿಯಪ್ಪನ್ ಯುಧೀಶ್ವರನ್.

‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು