AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL 2023: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ರಾಯಲ್ ಕಿಂಗ್ಸ್

TNPL 2023: ಸೋಮವಾರ ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ದಿಂಡಿಗಲ್ ಡ್ರಾಗನ್ಸ್ ಹಾಗೂ ನೆಲ್ಲೈ ರಾಯಲ್ ಕಿಂಗ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡವು ಜುಲೈ 12 ರಂದು ಲೈಕಾ ಕೋವೈ ಕಿಂಗ್ಸ್ ವಿರುದ್ಧ ಫೈನಲ್ ಆಡಲಿದೆ.

TNPL 2023: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ರಾಯಲ್ ಕಿಂಗ್ಸ್
Nellai Royal Kings
TV9 Web
| Edited By: |

Updated on: Jul 09, 2023 | 4:20 PM

Share

TNPL 2023: ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ನೆಲ್ಲೈ ರಾಯಲ್ ಕಿಂಗ್ಸ್ (Nellai Royal Kings) ತಂಡವು ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೀಚೆಮ್ ಮಧುರೈ ಪ್ಯಾಂಥರ್ಸ್ ತಂಡವು ಮೊದಲು ಬೌಲಿಂಗ್ ಮಾಡಿತು. ಇತ್ತ ಇನಿಂಗ್ಸ್ ಆರಂಭಿಸಿದ ನೆಲ್ಲೈ ರಾಯಲ್ ಕಿಂಗ್ಸ್ ಪರ ಆರಂಭಿಕರಾದ ಅರುಣ್ ಕಾರ್ತಿಕ್ (18) ಹಾಗೂ ಸೂರ್ಯಪ್ರಕಾಶ್ (0) ಬೇಗನೆ ವಿಕೆಟ್ ಒಪ್ಪಿಸಿದ್ದರು.

ಆದರೆ ಮೂರನೇ ವಿಕೆಟ್​ಗೆ ಜೊತೆಯಾದ ಅಜಿತೇಶ್ ಹಾಗೂ ನಿಧೀಶ್ ಭರ್ಜರಿ ಬ್ಯಾಟಿಂಗ್ ಪ್ರರ್ಶಿಸಿದರು. 30 ಎಸೆತಗಳನ್ನು ಎದುರಿಸಿದ ಅಜಿತೇಶ್ 1 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ 50 ರನ್​ ಬಾರಿಸಿದರೆ, ನಿಧೀಶ್ 6 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 50 ಎಸೆತಗಳಲ್ಲಿ 76 ರನ್ ಸಿಡಿಸಿದರು.

ಇನ್ನು ಅಂತಿಮ ಓವರ್​ಗಳಲ್ಲಿ ಬ್ಯಾಟ್ ಬೀಸಿದ ರಿತ್ವಿಕ್ 2 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 10 ಎಸೆತಗಳಲ್ಲಿ 29 ರನ್ ಚಚ್ಚಿದರು. ಇದರೊಂದಿಗೆ ನೆಲ್ಲೈ ರಾಯಲ್ ಕಿಂಗ್ಸ್ ತಂಡದ ಮೊತ್ತವು 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 211 ಕ್ಕೆ ಬಂದು ನಿಂತಿತು.

212 ರನ್​ಗಳ ಸವಾಲಿನ ಗುರಿ ಪಡೆದ ಸೀಚೆಮ್ ಮಧುರೈ ಪ್ಯಾಂಥರ್ಸ್ ತಂಡಕ್ಕೆ ಸುರೇಶ್ ಲೋಕೇಶ್ವರ್ (40) ಬಿರುಸಿನ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆದಿತ್ಯ 50 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 73 ರನ್ ಬಾರಿಸಿದರು.

ಇನ್ನು ಕೆಳ ಕ್ರಮಾಂಕದಲ್ಲಿ ಅಬ್ಬರಿಸಿದ ಸ್ವಪ್ನಿಲ್ ಸಿಂಗ್ 30 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 48 ರನ್ ಬಾರಿಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ ಸೀಚೆಮ್ ಮಧುರೈ ಪ್ಯಾಂಥರ್ಸ್ ತಂಡಕ್ಕೆ 19 ರನ್​ಗಳ ಅವಶ್ಯಕತೆಯಿತ್ತು. ಮೋಹನ್ ಪ್ರಸಾತ್ ಎಸೆದ ಕೊನೆಯ ಓವರ್​ನಲ್ಲಿ 2 ಸಿಕ್ಸ್​ನೊಂದಿಗೆ ಪ್ಯಾಂಥರ್ಸ್ ತಂಡವು 14 ರನ್​ಗಳಿಸಲಷ್ಟೇ ಶಕ್ತರಾದರು.

ಇದರೊಂದಿಗೆ ನೆಲ್ಲೈ ರಾಯಲ್ ಕಿಂಗ್ಸ್ ತಂಡವು 4 ರನ್​ಗಳ ರೋಚಕ ಜಯ ಸಾಧಿಸಿ ಕ್ವಾಲಿಫೈಯರ್-2 ಗೆ ಎಂಟ್ರಿ ಕೊಟ್ಟಿದೆ. ಸೋಮವಾರ ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ದಿಂಡಿಗಲ್ ಡ್ರಾಗನ್ಸ್ ಹಾಗೂ ನೆಲ್ಲೈ ರಾಯಲ್ ಕಿಂಗ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡವು ಜುಲೈ 12 ರಂದು ಲೈಕಾ ಕೋವೈ ಕಿಂಗ್ಸ್ ವಿರುದ್ಧ ಫೈನಲ್ ಆಡಲಿದೆ.

ನೆಲ್ಲೈ ರಾಯಲ್ ಕಿಂಗ್ಸ್​ ಪ್ಲೇಯಿಂಗ್ 11: ಅರುಣ್ ಕಾರ್ತಿಕ್ (ನಾಯಕ) , ಲಕ್ಷ್ಮೇಶ ಸೂರ್ಯಪ್ರಕಾಶ್ , ಅಜಿತೇಶ್ ಗುರುಸ್ವಾಮಿ , ರಿತಿಕ್ ಈಶ್ವರನ್ (ವಿಕೆಟ್ ಕೀಪರ್) , ನಿಧಿಶ್ ರಾಜಗೋಪಾಲ್ , ಸೋನು ಯಾದವ್ , ಸುಗಂಧಿರನ್ , ಹರೀಶ್ , ಎಂ ಪೊಯಿಯಮುಝಿ, ಮೋಹನ್ ಪ್ರಸಾದ್ , ಸಂದೀಪ್ ವಾರಿಯರ್.

ಇದನ್ನೂ ಓದಿ: ಮೈದಾನದಲ್ಲಿ ಮೊಳಗಿದ DK..DK ಘೋಷಣೆ: ಕೈ ಮುಗಿದು ಬಿಟ್ಟು ಬಿಡ್ರಪ್ಪಾ ಎಂದ ಮುರಳಿ ವಿಜಯ್

ಸೀಚೆಮ್ ಮಧುರೈ ಪ್ಯಾಂಥರ್ಸ್ ಪ್ಲೇಯಿಂಗ್ 11: ಹರಿ ನಿಶಾಂತ್ (ನಾಯಕ) , ಸುರೇಶ್ ಲೋಕೇಶ್ವರ್ (ವಿಕೆಟ್ ಕೀಪರ್) , ಕ್ರಿಶ್ ಜೈನ್ , ವಿ ಆದಿತ್ಯ , ಜಗತೀಸನ್ ಕೌಸಿಕ್ , ಸ್ವಪ್ನಿಲ್ ಸಿಂಗ್ , ಎಸ್ ಶ್ರೀ ಅಬಿಸೆಕ್ , ಪಿ ಸರವಣನ್ , ಮುರುಗನ್ ಅಶ್ವಿನ್ , ಗುರ್ಜಪ್ನೀತ್ ಸಿಂಗ್ , ಅಜಯ್ ಕೃಷ್ಣ.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ