AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೂ ಉಂಟೇ… ಒಂದೇ ಎಸೆತದಲ್ಲಿ 3 ರನೌಟ್ ಮಿಸ್

TNPL 2025: ತಮಿಳುನಾಡು ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ದಿಂಡಿಗಲ್ ಡ್ರಾಗನ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಧುರೈ ಪ್ಯಾಂಥರ್ಸ್ ತಂಡವು 20 ಓವರ್​ಗಳಲ್ಲಿ 150 ರನ್ ಕಲೆಹಾಕಿತು.ಈ ಗುರಿಯನ್ನು 12.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ದಿಂಡಿಗಲ್ ಡ್ರಾಗನ್ಸ್ 9 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಹೀಗೂ ಉಂಟೇ... ಒಂದೇ ಎಸೆತದಲ್ಲಿ 3 ರನೌಟ್ ಮಿಸ್
Tnpl 2025
ಝಾಹಿರ್ ಯೂಸುಫ್
|

Updated on: Jun 15, 2025 | 11:18 AM

Share

ಒಂದೇ ಎಸೆತದಲ್ಲಿ ಮೂರು ರನೌಟ್ ಚಾನ್ಸ್ ಮಿಸ್… ಇಂತಹದೊಂದು ಅಪರೂಪದ ಆಟಕ್ಕೆ ಸಾಕ್ಷಿಯಾಗಿದ್ದು ತಮಿಳುನಾಡು ಪ್ರೀಮಿಯರ್ ಲೀಗ್ (TNPL 2025). ಈ ಲೀಗ್​ನ 11ನೇ ಪಂದ್ಯದಲ್ಲಿ ದಿಂಡಿಗಲ್ ಡ್ರಾಗನ್ಸ್ ಮತ್ತು ಮಧುರೈ ಪ್ಯಾಂಥರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಸೇಲಂನ ಎಸ್​ಸಿಎಫ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ದಿಂಡಿಗಲ್ ಡ್ರಾಗನ್ಸ್ ತಂಡದ ನಾಯಕ ರವಿಚಂದ್ರನ್ ಅಶ್ವಿನ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮಧುರೈ ಪ್ಯಾಂಥರ್ಸ್ 19 ಓವರ್​ಗಳಲ್ಲಿ ಕೇವಲ 131 ರನ್ ಕಲೆಹಾಕಿತ್ತು. ಆದರೆ ಕೊನೆಯ ಓವರ್​ನಲ್ಲಿ ದಿಂಡಿಗಲ್ ಡ್ರಾಗನ್ಸ್ ಫೀಲ್ಡರ್​ಗಳು ಮಾಡಿದ ಎಡವಟ್ಟಿನಿಂದಾಗಿ 18 ರನ್​ಗಳು ಮೂಡಿಬಂದವು. ಗಣೇಶ್ ಪೆರಿಯಸ್ವಾಮಿ ಎಸೆದ ಈ ಓವರ್​ನ 5ನೇ ಎಸೆತದಲ್ಲಿ ಗುಜರ್​ಪ್ನೀತ್ ಸಿಂಗ್ ಒಂದು ರನ್ ಕಲೆಹಾಕಿದರು.

ಆದರೆ ಈ ಒಂದು ರನ್​ ಕಲೆಹಾಕುವ ಮುನ್ನ ಡೈರೆಕ್ಟ್ ಹಿಟ್ ಮೂಲಕ ಗುಜರ್​ಪ್ನೀತ್ ಸಿಂಗ್ ಅವರನ್ನು ರನೌಟ್ ಮಾಡುವ ಅವಕಾಶ ಅಶ್ವಿನ್ ಅವರ ಮುಂದಿತ್ತು. ಆದರೆ ಅಶ್ವಿನ್ ಎಸೆದ ಚೆಂಡು ವಿಕೆಟ್​ಗೆ ತಾಗಲಿಲ್ಲ. ಅತ್ತ ಬೌಲರ್​ ಕೂಡ ಚೆಂಡನ್ನು ಹಿಡಿಯುವ ಪ್ರಯತ್ನ ಮಾಡಲಿಲ್ಲ.

ಚೆಂಡು ವಿಕೆಟ್ ದಾಟಿ ಹೋಗುತ್ತಿದ್ದಂತೆ ಗುಜರ್​ಪ್ನೀತ್ ಸಿಂಗ್ ಹಾಗೂ ರಾಜಲಿಂಗಂ 2ನೇ ರನ್ ಓಡಿದರು. ಈ ವೇಳೆ ಮತ್ತೊಮ್ಮೆ ರನೌಟ್ ಮಾಡುವ ಅವಕಾಶ ಒದಗಿತ್ತು. ಆದರೆ ವಿಕೆಟ್ ಕೀಪರ್ ಬರುವ ಮುನ್ನವೇ ಚೆಂಡು ವಿಕೆಟ್ ದಾಟಿಯಾಗಿತ್ತು.

ಚೆಂಡು ಬೌಂಡರಿಯತ್ತ ಸಾಗುತ್ತಿದ್ದಂತೆ ಗುಜರ್​ಪ್ನೀತ್ ಸಿಂಗ್ ಹಾಗೂ ರಾಜಲಿಂಗಂ 3ನೇ ರನ್ ಓಡಲಾರಂಭಿಸಿದರು. ಬೌಂಡರಿ ಲೈನ್​ನಿಂದ ಚೆಂಡು ನೇರವಾಗಿ ಬೌಲರ್​ನತ್ತ ತೂರಿ ಬಂತು. ಈ ವೇಳೆಯೂ ರನೌಟ್ ಮಾಡುವ ಅವಕಾಶವಿತ್ತು. ಆದರೆ ಬೌಲರ್ ಚೆಂಡನ್ನು ಹಿಡಿಯುವಲ್ಲಿ ವಿಫಲರಾದರು.

ಈ ಮೂಲಕ ಗುಜರ್​ಪ್ನೀತ್ ಸಿಂಗ್ ಹಾಗೂ ರಾಜಲಿಂಗಂ ಒಂದೇ ಎಸೆತದಲ್ಲಿ ಮೂರು ರನ್ ಓಡುವ ಮೂಲಕ 20 ಓವರ್​ಗಳಲ್ಲಿ  ಮಧುರೈ ಪ್ಯಾಂಥರ್ಸ್ ತಂಡದ ಮೊತ್ತವನ್ನು 150 ಕ್ಕೆ ತಂದು ನಿಲ್ಲಿಸಿದರು.

ರನೌಟ್ ಚಾನ್ಸ್ ಮಿಸ್ ವಿಡಿಯೋ:

ಗೆದ್ದು ಬೀಗಿದ ಅಶ್ವಿನ್ ಪಡೆ:

ಒಂದೇ ಎಸೆತದಲ್ಲಿ ಮೂರು ಬಾರಿ ರನೌಟ್ ಮಿಸ್ ಮಾಡಿ ನಗೆಪಾಟಲಿಗೀಡಾಗಿದ್ದ ದಿಂಡಿಗಲ್ ಡ್ರಾಗನ್ಸ್ ತಂಡವು ಬ್ಯಾಟಿಂಗ್​​ನಲ್ಲಿ ಭರ್ಜರಿ ಪ್ರದರ್ಶನ ನೀಡಿತು. ಮಧುರೈ ಪ್ಯಾಂಥರ್ಸ್ ನೀಡಿದ 150 ರನ್​ಗಳ ಗುರಿಯನ್ನು 12.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇದನ್ನೂ ಓದಿ: ಸೋಲಿನ ಸರಪಳಿ ಬ್ರೇಕ್… 3 ತಂಡಗಳಿಗೆ ಒಲಿದ ಚಾಂಪಿಯನ್ ಪಟ್ಟ

ದಿಂಡಿಗಲ್ ಡ್ರಾಗನ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ರವಿಚಂದ್ರನ್ ಅಶ್ವಿನ್ 29 ಎಸೆತಗಳಲ್ಲಿ 49 ರನ್ ಬಾರಿಸಿದರೆ, ಶಿವಂ ಸಿಂಗ್ 41 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 86 ರನ್ ಚಚ್ಚಿ ಮಿಂಚಿದರು.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ