AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಎಸೆತದಲ್ಲಿ 8 ರನ್​ ನೀಡಿ ಪಂದ್ಯ ಸೋಲಿಸಿದ ಯುವ ವೇಗಿ

TNPL 2025: ತಮಿಳುನಾಡು ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ಸೇಲಂ ಸ್ಪಾರ್ಟನ್ಸ್ ತಂಡವು ರೋಚಕ ಜಯ ಸಾಧಿಸಿದೆ. ಅದು ಕೂಡ ಕೊನೆಯ ಓವರ್​ನಲ್ಲಿ. ಆದರೆ ಇಡೀ ಪಂದ್ಯದ ಚಿತ್ರಣ ಬದಲಾಗಿದ್ದು 19ನೇ ಓವರ್​ನಲ್ಲಿ. ಅಂದರೆ ನಿರ್ಣಾಯಕ ಹಂತದಲ್ಲಿ ಒಂದೇ ಓವರ್​ನಲ್ಲಿ 11 ಎಸೆತಗಳನ್ನು ಎಸೆಯುವ ಮೂಲಕ ತಿರುಪ್ಪೂರ್ ತಮಿಳನ್ಸ್ ವೇಗಿ ತಂಡದ ಸೋಲಿಗೆ ಕಾರಣರಾದರು.

ಒಂದೇ ಎಸೆತದಲ್ಲಿ 8 ರನ್​ ನೀಡಿ ಪಂದ್ಯ ಸೋಲಿಸಿದ ಯುವ ವೇಗಿ
Esakkimuthu
ಝಾಹಿರ್ ಯೂಸುಫ್
|

Updated on: Jun 14, 2025 | 10:30 AM

Share

ಕ್ರಿಕೆಟ್‌ನಲ್ಲಿ ಒಂದು ಚೆಂಡು ಅಥವಾ ಒಂದು ಓವರ್ ಪಂದ್ಯದ ದಿಕ್ಕನ್ನು ಹೇಗೆ ಬದಲಾಯಿಸಬಹುದು ಎಂಬುದಕ್ಕೆ ಅತ್ಯುತ್ತಮ ಉದಾಹರಣೆ ಜೂನ್ 13 ರಂದು ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ನಡೆದ 9ನೇ ಪಂದ್ಯ. ಈ ಪಂದ್ಯವನ್ನು ಸೇಲಂ ಸ್ಪಾರ್ಟನ್ಸ್ ತಂಡವು ಕೊನೆಯ ಓವರ್​ನಲ್ಲಿ ಗೆದ್ದುಕೊಂಡಿತು. ಇದಕ್ಕೆ ಕಾರಣರಾಗಿದ್ದು ತಿರುಪ್ಪೂರ್ ತಮಿಳನ್ಸ್ ವೇಗಿ ಇಸಾಕಿಮುತ್ತು.

ಈ ಪಂದ್ಯದ 19ನೇ ಓವರ್​ ಎಸೆದ ಇಸಾಕಿಮುತ್ತು ಒಂದೇ ಎಸೆತದಲ್ಲಿ 8 ರನ್​ಗಳನ್ನು ಬಿಟ್ಟು ಕೊಟ್ಟಿದ್ದರು. ಅಷ್ಟೇ ಅಲ್ಲದೆ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಅತ್ಯಂತ ದೀರ್ಘ ಮತ್ತು ದುಬಾರಿ ಓವರ್ ಎಸೆದ ಅನಗತ್ಯ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡರು. .

ಒಂದೇ ಎಸೆತದಲ್ಲಿ 8 ರನ್:

ಸೇಲಂನ ಎಸ್​ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ತಿರುಪ್ಪೂರ್ ತಮಿಳನ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 177 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೇಲಂ ಸ್ಪಾರ್ಟನ್ಸ್ ತಂಡಕ್ಕೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿದ್ದವು.

ಈ ವೇಳೆ ತಿರುಪ್ಪೂರ್ ತಮಿಳನ್ಸ್ ತಂಡದ ನಾಯಕ ಸಾಯಿ ಕಿಶೋರ್ 19ನೇ ಓವರ್ ಅನ್ನು ಇಸಾಕಿಮುತ್ತು ಅವರಿಗೆ ನೀಡಿದರು. ಅತ್ತ ಕ್ರೀಸ್​ನಲ್ಲಿದ್ದ ಸೇಲಂ ಸ್ಪಾರ್ಟನ್ಸ್ ಬ್ಯಾಟರ್​ಗಳಾದ ಭೂಪತಿ ಕುಮಾರ್ ಮತ್ತು ಹರೀಶ್ ಕುಮಾರ್ ಒಟ್ಟಾಗಿ ಬಲಗೈ ವೇಗಿಯ ಮೊದಲ 5 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು 2 ಬೌಂಡರಿಗಳೊಂದಿಗೆ 17 ರನ್ ಗಳಿಸಿದರು.

ಇದಾಗ್ಯೂ ಕೊನೆಯ 7 ಎಸೆತಗಳಲ್ಲಿ ಸೇಲಂ ಸ್ಪಾರ್ಟನ್ಸ್ ತಂಡಕ್ಕೆ 14 ರನ್​ಗಳು ಬೇಕಿದ್ದವು. ಆದರೆ ಇಸಾಕಿಮುತ್ತು 19ನೇ ಓವರ್​ನ ಕೊನೆಯ ಎಸೆತವನ್ನು ಮುಗಿಸಲು ಪರದಾಡಿದರು. ಪರಿಣಾಮ 4 ನೋಬಾಲ್​ಗಳು ಮೂಡಿಬಂದವು. ಈ ಅವಕಾಶವನ್ನು ಬಳಸಿಕೊಂಡ ಸೇಲಂ ಬ್ಯಾಟರ್​ಗಳು ಒಟ್ಟು 8 ರನ್​ಗಳಿಸಲು ಯಶಸ್ವಿಯಾದರು.

11 ಎಸೆತಗಳು:

19ನೇ ಓವರ್​ನಲ್ಲಿ ಇಸಾಕಿಮುತ್ತು ಎಸೆದದ್ದು ಬರೋಬ್ಬರಿ 11 ಎಸೆತಗಳನ್ನು ಎಸೆದರು. ಅಲ್ಲದೆ 4 ಓವರ್​ಗಳಲ್ಲಿ ಒಂದೇ ಒಂದು ವಿಕೆಟ್ ಪಡೆಯದೇ 53 ರನ್​​ಗಳನ್ನು ಬಿಟ್ಟುಕೊಟ್ಟರು.

ಇದನ್ನೂ ಓದಿ: ಬವುಮಾ ಭರ್ಜರಿ ಬ್ಯಾಟಿಂಗ್​ಗೆ ಬಾಬರ್ ವಿಶ್ವ ದಾಖಲೆಯೇ ಬ್ರೇಕ್

6 ರನ್​ಗಳ ಗುರಿ:

ಇಸಾಕಿಮುತ್ತು 19ನೇ ಓವರ್​ನಲ್ಲಿ 25 ರನ್ ನೀಡಿದ್ದ ಪರಿಣಾಮ ಸೇಲಂ ಸ್ಪಾರ್ಟನ್ಸ್ ತಂಡ ಕೊನೆಯ ಓವರ್​ನಲ್ಲಿ ಕೇವಲ 6 ರನ್​ಗಳ ಗುರಿ ಪಡೆಯಿತು.  ಸುಲಭ ಗುರಿಯನ್ನು ಬೆನ್ನತ್ತಿದ ಸೇಲಂ ಸ್ಪಾರ್ಟನ್ಸ್ 19.5 ಓವರ್​ಗಳಲ್ಲಿ 178 ರನ್ ಬಾರಿಸಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ