AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

U-19 Asia Cup: ಅಫ್ಘಾನಿಸ್ತಾನವನ್ನು ಮಣಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತದ ಯುವ ಪಡೆ..!

U-19 Asia Cup: ಅಂಡರ್-19 ಏಷ್ಯಾಕಪ್‌ನ ಸೆಮಿಫೈನಲ್‌ಗೆ ಭಾರತ ತಂಡ ತನ್ನ ಸ್ಥಾನವನ್ನು ಖಚಿತಪಡಿಸಿದೆ. ಎ ಗುಂಪಿನ ತನ್ನ ಮೂರನೇ ಪಂದ್ಯದಲ್ಲಿ ಯಶ್ ಧುಲ್ ನೇತೃತ್ವದ ಭಾರತ ತಂಡವು ಅಫ್ಘಾನಿಸ್ತಾನವನ್ನು 4 ವಿಕೆಟ್‌ಗಳಿಂದ ಸೋಲಿಸಿತು.

U-19 Asia Cup: ಅಫ್ಘಾನಿಸ್ತಾನವನ್ನು ಮಣಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತದ ಯುವ ಪಡೆ..!
ಭಾರತದ ಯುವ ಪಡೆ
TV9 Web
| Edited By: |

Updated on: Dec 27, 2021 | 8:05 PM

Share

ಅಂಡರ್-19 ಏಷ್ಯಾಕಪ್‌ನ ಸೆಮಿಫೈನಲ್‌ಗೆ ಭಾರತ ತಂಡ ತನ್ನ ಸ್ಥಾನವನ್ನು ಖಚಿತಪಡಿಸಿದೆ. ಎ ಗುಂಪಿನ ತನ್ನ ಮೂರನೇ ಪಂದ್ಯದಲ್ಲಿ ಯಶ್ ಧುಲ್ ನೇತೃತ್ವದ ಭಾರತ ತಂಡವು ಅಫ್ಘಾನಿಸ್ತಾನವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಟೂರ್ನಿಯಲ್ಲಿ ಎರಡನೇ ಗೆಲುವಿನೊಂದಿಗೆ ಭಾರತ ತಂಡ ಸೆಮಿಫೈನಲ್‌ಗೆ ಟಿಕೆಟ್ ಕಾಯ್ದಿರಿಸಿದೆ. ಮತ್ತೊಮ್ಮೆ ಈ ರೋಚಕ ಪಂದ್ಯದಲ್ಲಿ ಉತ್ತಮ ಅರ್ಧಶತಕ ಗಳಿಸಿ ಯಶಸ್ವಿ ರನ್ ಚೇಸ್‌ಗೆ ಅಡಿಪಾಯ ಹಾಕಿದ ಆರಂಭಿಕ ಆಟಗಾರ ಹರ್ನೂರ್ ಸಿಂಗ್ ಪನ್ನು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಯುಎಇಯಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ ಭಾರತ ತಂಡ ಈ ಹಿಂದೆ ಆತಿಥೇಯ ಯುಎಇಯನ್ನು ಸೋಲಿಸಿದ್ದರೆ, ಪಾಕಿಸ್ತಾನದ ಕೈಯಲ್ಲಿ ಸೋಲನ್ನು ಎದುರಿಸಬೇಕಾಯಿತು.

ದುಬೈನ ಐಸಿಸಿ ಅಕಾಡೆಮಿಯಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ ಡಿಸೆಂಬರ್ 27 ಸೋಮವಾರದಂದು ಭಾರತ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಿದ್ದವು. ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅಫ್ಘಾನಿಸ್ತಾನದ ಇನ್ನಿಂಗ್ಸ್‌ನಲ್ಲಿ ಭಾರತವು ಉತ್ತಮ ಆರಂಭವನ್ನು ಹೊಂದಿತ್ತು ಮತ್ತು ಬಹಿರಂಗವಾಗಿ ರನ್ ಗಳಿಸುವ ಅವಕಾಶವನ್ನು ನೀಡಲಿಲ್ಲ. 29ನೇ ಓವರ್‌ಗೆ ಅಫ್ಘಾನಿಸ್ತಾನ ಕೇವಲ 101 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು. ಇಲ್ಲಿಂದ ಅಫ್ಘಾನಿಸ್ತಾನದ ನಾಯಕ ಸುಲಿಮಾನ್ ಸಫಿ ಮತ್ತು ಇಜಾಜ್ ಅಹ್ಮದ್ ಅಹ್ಮದ್‌ಜಾಯ್ ತಂಡಕ್ಕೆ ಮುನ್ನಡೆ ತಂದುಕೊಟ್ಟರು. ಇವರಿಬ್ಬರ ನಡುವೆ ನಾಲ್ಕನೇ ವಿಕೆಟ್‌ಗೆ 88 ರನ್‌ಗಳ ಜೊತೆಯಾಟವಿತ್ತು.

ಇಜಾಜ್ ಮತ್ತು ಸುಲಿಮಾನ್ ಭಾರತಕ್ಕೆ ಕಂಟಕವಾದರು ಸುಲಿಮಾನ್ 86 ಎಸೆತಗಳಲ್ಲಿ 73 ರನ್ ಗಳಿಸಿ ಔಟಾದರು. ಅದೇ ಸಮಯದಲ್ಲಿ, ಇಜಾಜ್ ಅಹ್ಮದ್ ಕೇವಲ 68 ಎಸೆತಗಳಲ್ಲಿ 86 ರನ್ ಗಳಿಸಿದರು. ಈ ವೇಳೆ ಅವರು 7 ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿದರು. ಇಜಾಜ್ ಹೊರತಾಗಿ ಖೈಬರ್ ವಾಲಿ ಕೂಡ 12 ಎಸೆತಗಳಲ್ಲಿ 20 ರನ್ ಗಳಿಸಿದರು. ಅಫ್ಘಾನಿಸ್ತಾನದ ಇನ್ನಿಂಗ್ಸ್‌ನ ವಿಶೇಷವೆಂದರೆ ಕೊನೆಯ ಓವರ್‌ನಲ್ಲಿ ಇಜಾಜ್ ಮತ್ತು ಖೈಬರ್ 3 ಸಿಕ್ಸರ್ ಮತ್ತು 1 ಬೌಂಡರಿ ಸಹಾಯದಿಂದ 27 ರನ್ ಗಳಿಸಿದರು, ಅದರ ಆಧಾರದ ಮೇಲೆ 4 ವಿಕೆಟ್ ನಷ್ಟಕ್ಕೆ 259 ರನ್ ಗಳಿಸಿತು. ಭಾರತದ ಪರ ವಿಕ್ಕಿ ಓಸ್ತ್ವಾಲ್ (1/35) ಮತ್ತು ಕೌಶಲ್ ತಾಂಬೆ (1/28) ಭಾರತಕ್ಕೆ ಅತ್ಯಂತ ಪರಿಣಾಮಕಾರಿ ಬೌಲರ್‌ಗಳೆಂದು ಸಾಬೀತುಪಡಿಸಿದರು.

ಹರ್ನೂರ್​ನಿಂದ ಮತ್ತೊಂದು ಅಮೋಘ ಇನ್ನಿಂಗ್ಸ್ ಇದಕ್ಕೆ ಪ್ರತಿಯಾಗಿ ಆರಂಭಿಕ ಜೋಡಿ ಹರ್ನೂರ್ ಸಿಂಗ್ ಮತ್ತು ಆಂಗ್ಕ್ರಿಶ್ ರಘುವಂಶಿ ಭಾರತಕ್ಕೆ ಬಲಿಷ್ಠ ಆರಂಭ ನೀಡಿದರು. ಇಬ್ಬರೂ 18 ಓವರ್‌ಗಳಲ್ಲಿ 104 ರನ್ ಸೇರಿಸುವ ಮೂಲಕ ತಂಡಕ್ಕೆ ಉತ್ತಮ ಅಡಿಪಾಯ ನಿರ್ಮಿಸಿದರು. ಆಂಗ್‌ಕ್ರಿಶ್ (35) ವಿಕೆಟ್‌ನೊಂದಿಗೆ ಈ ಜೋಡಿ ಮುರಿದುಬಿತ್ತು. ಇದಾದ ಬೆನ್ನಲ್ಲೇ ಹರ್ನೂರ್ ಕೂಡ ಅರ್ಧಶತಕ ಪೂರೈಸಿ ಪೆವಿಲಿಯನ್​ಗೆ ಮರಳಿದರು. ಹರ್ನೂರ್ 74 ಎಸೆತಗಳಲ್ಲಿ 8 ಬೌಂಡರಿಗಳ ನೆರವಿನಿಂದ 65 ರನ್ ಗಳಿಸಿ ಪ್ರಬಲ ಇನಿಂಗ್ಸ್ ಕಟ್ಟಿದರು. ಹರ್ನೂರ್ ಈ ಹಿಂದೆ ಯುಎಇ ವಿರುದ್ಧ ಶತಕ ಬಾರಿಸಿದ್ದರು. ಪಾಕಿಸ್ತಾನ ವಿರುದ್ಧವೂ ಉತ್ತಮ ಸ್ಕೋರ್ ಗಳಿಸಿದ್ದರು. ಹರ್ನೂರ್ ಬಳಿಕ ಎಸ್.ರಶೀದ್ ಕೂಡ ಅಗ್ಗವಾಗಿ ಪೆವಿಲಿಯನ್​ಗೆ ಮರಳಿದರು.

ತಾಂಬೆ-ಬಾವಾ ಮ್ಯಾಚ್ ವಿನ್ನಿಂಗ್ ಜೊತೆಯಾಟ ತ್ವರಿತ ಹಿನ್ನಡೆಯ ನಂತರ, ತಂಡಕ್ಕೆ ಜೊತೆಯಾಟದ ಅಗತ್ಯವಿತ್ತು. ನಾಯಕ ಯಶ್ ನಿಶಾಂತ್ ಸಿಂಧು ಅವರೊಂದಿಗೆ 46 ರನ್ ಸೇರಿಸಿದರು. 36ನೇ ಓವರ್​ನಲ್ಲಿ ನಾಯಕ ಯಶ್ ವಿಕೆಟ್ ಕೂಡ ಪತನವಾಯಿತು. ಈ ವೇಳೆಗೆ ಭಾರತದ ಸ್ಕೋರ್ 183 ರನ್ ಆಗಿತ್ತು. ಎರಡು ಓವರ್‌ಗಳ ನಂತರ ಆರಾಧ್ಯ ಯಾದವ್ ಅವರ ಆಟವೂ 197 ಸ್ಕೋರ್‌ನಲ್ಲಿ ಕೊನೆಗೊಂಡಿತು. ಇಲ್ಲಿಂದ ರಾಜ್ ಬಾವಾ ಮತ್ತು ಕೌಶಲ್ ತಾಂಬೆ ತಂಡಕ್ಕೆ ಉತ್ತಮ ಜೊತೆಯಾಟ ನೀಡಿದರು. ತಾಂಬೆ 49ನೇ ಓವರ್‌ನ ಮೊದಲ ಎರಡು ಎಸೆತಗಳಲ್ಲಿ ನಾಲ್ಕು ಬೌಂಡರಿ ಗಳಿಸಿ ತಂಡಕ್ಕೆ 4 ವಿಕೆಟ್‌ಗಳ ಭರ್ಜರಿ ಜಯ ತಂದುಕೊಟ್ಟರು. ತಾಂಬೆ ಮತ್ತು ಬಾವಾ ನಡುವೆ 65 ರನ್‌ಗಳ ಅಜೇಯ ಜೊತೆಯಾಟವಿತ್ತು.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ