Sign In

By signing in or creating an account, you agree with Associated Broadcasting Company's Terms & Conditions and Privacy Policy.

2019ರ ವಿಶ್ವಕಪ್​ನಲ್ಲಿ ಧೋನಿ ಭಾರತವನ್ನು ಉದ್ದೇಶಪೂರ್ವಕವಾಗಿ ಸೋಲಿಸಿದ್ರಾ? ಈ ಬಗ್ಗೆ ಅಂಪೈರ್ ಹೇಳಿದ್ದೇನು?

2019ರ ಏಕದಿನ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದ ಟೀಮ್ ಇಂಡಿಯಾ ಸೆಮಿಫೈನಲ್​ನಲ್ಲಿ ಎಡವಿತು. ಫೈನಲ್​ಗೇರಲು ನಿರ್ಣಾಯಕವಾಗಿದ್ದ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಪರ ಮಹೇಂದ್ರ ಸಿಂಗ್ ಧೋನಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಬ್ಯಾಟಿಂಗ್ ಪರಿಣಾಮ ಭಾರತ ತಂಡವು 18 ರನ್​ಗಳಿಂದ ಸೋಲಬೇಕಾಯಿತು ಎಂದು ವಾದಿಸುವವರಿದ್ದಾರೆ.

2019ರ ವಿಶ್ವಕಪ್​ನಲ್ಲಿ ಧೋನಿ ಭಾರತವನ್ನು ಉದ್ದೇಶಪೂರ್ವಕವಾಗಿ ಸೋಲಿಸಿದ್ರಾ? ಈ ಬಗ್ಗೆ ಅಂಪೈರ್ ಹೇಳಿದ್ದೇನು?
Ms Dhoni
Follow us
ಝಾಹಿರ್ ಯೂಸುಫ್
|

Updated on: Jan 29, 2025 | 1:04 PM

2019ರ ಏಕದಿನ ವಿಶ್ವಕಪ್​ನ ಸೆಮಿಫೈನಲ್ ಪಂದ್ಯ. ಮ್ಯಾಂಚೆಸ್ಟರ್​ನ ಓಲ್ಡ್​ ಟ್ರಾಫೋರ್ಡ್ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡದ ಪರ ನಾಯಕ ಕೇನ್ ವಿಲಿಯಮ್ಸನ್ (67) ಹಾಗೂ ರಾಸ್ ಟೇಲರ್ (74) ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನಿಂದ ನ್ಯೂಝಿಲೆಂಡ್ ತಂಡ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 239 ರನ್ ಕಲೆಹಾಕಿತು.

240 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ 1 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ದಿನೇಶ್ ಕಾರ್ತಿಕ್ (6), ರಿಷಭ್ ಪಂತ್ (32) ಹಾಗೂ ಹಾರ್ದಿಕ್ ಪಾಂಡ್ಯ 32 ರನ್ ಬಾರಿಸಿ ಔಟಾದರು.

ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ ನಿಧಾನಗತಿಯ ಇನಿಂಗ್ಸ್ ಆಡಿದ್ದರು. ಒಂದೆಡೆ ರವೀಂದ್ರ ಜಡೇಜಾ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರೆ, ಇತ್ತ ಧೋನಿ 72 ಎಸೆತಗಳಲ್ಲಿ 1 ಫೋರ್ ಹಾಗೂ 1 ಸಿಕ್ಸ್​ಗಳೊಂದಿಗೆ 50 ರನ್​ಗಳಿಸಿ ರನೌಟ್ ಆದರು. ಇದೇ ವೇಳೆ ರವೀಂದ್ರ ಜಡೇಜಾ 59 ಎಸೆತಗಳಲ್ಲಿ 77 ರನ್ ಚಚ್ಚಿದ್ದರು.

ನಿರ್ಣಾಯಕ ಹಂತದಲ್ಲಿ ಧೋನಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ ಧೋನಿ ಆ ಬಳಿಕ ಭಾರೀ ಟೀಕೆಗೆ ಒಳಗಾದರು. ಅದರಲ್ಲೂ ಕೊನೆಯ ಓವರ್​ಗಳ ವೇಳೆ ಧೋನಿ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿತ್ತು. ಅಲ್ಲದೆ ಈ ಪಂದ್ಯದಲ್ಲಿ ಧೋನಿ ರನೌಟ್ ಆಗುವ ಮೂಲಕ ಕೊನೆಯ ಕ್ಷಣದಲ್ಲಿ ವಿಕೆಟ್ ಕೈಚೆಲ್ಲಿದರು.

ಪರಿಣಾಮ ಟೀಮ್ ಇಂಡಿಯಾ ಈ ಪಂದ್ಯದಲ್ಲಿ 18 ರನ್​ಗಳ ಸೋಲನುಭವಿಸಿತು. ಈ ಸೋಲಿಗೆ ಪ್ರಮುಖ ಕಾರಣ ಮಹೇಂದ್ರ ಸಿಂಗ್ ಧೋನಿ ಅವರ ನಿಧಾನಗತಿಯ ಇನಿಂಗ್ಸ್ ಎಂದು ವಾದಿಸುವವರು ಇದ್ದಾರೆ. ಅಲ್ಲದೆ 2019ರ ಸೆಮಿಫೈನಲ್​ನಲ್ಲಿ ಭಾರತವನ್ನು ಧೋನಿ ಉದ್ದೇಶಪೂರ್ವಕವಾಗಿ ಸೋಲಿಸಿದ್ದರು ಎಂಬ ಆರೋಪ ಹೊರಿಸುವವರು ಸೋಷಿಯಲ್ ಮೀಡಿಯಾದಲ್ಲಿ ಕಾಣ ಸಿಗುತ್ತಾರೆ.

ಈ ಆರೋಪಗಳ ಬಗ್ಗೆ ಭಾರತದ ಹಿರಿಯ ಅಂಪೈರ್‌ಗಳಲ್ಲಿ ಒಬ್ಬರಾಗಿರುವ ಅನಿಲ್ ಚೌಧರಿ ಅವರನ್ನು ಕೇಳಲಾಗಿದೆ.  ಪೋಡ್​ಕಾಸ್ಟ್​ ಸಂದರ್ಶನವೊಂದರಲ್ಲಿ ಕಾಣಿಸಿಕೊಂಡ ಅನಿಲ್ ಚೌಧರಿಗೆ,  ಅಂದು ಧೋನಿಯ ನಿಧಾನಗತಿಯ ಬ್ಯಾಟಿಂಗ್​ನಿಂದಾಗಿ ಭಾರತ ತಂಡ ಸೋಲನುಭವಿಸಿತೇ? ಧೋನಿ ಉದ್ದೇಶಕಪೂರ್ವಕವಾಗಿಯೇ ಸ್ಲೋ ಇನಿಂಗ್ಸ್ ಆಡಿದ್ರಾ? ಎಂದು ಪ್ರಶ್ನಿಸಲಾಯಿತು.

ಇದಕ್ಕೆ ಉತ್ತರಿಸಿದ ಅನಿಲ್ ಚೌಧರಿ, ಅವತ್ತು ಮಹೇಂದ್ರ ಸಿಂಗ್ ಧೋನಿ 50 ರನ್​ ಬಾರಿಸಿದ್ದರಿಂದ ಟೀಮ್ ಇಂಡಿಯಾ ಅಂತಿಮ ಹಂತದವರೆಗೆ ತಲುಪಿದೆ. ಒಂದು ವೇಳೆ ಅವರು ಅರ್ಧಶತಕ ಬಾರಿಸದೇ ಇದ್ದಿದ್ದರೆ, ಭಾರತ ತಂಡವು 50 ರನ್​ಗಳಿಂದ ಸೋಲುತ್ತಿತ್ತು.

ಇದನ್ನೂ ಓದಿ: RCB ಸೇರಿದ ಬಳಿಕ ಸಪ್ಪೆಯಾದ ಸಾಲ್ಟ್

ಇಂತಹ ಚರ್ಚೆಗಳನ್ನು ಹುಟ್ಟುಹಾಕುವವರು ಕ್ರಿಕೆಟ್ ಬಗ್ಗೆ ಸಂಪೂರ್ಣ ಜ್ಞಾನ ಇಲ್ಲದವರು. ಪೂರ್ಣ ಪ್ರಮಾಣದಲ್ಲಿ ಕ್ರಿಕೆಟ್ ಆಡಿದವರು ಇಂತಹ ವಾದ ಮಾಡಲ್ಲ. ಇನ್ನು ಆಡದೇ ಇರುವವರು ಸಹ ಇಂತಹ ವಿತಂಡ ವಾದಕ್ಕೆ ಇಳಿಯಲ್ಲ. ಈ ಅರ್ಧಂಬರ್ಧ ಆಡಿರುತ್ತಾರಲ್ವಾ? ಅವರೇ ಇಂತಹ ಚರ್ಚೆಗಳನ್ನು ಹುಟ್ಟುಹಾಕುವುದು ಎಂದಿದ್ದಾರೆ. ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಭಾರತ ತಂಡವನ್ನು ಉದ್ದೇಶಪೂರ್ವಕವಾಗಿ ಸೋಲಿಸಿದ್ದರು ಎಂಬ ಆರೋಪವನ್ನು ಅನಿಲ್ ಚೌಧರಿ ಅಲ್ಲೆಗೆಳೆದಿದ್ದಾರೆ.

Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?