AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲೀನ್ ಬೌಲ್ಡ್​…ಆದರೆ ನಾಟೌಟ್..!

ಈ ಹಿಂದೆ 2019ರ ಏಕದಿನ ವಿಶ್ವಕಪ್​ ವೇಳೆ ಝಿಂಗ್ ಬೇಲ್ಸ್ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಐಸಿಸಿ ಪ್ರಸ್ತುತ ಪಡಿಸಿದ್ದ ಲೈಟಿಂಗ್ ಬೇಲ್ಸ್​ಗಳು ಬೌಲ್ಡ್ ಆದರೂ ಬೀಳದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಕ್ಲೀನ್ ಬೌಲ್ಡ್​...ಆದರೆ ನಾಟೌಟ್..!
Cricket
TV9 Web
| Edited By: |

Updated on: Dec 10, 2023 | 6:35 PM

Share

ವೇಗದ ಬೌಲರ್ ಎಸೆದ ಬೆಂಕಿ ಚೆಂಡಿಗೆ ಮಧ್ಯದ ಸ್ಟಂಪ್ ಹಿಂದಕ್ಕೆ ಸರಿಯಿತು…ಇತ್ತ ಬ್ಯಾಟ್ಸ್​ಮನ್ ಕೂಡ ಕ್ಲೀನ್ ಬೌಲ್ಡ್ ಆಗಿದ್ದೀನಿ ಎಂದುಕೊಂಡು ಮೈದಾನ ತೊರೆಯಲು ಮುಂದಾಗಿದ್ದರು…ಆದರೆ ಅಂಪೈರ್ ನಾಟೌಟ್ ಅಂದರು. ಇಂತಹದೊಂದು ವಿಚಿತ್ರ ತೀರ್ಪಿಗೆ ಸಾಕ್ಷಿಯಾಗಿದ್ದು ಆಸ್ಟ್ರೇಲಿಯಾದಲ್ಲಿ ನಡೆದ ಕ್ಲಬ್ ಪಂದ್ಯ.

ಮೆಲ್ಬೋರ್ನ್ ಕ್ಲಬ್ ಕ್ರಿಕೆಟ್​ನಲ್ಲಿ ನಡೆದ ಪಂದ್ಯವೊಂದರಲ್ಲಿ ಬ್ಯಾಟರ್ ಕ್ಲೀನ್ ಬೌಲ್ಡ್ ಆದರೂ ಬೇಲ್ಸ್ ಮಾತ್ರ ಬಿದ್ದಿರಲಿಲ್ಲ. ಇತ್ತ ಮಿಡಲ್ ಸ್ಟಂಪ್ ನೋಡಿ ಬ್ಯಾಟ್ಸ್​ಮನ್ ಔಟ್ ಆಗಿದ್ದೇನೆ ಅಂದುಕೊಂಡರು. ಆದರೆ ಐಸಿಸಿ ನಿಯಮದ ಪ್ರಕಾರ ಅಂಪೈರ್ ಟ್ವಿಸ್ಟ್ ನೀಡಿದರು.

ಐಸಿಸಿ ನಿಯಮ ಪ್ರಕಾರ, ಬೌಲ್ಡ್ ಔಟ್ ತೀರ್ಪು ನೀಡಬೇಕಿದ್ದರೆ ಸ್ಟಂಪ್​ ಮೇಲಿಂದ ಬೇಲ್ಸ್ ಬೀಳಬೇಕು. ಆದರೆ ಈ ಪಂದ್ಯದಲ್ಲಿ ಮಧ್ಯದ ಸ್ಟಂಪ್ ಹಿಂದಕ್ಕೆ ಸರಿದರೂ ಬೇಲ್ಸ್ ಮಾತ್ರ ಎಗರಿರಲಿಲ್ಲ. ಹೀಗಾಗಿ ಫೀಲ್ಡ್ ಅಂಪೈರ್ ನಾಟೌಟ್ ಎಂಬ ತೀರ್ಮಾನಕ್ಕೆ ಬಂದರು. ಇದೀಗ ಬೌಲ್ಡ್ ನಾಟೌಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶ್ವಕಪ್​ನಲ್ಲೂ ಬೇಲ್ಸ್​ ವಿವಾದ:

ಈ ಹಿಂದೆ 2019ರ ಏಕದಿನ ವಿಶ್ವಕಪ್​ ವೇಳೆ ಝಿಂಗ್ ಬೇಲ್ಸ್ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಐಸಿಸಿ ಪ್ರಸ್ತುತ ಪಡಿಸಿದ್ದ ಲೈಟಿಂಗ್ ಬೇಲ್ಸ್​ಗಳು ಬೌಲ್ಡ್ ಆದರೂ ಬೀಳದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: IPL 2024: ಐಪಿಎಲ್ ಯಾವಾಗ ಶುರು? ಇಲ್ಲಿದೆ ಉತ್ತರ

ಅದರಲ್ಲೂ 2019 ರ ಏಕದಿನ ವಿಶ್ವಕಪ್​ನಲ್ಲಿ ಬೌಲ್ಡ್ ಆದರೂ ಐವರು ಬ್ಯಾಟ್ಸ್​ಮನ್​ಗಳು ಬೇಲ್ಸ್ ಬೀಳದಿರುವ ಕಾರಣ ಜೀವದಾನ ಪಡೆದಿದ್ದರು.  ಈ ಬಗ್ಗೆ ಅಪಸ್ವರಗಳು ಕೇಳಿ ಬಂದಿದ್ದವು. ಇದಾದ ಬಳಿಕ ಬೇಲ್ಸ್ ವಿನ್ಯಾಸ ಬಗ್ಗೆ ಐಸಿಸಿ ಹೆಚ್ಚಿನ ಗಮನ ಕೇಂದ್ರೀಕರಿಸಿತ್ತು.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?