AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲೀನ್ ಬೌಲ್ಡ್​…ಆದರೆ ನಾಟೌಟ್..!

ಈ ಹಿಂದೆ 2019ರ ಏಕದಿನ ವಿಶ್ವಕಪ್​ ವೇಳೆ ಝಿಂಗ್ ಬೇಲ್ಸ್ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಐಸಿಸಿ ಪ್ರಸ್ತುತ ಪಡಿಸಿದ್ದ ಲೈಟಿಂಗ್ ಬೇಲ್ಸ್​ಗಳು ಬೌಲ್ಡ್ ಆದರೂ ಬೀಳದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಕ್ಲೀನ್ ಬೌಲ್ಡ್​...ಆದರೆ ನಾಟೌಟ್..!
Cricket
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 10, 2023 | 6:35 PM

ವೇಗದ ಬೌಲರ್ ಎಸೆದ ಬೆಂಕಿ ಚೆಂಡಿಗೆ ಮಧ್ಯದ ಸ್ಟಂಪ್ ಹಿಂದಕ್ಕೆ ಸರಿಯಿತು…ಇತ್ತ ಬ್ಯಾಟ್ಸ್​ಮನ್ ಕೂಡ ಕ್ಲೀನ್ ಬೌಲ್ಡ್ ಆಗಿದ್ದೀನಿ ಎಂದುಕೊಂಡು ಮೈದಾನ ತೊರೆಯಲು ಮುಂದಾಗಿದ್ದರು…ಆದರೆ ಅಂಪೈರ್ ನಾಟೌಟ್ ಅಂದರು. ಇಂತಹದೊಂದು ವಿಚಿತ್ರ ತೀರ್ಪಿಗೆ ಸಾಕ್ಷಿಯಾಗಿದ್ದು ಆಸ್ಟ್ರೇಲಿಯಾದಲ್ಲಿ ನಡೆದ ಕ್ಲಬ್ ಪಂದ್ಯ.

ಮೆಲ್ಬೋರ್ನ್ ಕ್ಲಬ್ ಕ್ರಿಕೆಟ್​ನಲ್ಲಿ ನಡೆದ ಪಂದ್ಯವೊಂದರಲ್ಲಿ ಬ್ಯಾಟರ್ ಕ್ಲೀನ್ ಬೌಲ್ಡ್ ಆದರೂ ಬೇಲ್ಸ್ ಮಾತ್ರ ಬಿದ್ದಿರಲಿಲ್ಲ. ಇತ್ತ ಮಿಡಲ್ ಸ್ಟಂಪ್ ನೋಡಿ ಬ್ಯಾಟ್ಸ್​ಮನ್ ಔಟ್ ಆಗಿದ್ದೇನೆ ಅಂದುಕೊಂಡರು. ಆದರೆ ಐಸಿಸಿ ನಿಯಮದ ಪ್ರಕಾರ ಅಂಪೈರ್ ಟ್ವಿಸ್ಟ್ ನೀಡಿದರು.

ಐಸಿಸಿ ನಿಯಮ ಪ್ರಕಾರ, ಬೌಲ್ಡ್ ಔಟ್ ತೀರ್ಪು ನೀಡಬೇಕಿದ್ದರೆ ಸ್ಟಂಪ್​ ಮೇಲಿಂದ ಬೇಲ್ಸ್ ಬೀಳಬೇಕು. ಆದರೆ ಈ ಪಂದ್ಯದಲ್ಲಿ ಮಧ್ಯದ ಸ್ಟಂಪ್ ಹಿಂದಕ್ಕೆ ಸರಿದರೂ ಬೇಲ್ಸ್ ಮಾತ್ರ ಎಗರಿರಲಿಲ್ಲ. ಹೀಗಾಗಿ ಫೀಲ್ಡ್ ಅಂಪೈರ್ ನಾಟೌಟ್ ಎಂಬ ತೀರ್ಮಾನಕ್ಕೆ ಬಂದರು. ಇದೀಗ ಬೌಲ್ಡ್ ನಾಟೌಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶ್ವಕಪ್​ನಲ್ಲೂ ಬೇಲ್ಸ್​ ವಿವಾದ:

ಈ ಹಿಂದೆ 2019ರ ಏಕದಿನ ವಿಶ್ವಕಪ್​ ವೇಳೆ ಝಿಂಗ್ ಬೇಲ್ಸ್ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಐಸಿಸಿ ಪ್ರಸ್ತುತ ಪಡಿಸಿದ್ದ ಲೈಟಿಂಗ್ ಬೇಲ್ಸ್​ಗಳು ಬೌಲ್ಡ್ ಆದರೂ ಬೀಳದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: IPL 2024: ಐಪಿಎಲ್ ಯಾವಾಗ ಶುರು? ಇಲ್ಲಿದೆ ಉತ್ತರ

ಅದರಲ್ಲೂ 2019 ರ ಏಕದಿನ ವಿಶ್ವಕಪ್​ನಲ್ಲಿ ಬೌಲ್ಡ್ ಆದರೂ ಐವರು ಬ್ಯಾಟ್ಸ್​ಮನ್​ಗಳು ಬೇಲ್ಸ್ ಬೀಳದಿರುವ ಕಾರಣ ಜೀವದಾನ ಪಡೆದಿದ್ದರು.  ಈ ಬಗ್ಗೆ ಅಪಸ್ವರಗಳು ಕೇಳಿ ಬಂದಿದ್ದವು. ಇದಾದ ಬಳಿಕ ಬೇಲ್ಸ್ ವಿನ್ಯಾಸ ಬಗ್ಗೆ ಐಸಿಸಿ ಹೆಚ್ಚಿನ ಗಮನ ಕೇಂದ್ರೀಕರಿಸಿತ್ತು.

ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್