AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲೀನ್ ಬೌಲ್ಡ್​…ಆದರೆ ನಾಟೌಟ್..!

ಈ ಹಿಂದೆ 2019ರ ಏಕದಿನ ವಿಶ್ವಕಪ್​ ವೇಳೆ ಝಿಂಗ್ ಬೇಲ್ಸ್ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಐಸಿಸಿ ಪ್ರಸ್ತುತ ಪಡಿಸಿದ್ದ ಲೈಟಿಂಗ್ ಬೇಲ್ಸ್​ಗಳು ಬೌಲ್ಡ್ ಆದರೂ ಬೀಳದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಕ್ಲೀನ್ ಬೌಲ್ಡ್​...ಆದರೆ ನಾಟೌಟ್..!
Cricket
TV9 Web
| Edited By: |

Updated on: Dec 10, 2023 | 6:35 PM

Share

ವೇಗದ ಬೌಲರ್ ಎಸೆದ ಬೆಂಕಿ ಚೆಂಡಿಗೆ ಮಧ್ಯದ ಸ್ಟಂಪ್ ಹಿಂದಕ್ಕೆ ಸರಿಯಿತು…ಇತ್ತ ಬ್ಯಾಟ್ಸ್​ಮನ್ ಕೂಡ ಕ್ಲೀನ್ ಬೌಲ್ಡ್ ಆಗಿದ್ದೀನಿ ಎಂದುಕೊಂಡು ಮೈದಾನ ತೊರೆಯಲು ಮುಂದಾಗಿದ್ದರು…ಆದರೆ ಅಂಪೈರ್ ನಾಟೌಟ್ ಅಂದರು. ಇಂತಹದೊಂದು ವಿಚಿತ್ರ ತೀರ್ಪಿಗೆ ಸಾಕ್ಷಿಯಾಗಿದ್ದು ಆಸ್ಟ್ರೇಲಿಯಾದಲ್ಲಿ ನಡೆದ ಕ್ಲಬ್ ಪಂದ್ಯ.

ಮೆಲ್ಬೋರ್ನ್ ಕ್ಲಬ್ ಕ್ರಿಕೆಟ್​ನಲ್ಲಿ ನಡೆದ ಪಂದ್ಯವೊಂದರಲ್ಲಿ ಬ್ಯಾಟರ್ ಕ್ಲೀನ್ ಬೌಲ್ಡ್ ಆದರೂ ಬೇಲ್ಸ್ ಮಾತ್ರ ಬಿದ್ದಿರಲಿಲ್ಲ. ಇತ್ತ ಮಿಡಲ್ ಸ್ಟಂಪ್ ನೋಡಿ ಬ್ಯಾಟ್ಸ್​ಮನ್ ಔಟ್ ಆಗಿದ್ದೇನೆ ಅಂದುಕೊಂಡರು. ಆದರೆ ಐಸಿಸಿ ನಿಯಮದ ಪ್ರಕಾರ ಅಂಪೈರ್ ಟ್ವಿಸ್ಟ್ ನೀಡಿದರು.

ಐಸಿಸಿ ನಿಯಮ ಪ್ರಕಾರ, ಬೌಲ್ಡ್ ಔಟ್ ತೀರ್ಪು ನೀಡಬೇಕಿದ್ದರೆ ಸ್ಟಂಪ್​ ಮೇಲಿಂದ ಬೇಲ್ಸ್ ಬೀಳಬೇಕು. ಆದರೆ ಈ ಪಂದ್ಯದಲ್ಲಿ ಮಧ್ಯದ ಸ್ಟಂಪ್ ಹಿಂದಕ್ಕೆ ಸರಿದರೂ ಬೇಲ್ಸ್ ಮಾತ್ರ ಎಗರಿರಲಿಲ್ಲ. ಹೀಗಾಗಿ ಫೀಲ್ಡ್ ಅಂಪೈರ್ ನಾಟೌಟ್ ಎಂಬ ತೀರ್ಮಾನಕ್ಕೆ ಬಂದರು. ಇದೀಗ ಬೌಲ್ಡ್ ನಾಟೌಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶ್ವಕಪ್​ನಲ್ಲೂ ಬೇಲ್ಸ್​ ವಿವಾದ:

ಈ ಹಿಂದೆ 2019ರ ಏಕದಿನ ವಿಶ್ವಕಪ್​ ವೇಳೆ ಝಿಂಗ್ ಬೇಲ್ಸ್ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಐಸಿಸಿ ಪ್ರಸ್ತುತ ಪಡಿಸಿದ್ದ ಲೈಟಿಂಗ್ ಬೇಲ್ಸ್​ಗಳು ಬೌಲ್ಡ್ ಆದರೂ ಬೀಳದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: IPL 2024: ಐಪಿಎಲ್ ಯಾವಾಗ ಶುರು? ಇಲ್ಲಿದೆ ಉತ್ತರ

ಅದರಲ್ಲೂ 2019 ರ ಏಕದಿನ ವಿಶ್ವಕಪ್​ನಲ್ಲಿ ಬೌಲ್ಡ್ ಆದರೂ ಐವರು ಬ್ಯಾಟ್ಸ್​ಮನ್​ಗಳು ಬೇಲ್ಸ್ ಬೀಳದಿರುವ ಕಾರಣ ಜೀವದಾನ ಪಡೆದಿದ್ದರು.  ಈ ಬಗ್ಗೆ ಅಪಸ್ವರಗಳು ಕೇಳಿ ಬಂದಿದ್ದವು. ಇದಾದ ಬಳಿಕ ಬೇಲ್ಸ್ ವಿನ್ಯಾಸ ಬಗ್ಗೆ ಐಸಿಸಿ ಹೆಚ್ಚಿನ ಗಮನ ಕೇಂದ್ರೀಕರಿಸಿತ್ತು.

Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ