AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umran Malik: ಮೂರೇ ಮೂರು ಮ್ಯಾಚ್​ನಲ್ಲಿ ಶತಕ ಪೂರೈಸಿದ ಉಮ್ರಾನ್ ಮಲಿಕ್

Umran Malik: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ವೇಗದ ಬೌಲರ್​ನ ಕೊರತೆಯನ್ನು ಉಮ್ರಾನ್ ಮಲಿಕ್ ಸರಿದೂಗಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

Umran Malik: ಮೂರೇ ಮೂರು ಮ್ಯಾಚ್​ನಲ್ಲಿ ಶತಕ ಪೂರೈಸಿದ ಉಮ್ರಾನ್ ಮಲಿಕ್
Umran Malik
TV9 Web
| Edited By: |

Updated on: Jul 12, 2022 | 3:55 PM

Share

ಟೀಮ್ ಇಂಡಿಯಾದ ಯುವ ಸ್ಪೀಡ್ ಮಾಸ್ಟರ್ ಉಮ್ರಾನ್ ಮಲಿಕ್ (Umran Malik) ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಏಕೆಂದರೆ ಯುವ ವೇಗಿಯ ವೇಗಕ್ಕೆ ಈಗಾಗಲೇ ಖ್ಯಾತ ಕ್ರಿಕೆಟಿಗರು ಮಾರು ಹೋಗಿದ್ದಾರೆ. ಅದರಲ್ಲೂ ಐಪಿಎಲ್​ನಲ್ಲಿ ಶ್ರೇಷ್ಠ ಆಟಗಾರರನ್ನು ಕೂಡ ಕಂಗೆಡಿಸುವಂತೆ ಮಲಿಕ್ ಬೌಲಿಂಗ್ ಮಾಡಿದ್ದರು. ಪರಿಣಾಮ ಎಸ್​ಆರ್​ಹೆಚ್​ ಪರ 14 ಪಂದ್ಯಗಳಲ್ಲಿ 22 ವಿಕೆಟ್ ಉರುಳಿಸಿ ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಟೀಮ್ ಇಂಡಿಯಾದಲ್ಲಿ ಚಾನ್ಸ್​ ಲಭಿಸಿತು. ಆದರೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಮಲಿಕ್ ಎಡವುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಆಡಿರುವ 3 ಪಂದ್ಯಗಳಲ್ಲಿ ಉಮ್ರಾನ್ ಮಲಿಕ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

ಐರ್ಲೆಂಡ್ ವಿರುದ್ದದ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ಮಲಿಕ್​ಗೆ ಮೊದಲ ಪಂದ್ಯದಲ್ಲಿ ಸಿಕ್ಕಿದ್ದು ಕೇವಲ 1 ಓವರ್ ಮಾತ್ರ. ಮಳೆಬಾಧಿತ ಈ ಪಂದ್ಯದಲ್ಲಿ ಒಂದು ಓವರ್ ಬೌಲಿಂಗ್ ಮಾಡಿದ್ದ ಯುವ ವೇಗಿ 14 ರನ್ ನೀಡಿದ್ದರು. ಇದಾಗ್ಯೂ ಚೊಚ್ಚಲ ಪಂದ್ಯದಲ್ಲಿ ವಿಕೆಟ್ ಪಡೆಯುವಲ್ಲಿ ಸಫಲರಾಗಿರಲಿಲ್ಲ.

ಇನ್ನು ಐರ್ಲೆಂಡ್ ವಿರುದ್ದದ 2ನೇ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಕೊನೆಯ ಓವರ್​ ಮೂಲಕ ಗಮನ ಸೆಳೆದಿದ್ದರು. ಈ ಪಂದ್ಯದ ಅಂತಿಮ ಓವರ್​ನಲ್ಲಿ ಐರ್ಲೆಂಡ್​ಗೆ  17 ರನ್ ಬೇಕಿತ್ತು. ಈ ವೇಳೆ ಭರ್ಜರಿ ಬೌಲಿಂಗ್ ಮಾಡಿದ್ದ ಮಲಿಕ್ ಕೇವಲ 12 ರನ್​ ನೀಡಿ ಟೀಮ್ ಇಂಡಿಯಾಗೆ 4 ರನ್​ಗಳ ಜಯ ತಂದುಕೊಟ್ಟಿದ್ದರು. ಆದರೆ ಈ ಪಂದ್ಯದಲ್ಲಿ 4 ಓವರ್​ಗಳಲ್ಲಿ 1 ವಿಕೆಟ್ ಪಡೆದರೂ ನೀಡಿದ್ದು ಬರೋಬ್ಬರಿ 42 ರನ್​ಗಳು.

ಇದನ್ನೂ ಓದಿ
Image
Virat Kohli: ವಿರಾಟ್ ಕೊಹ್ಲಿಯ ಫಾರ್ಮ್​ ಬಗ್ಗೆ ಟೀಕೆ ಮಾಡುವ ಮುನ್ನ ಈ ಅಂಕಿ ಅಂಶಗಳನ್ನೊಮ್ಮೆ ನೋಡಿ..!
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಹಾಗೆಯೇ ಇಂಗ್ಲೆಂಡ್ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಅವಕಾಶ ಪಡೆದ ಮಲಿಕ್ 1 ವಿಕೆಟ್ ಕಬಳಿಸಿದ್ದರು. ಆದರೆ ಮತ್ತೊಮ್ಮೆ ದುಬಾರಿಯಾಗುವ ಮೂಲಕ ನಿರಾಸೆ ಮೂಡಿಸಿದರು. ಅಂದರೆ ಇಂಗ್ಲೆಂಡ್ ವಿರುದ್ದ 4 ಓವರ್​ಗಳಲ್ಲಿ ಬರೋಬ್ಬರಿ 56 ರನ್ ಚಚ್ಚಿಸಿಕೊಂಡಿದ್ದರು. ಇಲ್ಲಿ ಮೂರು ಪಂದ್ಯಗಳನ್ನಾಡಿರುವ ಉಮ್ರಾನ್ ಮಲಿಕ್ 12 ಕ್ಕಿಂತ ಎಕಾನಮಿ ರೇಟ್​ನಲ್ಲಿ ರನ್​ ಬಿಟ್ಟುಕೊಟ್ಟಿದ್ದಾರೆ.

ಅಂದರೆ ಆಡಿರುವ ಮೂರು ಪಂದ್ಯಗಳ ಒಟ್ಟು 112 ರನ್​ಗಳನ್ನು ನೀಡಿದ್ದಾರೆ. ಅದು ಕೂಡ 12.44 ಎಕಾನಮಿ ರೇಟ್​ನಲ್ಲಿ. ಇನ್ನು ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ. ಇಲ್ಲಿ ಉಮ್ರಾನ್ ಮಲಿಕ್ ಅವರನ್ನು ಮುಂಬರುವ ಟಿ20 ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ವೇಗದ ಬೌಲರ್​ನ ಕೊರತೆಯನ್ನು ಉಮ್ರಾನ್ ಮಲಿಕ್ ಸರಿದೂಗಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೀಗ ವಿದೇಶಿ ಪಿಚ್​ಗಳಲ್ಲಿ ದುಬಾರಿ ಎನಿಸಿಕೊಳ್ಳುವ ಮೂಲಕ ಉಮ್ರಾನ್ ಮಲಿಕ್ ಆರಂಭದಲ್ಲೇ ನಿರಾಸೆ ಮೂಡಿಸಿದ್ದಾರೆ. ಇದಾಗ್ಯೂ ಮುಂಬರುವ ವೆಸ್ಟ್ ಇಂಡೀಸ್ ಟಿ20 ಸರಣಿಗೆ ಮಲಿಕ್ ಆಯ್ಕೆಯಾಗುವ ಸಾಧ್ಯತೆಯಿದೆ. ಈ ವೇಳೆಯೂ ದುಬಾರಿಯಾದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದು ಅನುಮಾನ ಎಂದೇ ಹೇಳಬಹುದು.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ