AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umran Malik: ಧೋನಿಗೆ 154 ಕಿ.ಮೀ. ವೇಗದ ಯಾರ್ಕರ್: ಐಪಿಎಲ್ 2022 ರಲ್ಲಿ ನೂತನ ದಾಖಲೆ ಬರೆದ ಉಮ್ರಾನ್ ಮಲಿಕ್

SRH vs CSK: ಉಮ್ರಾನ್‌ ಮಲಿಕ್ (Umran Malik) ಅತ್ಯಂತ ವೇಗದಲ್ಲಿ ಬೌಲ್‌ ಮಾಡುವ ಮೂಲಕ ಪ್ರಸಕ್ತ ಆವೃತ್ತಿಯಲ್ಲಿ ವಿಶೇಷ ದಾಖಲೆಯನ್ನು ಮಾಡಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್​ಕೆ ಬ್ಯಾಟಿಂಗ್ ಇನಿಂಗ್ಸ್‌ನಲ್ಲಿ ಎರಡು ಬಾರಿ 154 ಕಿ. ಮೀ ವೇಗದಲ್ಲಿ ಬೌಲಿಂಗ್ ಮಾಡಿದ ಸಾಧನೆ ಮಾಡಿದ್ದಾರೆ.

Umran Malik: ಧೋನಿಗೆ 154 ಕಿ.ಮೀ. ವೇಗದ ಯಾರ್ಕರ್: ಐಪಿಎಲ್ 2022 ರಲ್ಲಿ ನೂತನ ದಾಖಲೆ ಬರೆದ ಉಮ್ರಾನ್ ಮಲಿಕ್
ಉಮ್ರಾನ್ ಮಲಿಕ್‌
TV9 Web
| Updated By: Vinay Bhat|

Updated on: May 02, 2022 | 2:14 PM

Share

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಹದಿನೈದನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ (SRH vs CSK) ತಂಡದ ಯುವ ವೇಗಿ ಉಮ್ರಾನ್‌ ಮಲಿಕ್ (Umran Malik) ಅತ್ಯಂತ ವೇಗದಲ್ಲಿ ಬೌಲ್‌ ಮಾಡುವ ಮೂಲಕ ಪ್ರಸಕ್ತ ಆವೃತ್ತಿಯಲ್ಲಿ ವಿಶೇಷ ದಾಖಲೆಯನ್ನು ಮಾಡಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್​ಕೆ ಬ್ಯಾಟಿಂಗ್ ಇನಿಂಗ್ಸ್‌ನಲ್ಲಿ ಎರಡು ಬಾರಿ 154 ಕಿ. ಮೀ ವೇಗದಲ್ಲಿ ಬೌಲಿಂಗ್ ಮಾಡಿದ ಸಾಧನೆ ಮಾಡಿದ್ದಾರೆ. ಮೊದಲ ಇನಿಂಗ್ಸ್‌ನ 10ನೇ ಓವರ್‌ನಲ್ಲಿ  ಉಮ್ರಾನ್ ಗಂಟೆಗೆ 154 ಕಿ.ಮೀ. ವೇಗದಲ್ಲಿ  ಬೌಲಿಂಗ್ ಮಾಡಿದರು. ಅವರು ಸ್ಟಂಪ್‌ ಗುರಿ ಇರಿಸಿ ಎಸೆದ ಚೆಂಡನ್ನು ರುತುರಾಜ್ ಗಾಯಕ್ವಾಡ್ (Ruturaj Gaikwad) ಬೌಂಡರಿ ಸಿಡಿಸಿದರು. ನಂತರ 19ನೇ ಓವರ್‌ನಲ್ಲಿ ಗಂಟೆಗೆ 154 ಕಿ.ಮೀ. ವೇಗದಲ್ಲಿ ಎಂಎಸ್ ಧೋನಿಗೆ ಯಾರ್ಕರ್ ಅನ್ನು ಎಸೆದರು. ಈ ಎಸೆತದಲ್ಲಿ ಧೋನಿ ಒಂದು ರನ್ ಗಳಿಸಿದರು.

ಈ ಬಾರಿಯ ಐಪಿಎಲ್​ನಲ್ಲಿ ತನ್ನ ವೇಗದ ಬೌಲಿಂಗ್ ಮೂಲಕವೇ ಗಮನ ಸೆಳೆದಿರುವ ಈ ಜಮ್ಮು-ಕಾಶ್ಮೀರ ವೇಗಿ ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧವೂ 150ರ ವೇಗದಲ್ಲಿ ಚೆಂಡೆಸೆದು ಸುದ್ದಿಯಾಗಿದ್ದರು. ಅಲ್ಲದೆ ಇತ್ತೀಚಿಗೆ ಮೊದಲ ಬಾರಿ ಐದು ವಿಕೆಟ್ ಗೊಂಚಲು ಗಳಿಸಿ  ಸಾಕಷ್ಟು ಪ್ರಶಂಸೆಗಳನ್ನು ಪಡೆದಿದ್ದರು. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಉಮ್ರಾನ್ ಈ ಸಾಧನೆ ಮಾಡಿದರೂ ಸಾಕಷ್ಟು ದುಬಾರಿಯಾದರು. 4 ಓವರ್ ಬೌಲಿಂಗ್ ಮಾಡಿ 48 ರನ್ ನೀಡಿ ಯಾವುದೇ ವಿಕೆಟ್ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಈ ಬಾರಿ ಮೆಗಾ ಹರಾಜಿಗೂ ಮುನ್ನ ಉಮ್ರಾನ್ ಅವರನ್ನು ಸನ್​ರೈಸರ್ಸ್​ ಹೈದರಾಬಾದ್ ತಂಡವು 4 ಕೋಟಿ ನೀಡಿ ರಿಟೈನ್ ಮಾಡಿಕೊಂಡಿತ್ತು.

ಸಿಎಸ್​ಕೆ ಹಾಗೂ ಎಸ್​ಆರ್​ಹೆಚ್ ನಡುವಣ ಪಂದ್ಯದಲ್ಲಿ ಧೋನಿ ತಂಡ 13 ರನ್​ಗಳ ಜಯ ತನ್ನದಾಗಿಸಿತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಚೆನ್ನೈ ಐಪಿಎಲ್ ಇತಿಹಾಸದಲ್ಲಿ ಹಿಂದೆದೂ ಕಾಣದ ಆರಂಭಿಕ ಜೊತೆಯಾಟವನ್ನ ಕಂಡಿತು. ರುತುರಾಜ್ ಗಾಯಕ್ವಾಡ್ ಮತ್ತು ಡೆವೊನ್ ಕಾನ್ವೆ 182ರನ್‌ಗಳ ಅಮೋಘ ಜೊತೆಯಾಟವಾಡಿದರು. ಗಾಯಕ್ವಾಡ್ 57 ಎಸೆತಗಳಲ್ಲಿ 99 ರನ್ ಸಿಡಿಸುವ ಮೂಲಕ ಕೇವಲ ಒಂದು ರನ್‌ಗಳಲ್ಲಿ ಶತಕವಂಚಿತರಾದರು. ಡಿವೊನ್ ಕಾನ್ವೆ 55 ಎಸೆತಗಳಲ್ಲಿ ಅಜೇಯ 85 ರನ್ ಕಲೆಹಾಕಿದರು. ಚೆನ್ನೈ 20 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 202 ರನ್ ಬಾರಿಸಿತು.

MS Dhoni: ಕ್ಯಾಪ್ಟನ್ ಧೋನಿ ಅಡಿಯಲ್ಲಿ ಚೆನ್ನೈಗೆ ಸೂಪರ್ ಗೆಲುವು: ಟ್ವಿಟರ್​ನಲ್ಲಿ ಸಂಭ್ರಮವೋ ಸಂಭ್ರಮ

ಕಠಿಣ ಟಾರ್ಗೆಟ್ ಬೆನ್ನಟ್ಟಿದ ಸನ್‌ರೈಸರ್ಸ್ ತಂಡಕ್ಕೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಅಭಿಷೇಕ್ ಶರ್ಮಾ ಬಿರುಸಿನ ಆರಂಭವೊದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 35 ಎಸೆತಗಳಲ್ಲಿ 58 ರನ್ ಪೇರಿಸಿದರು. ಆದರೆ, ಅಭಿಷೇಕ್ (39 ರನ್, 24 ಎಸೆತ) ಜೊತೆಗೆ ರಾಹುಲ್ ತ್ರಿಪಾಠಿ ಅವರನ್ನು ಶೂನ್ಯಕ್ಕೆ ಔಟ್ ಆಗಿದ್ದು ಹೊಡೆತ ಬಿದ್ದಿತು. ಏಡನ್ ಮಾರ್ಕರಮ್ (17) ಎರಡು ಸಿಕ್ಸರ್ ಸಿಡಿಸಿದರೂ ಹೆಚ್ಚು ಹೊತ್ತು ನಿಲ್ಲಲಾಗಲಿಲ್ಲ. ಇನ್ನೊಂದೆಡೆ ನಾಯಕನ ಆಟವಾಡಿದ ವಿಲಿಯಮ್ಸನ್ ತಂಡವನ್ನು ಮುನ್ನಡೆಸಿದರು. ಅವರಿಗೆ ನಿಕೋಲಸ್ ಪೂರನ್ ಅವರಿಂದ ಉತ್ತಮ ಬೆಂಬಲ ದೊರಕಿತು. ಆದರೆ ಅರ್ಧಶತಕದ ಅಂಚಿನಲ್ಲಿ ವಿಲಿಯಮ್ಸನ್ ಎಡವಿದರು. 29 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಪೂರನ್ ದಿಟ್ಟ ಹೋರಾಟ ನೀಡಿದರೂ ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ. ಎಸ್​ಆರ್​ಹೆಚ್ 20 ಓವರ್​ನಲ್ಲಿ 6 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತಷ್ಟೆ.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್