AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

U-19 Asia Cup 2024: ಪಾಕಿಸ್ತಾನ ಔಟ್; ಭಾರತ- ಬಾಂಗ್ಲಾದೇಶ ನಡುವೆ ಏಷ್ಯಾಕಪ್‌ ಫೈನಲ್

U-19 Asia Cup 2024: ಯುಎಇಯಲ್ಲಿ ನಡೆದ U-19 ಏಷ್ಯಾಕಪ್‌ ಸೆಮಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಾಂಗ್ಲಾದೇಶ ಏಕಪಕ್ಷೀಯವಾಗಿ ಸೋಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ, ಬಾಂಗ್ಲಾದ ಮಾರಕ ಬೌಲಿಂಗ್‌ ಮುಂದೆ ಕೇವಲ 116 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಸುಲಭವಾಗಿ ಗೆದ್ದು ಫೈನಲ್‌ಗೆ ಪ್ರವೇಶಿಸಿತು. ಈಗ ಫೈನಲ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿವೆ.

U-19 Asia Cup 2024: ಪಾಕಿಸ್ತಾನ ಔಟ್; ಭಾರತ- ಬಾಂಗ್ಲಾದೇಶ ನಡುವೆ ಏಷ್ಯಾಕಪ್‌ ಫೈನಲ್
ಪಾಕಿಸ್ತಾನ ತಂಡ
ಪೃಥ್ವಿಶಂಕರ
|

Updated on: Dec 06, 2024 | 4:49 PM

Share

ಯುಎಇಯಲ್ಲಿ ನಡೆಯುತ್ತಿರುವ ಪುರುಷರ ಅಂಡರ್-19 ಏಷ್ಯಾ ಕಪ್ ಟೂರ್ನಿ ಅಂತಿಮ ಹಂತ ತಲುಪಿದೆ. ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ದುಬೈನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಪಾಕ್ ತಂಡ ಏಕಪಕ್ಷೀಯವಾಗಿ ಸೋಲನುಭವಿಸಿದ್ದು, ಟೂರ್ನಿಯಿಂದ ಹೊರಬಿದ್ದಿದೆ. ಅದೇ ವೇಳೆ ಬಾಂಗ್ಲಾದೇಶ ತಂಡ ಫೈನಲ್‌ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ. ಇದೀಗ ಡಿಸೆಂಬರ್ 8 ರಂದು ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ಪ್ರಶಸ್ತಿಗಾಗಿ ಸೆಣಸಾಡಲಿವೆ.

ಬಾಂಗ್ಲಾದ ಮಾರಕ ಬೌಲಿಂಗ್

ಈ ಪಂದ್ಯದಲ್ಲಿ, ಬಾಂಗ್ಲಾದೇಶ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬಾಂಗ್ಲಾದೇಶದ ಬೌಲರ್‌ಗಳು ಕೇವಲ 37 ಓವರ್‌ಗಳಲ್ಲಿ ಪಾಕಿಸ್ತಾನದ ಇನ್ನಿಂಗ್ಸ್ ಅಂತ್ಯ ಹಾಡಿದರು. ಬಾಂಗ್ಲಾ ಬೌಲರ್​ಗಳ ಮುಂದೆ ಇಡೀ ಪಾಕಿಸ್ತಾನ ತಂಡ 116 ರನ್ ಗಳಿಸಲಷ್ಟೇ ಶಕ್ತವಾಯಿತು. ಪಾಕಿಸ್ತಾನ ಪರ ಫರ್ಹಾನ್ ಯೂಸುಫ್ ಗರಿಷ್ಠ 32 ರನ್ ಗಳಿಸಿದರೆ, ಮುಹಮ್ಮದ್ ರಿಯಾಜುಲ್ಲಾ 28 ರನ್ ಕೊಡುಗೆ ನೀಡಿದರು. ಇವರಿಬ್ಬರು ಬ್ಯಾಟ್ಸ್‌ಮನ್‌ಗಳನ್ನು ಹೊರತುಪಡಿಸಿ ಯಾವುದೇ ಆಟಗಾರರು ಹೆಚ್ಚು ಕಾಲ ಮೈದಾನದಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ತಂಡದ ಆರಂಭಿಕರಿಬ್ಬರಿಗೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಈ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನದ ಒಟ್ಟು 4 ಬ್ಯಾಟ್ಸ್‌ಮನ್‌ಗಳು 0 ರನ್‌ಗೆ ಔಟಾದರು.

ಮತ್ತೊಂದೆಡೆ, ಬಾಂಗ್ಲಾದೇಶದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡ ಇಕ್ಬಾಲ್ ಹುಸೇನ್ ಎಮೋನ್ 7 ಓವರ್‌ಗಳಲ್ಲಿ ಕೇವಲ 24 ರನ್ ಗಳಿಸಿ 4 ವಿಕೆಟ್ ಪಡೆದರು. ಉಳಿದಂತೆ ಮರೂಫ್ ಮೃಧ 2 ವಿಕೆಟ್ ಪಡೆದರೆ, ಅಲ್ ಫಹಾದ್ ಮತ್ತು ದೇಬಾಶಿಶ್ ದೇಬಾ ತಲಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಏಕಪಕ್ಷೀಯವಾಗಿ ಗೆದ್ದ ಬಾಂಗ್ಲಾದೇಶ

ಪಾಕಿಸ್ತಾನ ನೀಡಿದ 117 ರನ್​ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಮಹತ್ವದ ಪಂದ್ಯದಲ್ಲಿ ನಾಯಕತ್ವದ ಇನ್ನಿಂಗ್ಸ್ ಆಡಿದ ಅಜೀಜುಲ್ ಹಕೀಮ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಬಾಂಗ್ಲಾದೇಶದ ಈ ಗೆಲುವಿನೊಂದಿಗೆ ಭಾರತ ಹಾಗೂ ಪಾಕ್ ನಡುವಿನ ಫೈನಲ್ ಪಂದ್ಯದ ಕನಸು ಕೂಡ ಭಗ್ನಗೊಂಡಿದೆ. ವಾಸ್ತವವಾಗಿ ಈ ಪಂದ್ಯವನ್ನು ಪಾಕಿಸ್ತಾನ ಗೆದ್ದಿದ್ದರೆ ಫೈನಲ್‌ನಲ್ಲಿ ಭಾರತವನ್ನು ಎದುರಿಸುತ್ತಿತ್ತು. ಆದರೆ ಈಗ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಪ್ರಶಸ್ತಿ ಹಣಾಹಣಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ