AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U-19 Asia Cup 2024: ಪಾಕಿಸ್ತಾನ ಔಟ್; ಭಾರತ- ಬಾಂಗ್ಲಾದೇಶ ನಡುವೆ ಏಷ್ಯಾಕಪ್‌ ಫೈನಲ್

U-19 Asia Cup 2024: ಯುಎಇಯಲ್ಲಿ ನಡೆದ U-19 ಏಷ್ಯಾಕಪ್‌ ಸೆಮಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಾಂಗ್ಲಾದೇಶ ಏಕಪಕ್ಷೀಯವಾಗಿ ಸೋಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ, ಬಾಂಗ್ಲಾದ ಮಾರಕ ಬೌಲಿಂಗ್‌ ಮುಂದೆ ಕೇವಲ 116 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಸುಲಭವಾಗಿ ಗೆದ್ದು ಫೈನಲ್‌ಗೆ ಪ್ರವೇಶಿಸಿತು. ಈಗ ಫೈನಲ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿವೆ.

U-19 Asia Cup 2024: ಪಾಕಿಸ್ತಾನ ಔಟ್; ಭಾರತ- ಬಾಂಗ್ಲಾದೇಶ ನಡುವೆ ಏಷ್ಯಾಕಪ್‌ ಫೈನಲ್
ಪಾಕಿಸ್ತಾನ ತಂಡ
ಪೃಥ್ವಿಶಂಕರ
|

Updated on: Dec 06, 2024 | 4:49 PM

Share

ಯುಎಇಯಲ್ಲಿ ನಡೆಯುತ್ತಿರುವ ಪುರುಷರ ಅಂಡರ್-19 ಏಷ್ಯಾ ಕಪ್ ಟೂರ್ನಿ ಅಂತಿಮ ಹಂತ ತಲುಪಿದೆ. ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ದುಬೈನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಪಾಕ್ ತಂಡ ಏಕಪಕ್ಷೀಯವಾಗಿ ಸೋಲನುಭವಿಸಿದ್ದು, ಟೂರ್ನಿಯಿಂದ ಹೊರಬಿದ್ದಿದೆ. ಅದೇ ವೇಳೆ ಬಾಂಗ್ಲಾದೇಶ ತಂಡ ಫೈನಲ್‌ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ. ಇದೀಗ ಡಿಸೆಂಬರ್ 8 ರಂದು ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ಪ್ರಶಸ್ತಿಗಾಗಿ ಸೆಣಸಾಡಲಿವೆ.

ಬಾಂಗ್ಲಾದ ಮಾರಕ ಬೌಲಿಂಗ್

ಈ ಪಂದ್ಯದಲ್ಲಿ, ಬಾಂಗ್ಲಾದೇಶ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬಾಂಗ್ಲಾದೇಶದ ಬೌಲರ್‌ಗಳು ಕೇವಲ 37 ಓವರ್‌ಗಳಲ್ಲಿ ಪಾಕಿಸ್ತಾನದ ಇನ್ನಿಂಗ್ಸ್ ಅಂತ್ಯ ಹಾಡಿದರು. ಬಾಂಗ್ಲಾ ಬೌಲರ್​ಗಳ ಮುಂದೆ ಇಡೀ ಪಾಕಿಸ್ತಾನ ತಂಡ 116 ರನ್ ಗಳಿಸಲಷ್ಟೇ ಶಕ್ತವಾಯಿತು. ಪಾಕಿಸ್ತಾನ ಪರ ಫರ್ಹಾನ್ ಯೂಸುಫ್ ಗರಿಷ್ಠ 32 ರನ್ ಗಳಿಸಿದರೆ, ಮುಹಮ್ಮದ್ ರಿಯಾಜುಲ್ಲಾ 28 ರನ್ ಕೊಡುಗೆ ನೀಡಿದರು. ಇವರಿಬ್ಬರು ಬ್ಯಾಟ್ಸ್‌ಮನ್‌ಗಳನ್ನು ಹೊರತುಪಡಿಸಿ ಯಾವುದೇ ಆಟಗಾರರು ಹೆಚ್ಚು ಕಾಲ ಮೈದಾನದಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ತಂಡದ ಆರಂಭಿಕರಿಬ್ಬರಿಗೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಈ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನದ ಒಟ್ಟು 4 ಬ್ಯಾಟ್ಸ್‌ಮನ್‌ಗಳು 0 ರನ್‌ಗೆ ಔಟಾದರು.

ಮತ್ತೊಂದೆಡೆ, ಬಾಂಗ್ಲಾದೇಶದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡ ಇಕ್ಬಾಲ್ ಹುಸೇನ್ ಎಮೋನ್ 7 ಓವರ್‌ಗಳಲ್ಲಿ ಕೇವಲ 24 ರನ್ ಗಳಿಸಿ 4 ವಿಕೆಟ್ ಪಡೆದರು. ಉಳಿದಂತೆ ಮರೂಫ್ ಮೃಧ 2 ವಿಕೆಟ್ ಪಡೆದರೆ, ಅಲ್ ಫಹಾದ್ ಮತ್ತು ದೇಬಾಶಿಶ್ ದೇಬಾ ತಲಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಏಕಪಕ್ಷೀಯವಾಗಿ ಗೆದ್ದ ಬಾಂಗ್ಲಾದೇಶ

ಪಾಕಿಸ್ತಾನ ನೀಡಿದ 117 ರನ್​ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಮಹತ್ವದ ಪಂದ್ಯದಲ್ಲಿ ನಾಯಕತ್ವದ ಇನ್ನಿಂಗ್ಸ್ ಆಡಿದ ಅಜೀಜುಲ್ ಹಕೀಮ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಬಾಂಗ್ಲಾದೇಶದ ಈ ಗೆಲುವಿನೊಂದಿಗೆ ಭಾರತ ಹಾಗೂ ಪಾಕ್ ನಡುವಿನ ಫೈನಲ್ ಪಂದ್ಯದ ಕನಸು ಕೂಡ ಭಗ್ನಗೊಂಡಿದೆ. ವಾಸ್ತವವಾಗಿ ಈ ಪಂದ್ಯವನ್ನು ಪಾಕಿಸ್ತಾನ ಗೆದ್ದಿದ್ದರೆ ಫೈನಲ್‌ನಲ್ಲಿ ಭಾರತವನ್ನು ಎದುರಿಸುತ್ತಿತ್ತು. ಆದರೆ ಈಗ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಪ್ರಶಸ್ತಿ ಹಣಾಹಣಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ