AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಭ್ ಪಂತ್​ಗೆ ಸವಾಲೆಸೆಯಲು ಎಂಟ್ರಿ ಕೊಟ್ಟಿದ್ದಾನೆ 19 ವರ್ಷದ ಬಿಗ್ ಹಿಟ್ಟರ್ ವಿಕೆಟ್ ಕೀಪರ್

Dinesh Bana: ದಿನೇಶ್ ಬಾನಾ ಪ್ರಸ್ತುತ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​. ಒಂದು ವೇಳೆ ಅವರು ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದರೆ, ಅವರ ಅದ್ಭುತ ಬ್ಯಾಟಿಂಗ್ ಇಡೀ ವಿಶ್ವದ ಗಮನವನ್ನು ಸೆಳೆಯಬಹುದು.

ರಿಷಭ್ ಪಂತ್​ಗೆ ಸವಾಲೆಸೆಯಲು ಎಂಟ್ರಿ ಕೊಟ್ಟಿದ್ದಾನೆ 19 ವರ್ಷದ ಬಿಗ್ ಹಿಟ್ಟರ್ ವಿಕೆಟ್ ಕೀಪರ್
dinesh bana-rishab pant
TV9 Web
| Edited By: |

Updated on: Feb 05, 2022 | 3:28 PM

Share

ಅಂಡರ್-19 ವಿಶ್ವಕಪ್‌ನಲ್ಲಿ (U19 World Cup) ಭಾರತ ತಂಡ ಫೈನಲ್ ತಲುಪಿದೆ. ಟೀಮ್ ಇಂಡಿಯಾದ (Team India) ಈ ಭರ್ಜರಿ ಪ್ರದರ್ಶನ ನಡುವೆ ಹಲವು ಹೆಸರುಗಳು ಚರ್ಚೆಯಲ್ಲಿವೆ. ಇದಾಗ್ಯೂ ಕಡಿಮೆ ಚರ್ಚೆಯಾಗುತ್ತಿರುವ ಹೆಸರೆಂದರೆ ದಿನೇಶ ಬಾನಾ (Dinesh Bana). 19 ವರ್ಷದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಬಾನಾ ಅಂಡರ್​ 19 ವಿಶ್ವಕಪ್​ನಲ್ಲಿ ಅತ್ಯಾಧ್ಬುತ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಸೆಮಿಫೈನಲ್‌ನಲ್ಲಿ ಕೇವಲ 4 ಎಸೆತಗಳನ್ನು ಎದುರಿಸಿದ ಬಾನಾ 500 ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದರು. ದಿನೇಶ್ ಬಾನಾ ಅವರ ಈ ಆಕ್ರಮಣಕಾರಿ ಬ್ಯಾಟಿಂಗ್​ನಿಂದಾಗಿ ಆಸೀಸ್ ವಿರುದ್ದ ಕೊನೆಯ ಓವರ್​ನಲ್ಲಿ ಕಲೆಹಾಕಿದ್ದು ಬರೋಬ್ಬರಿ 27 ರನ್​ಗಳು. ಇದೀಗ ದಿನೇಶ್ ಬಾನಾ ಹೆಸರು ಐಪಿಎಲ್​ ಮೆಗಾ ಹರಾಜಿನಲ್ಲಿದೆ. ಬಿಗ್ ಹಿಟ್ಟರ್ ಎನಿಸಿಕೊಂಡಿರುವ ಈ ಯುವ ಆಟಗಾರನ ಮೇಲೆ ಬಹುತೇಕ ಫ್ರಾಂಚೈಸಿಗಳು ಕೂಡ ಕಣ್ಣಿಟ್ಟಿದೆ.

ಹರಿಯಾಣ ಮೂಲದ ದಿನೇಶ್ ಬಾನಾ ಪ್ರಸ್ತುತ ಭಾರತದ ಅಂಡರ್-19 ತಂಡದಲ್ಲಿ ಮಧ್ಯಮ-ಕೆಳ ಕ್ರಮಾಂಕದ ಬ್ಯಾಟ್ಸ್​ಮನ್. ಸಂದರ್ಭಕ್ಕನುಗುಣುವಾಗಿ ಬ್ಯಾಟ್ ಬೀಸುವ ಬಾಬಾಗೆ ಕೆಲವೊಮ್ಮೆ ಬ್ಯಾಟಿಂಗ್‌ ಬಡ್ತಿ ನೀಡಲಾಗುತ್ತದೆ. ಹೀಗೆ ಸಿಕ್ಕ ಅವಕಾಶಗಳಲ್ಲಿ ಬಾನಾ ಅಬ್ಬರಿಸಿದ್ದೇ ಹೆಚ್ಚು. ಅದರಲ್ಲೂ ಬಾನಾ ಅವರ ಪವರ್​ ಹಿಟ್ಟಿಂಗ್ ಕೆಲವೊಮ್ಮೆ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ನೆನಪಿಸುತ್ತದೆ. ಪಂತ್ ಎಲ್ಲಾ ಮೂರು ಸ್ವರೂಪಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ವೇಗದ ಬ್ಯಾಟಿಂಗ್‌ಗೆ ಪ್ರಪಂಚದಾದ್ಯಂತ ಅಭಿಮಾನಿಗಳು ಕೂಡ ಇದ್ದಾರೆ. ಇದಾಗ್ಯೂ ಪಂತ್​ಗೆ ಸವಾಲೆಸೆಯುವಂತಹ ಹಲವುಇ ಯುವ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್‌ಗಳು ಟೀಮ್ ಇಂಡಿಯಾದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಅದರಲ್ಲೂ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸ್ಥಾನ ಅಲಂಕರಿಸುವ ಪಯತ್ನದಲ್ಲಿದ್ದಾರೆ.

ಇದೀಗ ದಿನೇಶ್ ಬಾನಾ ಕೂಡ ಈ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಗೇಮ್ ಚೇಂಜರ್​ ಅನ್ನು ಎದುರು ನೋಡುತ್ತಿರುವ ಟೀಮ್ ಇಂಡಿಯಾಗೆ ಅತ್ಯುತ್ತಮ ಆಯ್ಕೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ ಬಲಿಷ್ಠ ಬೌಲಿಂಗ್ ಲೈನಪ್ ಹೊಂದಿದ್ದ ಆಸ್ಟ್ರೇಲಿಯಾ ವಿರುದ್ದ ಬಾನಾ 4 ಎಸೆತಗಳಲ್ಲಿ ಅಜೇಯ 20 ರನ್ ಗಳಿಸಿದರು. ಈ ವೇಳೆ 2 ಬಿಗ್ ಸಿಕ್ಸ್ ಮತ್ತು 2 ಬೌಂಡರಿಗಳನ್ನು ಬಾರಿಸಿದ್ದರು. ಈ ಮೂಲಕ 19 ವರ್ಷದೊಳಗಿನ ಕ್ರಿಕೆಟ್‌ನ ಯಾವುದೇ ವಿಭಾಗದಲ್ಲಿ 4 ಅಥವಾ ಹೆಚ್ಚಿನ ಎಸೆತಗಳನ್ನು ಎದುರಿಸಿ ಕೇವಲ ಬೌಂಡರಿಗಳಿಂದ ರನ್ ಗಳಿಸಿದ ವಿಶ್ವದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ಈ ಭರ್ಜರಿ ದಾಖಲೆಯೊಂದಿಗೆ ದಿನೇಶ್ ಬಾನಾ ಇದೀಗ ಎಲ್ಲರ ಗಮನ ಸೆಳೆದಿದ್ದಾರೆ. ಅದರಲ್ಲೂ 4 ಎಸೆತಗಳಲ್ಲೇ ಐಪಿಎಲ್ ಫ್ರಾಂಚೈಸಿಗಳು ತನ್ನತ್ತ ನೋಡುವಂತೆ ಮಾಡಿದ್ದಾರೆ.

ದಿನೇಶ್ ಬಾನಾ ಪ್ರಸ್ತುತ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​. ಒಂದು ವೇಳೆ ಅವರು ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದರೆ, ಅವರ ಅದ್ಭುತ ಬ್ಯಾಟಿಂಗ್ ಇಡೀ ವಿಶ್ವದ ಗಮನವನ್ನು ಸೆಳೆಯಬಹುದು. ದಿನೇಶ್ ಬಾನಾ ಅವರ ವಿಕೆಟ್ ಕೀಪಿಂಗ್ ಕೂಡ ಅತ್ಯುತ್ತಮವಾಗಿದೆ. ತಮ್ಮ ಕೀಪಿಂಗ್ ಅನ್ನು ಸುಧಾರಿಸಲು ಅವರು 8-9 ಗಂಟೆಗಳ ಕಾಲ ಅಭ್ಯಾಸ ಮಾಡುತ್ತಾರೆ. ಅದರ ಜೊತೆ ಬ್ಯಾಟಿಂಗ್​ನತ್ತ ಅಭ್ಯಾಸ ನಡೆಸುತ್ತಾರೆ ಎಂದು ಕೋಚ್ ರಣವೀರ್ ಜಾಖರ್ ಹೇಳಿದ್ದಾರೆ. ಒಟ್ಟಿನಲ್ಲಿ ದಿನೇಶ್ ಬಾನಾ ಅವರ ಎಂಟ್ರಿ ಇದೀಗ ರಿಷಭ್ ಪಂತ್ ಹಾಗೂ ಇಶಾನ್ ಕಿಶನ್​ಗೆ ಹೊಸ ಸವಾಲಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ಅಂದಹಾಗೆ ಭಾರತ-ಇಂಗ್ಲೆಂಡ್ ನಡುವಣ ಅಂಡರ್​ 19 ವಿಶ್ವಕಪ್ ಫೈನಲ್​ ಪಂದ್ಯವು ಇಂದು (ಫೆ.5) ನಡೆಯಲಿದ್ದು, ಈ ಪಂದ್ಯದಲ್ಲಿ ದಿನೇಶ್ ಬಾನಾ ಕಮಾಲ್ ಮಾಡಿದ್ರೆ, ಐಪಿಎಲ್​ಗೆ ಎಂಟ್ರಿ ಖಚಿತ ಎಂದೇ ಹೇಳಬಹುದು.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(Under 19 world cup: explosive wicket keeper batsman dinesh bana is big threat for rishabh pant)

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ