AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

USA vs BAN: ಬಾಂಗ್ಲಾದೇಶ್ ವಿರುದ್ಧ ಸರಣಿ ಗೆದ್ದ ಯುಎಸ್​ಎ

USA vs Bangladesh: ಬಾಂಗ್ಲಾದೇಶ್ ತಂಡವನ್ನು ಮಣಿಸಿ ಯುಎಸ್​ಎ ಸರಣಿ ಜಯಿಸಿದೆ. ವಿಶೇಷ ಎಂದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಯುಎಸ್​ಎ ತಂಡವು ಗ್ರೂಪ್-ಎ ನಲ್ಲಿದೆ. ಅಂದರೆ ಇದೇ ಗ್ರೂಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳಿವೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ತಂಡಗಳ ವಿರುದ್ಧ ಯುಎಸ್​ಎ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

USA vs BAN: ಬಾಂಗ್ಲಾದೇಶ್ ವಿರುದ್ಧ ಸರಣಿ ಗೆದ್ದ ಯುಎಸ್​ಎ
USA
ಝಾಹಿರ್ ಯೂಸುಫ್
|

Updated on:May 26, 2024 | 7:59 AM

Share

ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯನ್ನು 1-2 ಅಂತರದಿಂದ ಯುಎಸ್​ಎ (USA) ತಂಡ ಗೆದ್ದುಕೊಂಡಿದೆ. ಹೌಸ್ಟನ್​ನ ಪ್ರೈರೀ ವ್ಯೂ ಕ್ರಿಕೆಟ್ ಕಾಂಪ್ಲೆಕ್ಸ್ ಸ್ಡೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಅಂತಿಮ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ಗೆದ್ದರೂ, ಮೊದಲೆರಡು ಮ್ಯಾಚ್​ಗಳಲ್ಲಿ ಯುಎಸ್​ಎ ತಂಡ ಜಯ ಸಾಧಿಸಿತ್ತು. ಈ ಮೂಲಕ ಬಾಂಗ್ಲಾ ವಿರುದ್ಧ ಚೊಚ್ಚಲ ಬಾರಿ ಸರಣಿ ಗೆಲ್ಲುವಲ್ಲಿ ಯುಎಸ್​ಎ ಯಶಸ್ವಿಯಾಗಿದೆ.

  • ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡ 19.3 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 156 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತ್ತು.
  • ಇನ್ನು ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ತಂಡ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 144 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಆದರೆ ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಯುಎಸ್​ಎ 19.3 ಓವರ್​ಗಳಲ್ಲಿ 138 ರನ್​ಗಳಿಗೆ ಬಾಂಗ್ಲಾದೇಶ್ ತಂಡವನ್ನು ಆಲೌಟ್ ಮಾಡಿ 6 ರನ್​ಗಳ ರೋಚಕ ಗೆಲುವು ದಾಖಲಿಸಿತು.
  • ಶನಿವಾರ (ಮೇ 25) ನಡೆದ ಅಂತಿಮ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡದ ಕರಾರುವಾಕ್ ದಾಳಿ ಮುಂದೆ ಯುಎಸ್​ಎ ಬ್ಯಾಟರ್​ಗಳು ಮಂಕಾದರು. ಅದರಲ್ಲೂ ಮುಸ್ತಫಿಜುರ್ ರೆಹಮಾನ್ 4 ಓವರ್​ಗಳಲ್ಲಿ ಕೇವಲ 10 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ ಯುಎಸ್​ಎ ತಂಡ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 104 ರನ್​ಗಳಿಸಲಷ್ಟೇ ಶಕ್ತರಾದರು.
  • 105 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಪರ ಆರಂಭಿಕರಾದ ತಂಝಿದ್ ಹಸನ್ (58) ಹಾಗೂ ಸೌಮ್ಯ ಸರ್ಕಾರ್ (42) ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ 11.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಬಾಂಗ್ಲಾದೇಶ್ ತಂಡಕ್ಕೆ 10 ವಿಕೆಟ್​ಗಳ ಅಮೋಘ ಗೆಲುವು ತಂದುಕೊಟ್ಟರು.

ಈ ಸೋಲಿನ ಹೊರತಾಗಿಯೂ 3 ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದ ಯುಎಸ್​ಎ ತಂಡ ಟ್ರೋಫಿ ಮುಡಿಗೇರಿಸಿಕೊಂಡಿದೆ. ವಿಶೇಷ ಎಂದರೆ ಯುಎಸ್​ಎ ತಂಡ ಇದೇ ಮೊದಲ ಬಾರಿಗೆ ಟಿ20 ಸರಣಿಯಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಿದೆ. ಚೊಚ್ಚಲ ಸರಣಿಯಲ್ಲೇ ಬಾಂಗ್ಲಾ ತಂಡವನ್ನು ಬಗ್ಗು ಬಡಿದು ಸರಣಿ ಗೆದ್ದಿರುವುದು ವಿಶೇಷ.

ಯುಎಸ್​ಎ ಪ್ಲೇಯಿಂಗ್ 11: ಆಂಡ್ರೀಸ್ ಗೌಸ್ (ವಿಕೆಟ್ ಕೀಪರ್) , ಆರನ್ ಜೋನ್ಸ್ (ನಾಯಕ) , ಕೋರಿ ಆಂಡರ್ಸನ್ , ಮಿಲಿಂದ್ ಕುಮಾರ್ , ನಿತೀಶ್ ಕುಮಾರ್ , ಶಾಡ್ಲಿ ವ್ಯಾನ್ ಶಾಲ್ಕ್ವಿಕ್ , ಶಯಾನ್ ಜಹಾಂಗೀರ್ , ನಿಸರ್ಗ್ ಪಟೇಲ್ , ಜಸ್ದೀಪ್ ಸಿಂಗ್ , ನೋಸ್ತುಶ್ ಕೆಂಜಿಗೆ , ಸೌರಭ್ ನೇತ್ರವಲ್ಕರ್.

ಇದನ್ನೂ ಓದಿ: Hardik Pandya: ಹಾರ್ದಿಕ್ ಪಾಂಡ್ಯರ ಶೇ.70 ರಷ್ಟು ಆಸ್ತಿ ಹೆಂಡತಿ ಪಾಲು..?

ಬಾಂಗ್ಲಾದೇಶ್ ಪ್ಲೇಯಿಂಗ್ 11: ಲಿಟ್ಟನ್ ದಾಸ್ (ವಿಕೆಟ್ ಕೀಪರ್) , ಸೌಮ್ಯ ಸರ್ಕಾರ್ , ತಂಝಿದ್ ಹಸನ್ , ನಜ್ಮುಲ್ ಹೊಸೈನ್ ಶಾಂಟೋ (ನಾಯಕ) , ತೌಹಿದ್ ಹೃದೋಯ್ , ಶಾಕಿಬ್ ಅಲ್ ಹಸನ್ , ಮಹ್ಮುದುಲ್ಲಾ , ರಿಶಾದ್ ಹೊಸೈನ್ , ತಂಝಿಮ್ ಹಸನ್ ಸಾಕಿಬ್ , ಹಸನ್ ಮಹ್ಮದ್ , ಮುಸ್ತಫಿಜುರ್ ರೆಹಮಾನ್.

Published On - 7:58 am, Sun, 26 May 24

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!