AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಏಕಪಕ್ಷೀಯವಾಗಿ ಗೆಲ್ಲುವ ಪಂದ್ಯವನ್ನು ರೋಚಕಗೊಳಿಸಿ ಗೆದ್ದ ಟೀಂ ಇಂಡಿಯಾ

India vs New Zealand ODI: ವಡೋದರಾದಲ್ಲಿ ನಡೆದ ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿದೆ. ವಿರಾಟ್ ಕೊಹ್ಲಿ ಅವರ ಅಮೋಘ 93 ರನ್‌ಗಳ ನೆರವಿನಿಂದ 301 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ. 15 ವರ್ಷಗಳ ನಂತರ ವಡೋದರಾದಲ್ಲಿ ಆಡಿದ ಭಾರತ ಶುಭಾರಂಭ ಮಾಡಿದೆ.

IND vs NZ: ಏಕಪಕ್ಷೀಯವಾಗಿ ಗೆಲ್ಲುವ ಪಂದ್ಯವನ್ನು ರೋಚಕಗೊಳಿಸಿ ಗೆದ್ದ ಟೀಂ ಇಂಡಿಯಾ
Ind Vs Nz
ಪೃಥ್ವಿಶಂಕರ
|

Updated on:Jan 11, 2026 | 10:18 PM

Share

ವಡೋದರಾದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು 4 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ಆತಿಥೇಯ ಟೀಂ ಇಂಡಿಯಾ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಸುಮಾರು 15 ವರ್ಷಗಳ ನಂತರ ವಡೋದರಾದಲ್ಲಿ ಏಕದಿನ ಪಂದ್ಯವನ್ನಾಡಿದ ಟೀಮ್ ಇಂಡಿಯಾ ಮತ್ತೊಮ್ಮೆ ವಿರಾಟ್ ಕೊಹ್ಲಿ (Virat Kohli) ಅವರ ಅದ್ಭುತ ಬ್ಯಾಟಿಂಗ್‌ನಿಂದ 301 ರನ್‌ಗಳ ಗುರಿಯನ್ನು ಇನ್ನೊಂದು ಓವರ್ ಬಾಕಿ ಇರುವಂತೆಯೇ ಬೆನ್ನಟ್ಟಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಆದಾಗ್ಯೂ ಕೊಹ್ಲಿ ಕೇವಲ 7 ರನ್​ಗಳಿಂದ ಶತಕ ವಂಚಿತರಾದರೂ ತಂಡದ ಗೆಲುವಿಗೆ ಅಡಿಪಾಯ ಹಾಕಿದರು.

ಮೊದಲ ವಿಕೆಟ್​ಗೆ 117 ರನ್‌ಗಳ ಜೊತೆಯಾಟ

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 300 ರನ್ ಗಳಿಸಿತು. ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟ ಆರಂಭಿಕ ಜೋಡಿ ಹೆನ್ರಿ ನಿಕೋಲ್ಸ್ ಮತ್ತು ಡೆವೊನ್ ಕಾನ್ವೇ 21 ಓವರ್‌ಗಳಲ್ಲಿ 117 ರನ್‌ಗಳ ಜೊತೆಯಾಟ ಹಂಚಿಕೊಂಡರು. ಇದರ ಜೊತೆಗೆ ಇಬ್ಬರೂ ಅರ್ಧಶತಕವನ್ನು ಪೂರೈಸಿದರು. ಹರ್ಷಿತ್ ರಾಣಾ ಈ ಪಾಲುದಾರಿಕೆಯನ್ನು ಮುರಿಯುವಲ್ಲಿ ಯಶಸ್ವಿಯಾದರು. ಈ ಇಬ್ಬರ ವಿಕೆಟ್ ಪತನದ ಬಳಿಕ ಒಂದು ತುದಿಯಲ್ಲಿ ಸ್ಥಿರವಾಗಿ ನಿಂತ ಡ್ಯಾರಿಲ್ ಮಿಚೆಲ್ ಕೂಡ ಭಾರತದ ವಿರುದ್ಧ ಮತ್ತೊಂದು ಅರ್ಧಶತಕ ಪೂರೈಸಿದರು.

ಆದಾಗ್ಯೂ ಶತಕದಂಚಿನಲ್ಲಿ ಎಡವಿದ ಮಿಚೆಲ್ 84 ರನ್ ಗಳಿಸಿ ಔಟಾದರು. ಕೊನೆಯ ಓವರ್‌ನಲ್ಲಿ, ಟೈಲೆಂಡರ್‌ಗಳು 14 ರನ್ ಗಳಿಸಿ ತಂಡದ ಮೊತ್ತವನ್ನು 300 ರನ್​ಗಳಿಗೆ ಕೊಂಡೊಯ್ದರು. ಭಾರತ ಪರ ಸಿರಾಜ್, ಹರ್ಷಿತ್ ಮತ್ತು ಪ್ರಸಿದ್ಧ್ ಕೃಷ್ಣ ತಲಾ ಎರಡು ವಿಕೆಟ್ ಪಡೆದರು. ಆದಾಗ್ಯೂ, ಅತ್ಯಂತ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿದ ಸಿರಾಜ್ ಎಂಟು ಓವರ್‌ಗಳಲ್ಲಿ ಕೇವಲ 40 ರನ್‌ ನೀಡಿ ಎರಡು ವಿಕೆಟ್‌ಗಳನ್ನು ಪಡೆದರು.

28000 ರನ್ ಪೂರೈಸಿದ ಕೊಹ್ಲಿ

ಈ ಗುರಿ ಬೆನ್ನಟ್ಟಿದ ಭಾರತಕ್ಕೆ ಸಾಧಾರಣ ಆರಂಭ ಸಿಕ್ಕಿತು. ಮಾಜಿ ನಾಯಕ ರೋಹಿತ್ ಶರ್ಮಾ ಎರಡು ಸಿಕ್ಸರ್‌ ಮತ್ತು ಬೌಂಡರಿ 26 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಇತ್ತ ನಾಯಕ ಶುಭ್​ಮನ್ ಗಿಲ್ ರನ್ ಗಳಿಸಲು ಹೆಣಗಾಡುತ್ತಿದ್ದ ಸಮಯದಲ್ಲಿ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿ ತಕ್ಷಣವೇ ಬೌಂಡರಿಗಳನ್ನು ಹೊಡೆಯಲು ಪ್ರಾರಂಭಿಸಿ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ 28,000 ರನ್​ಗಳನ್ನು ಪೂರ್ಣಗೊಳಿಸಿದರು. ಮಾತ್ರವಲ್ಲದೆ ಗಿಲ್ ಜೊತೆಗೆ 118 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಆದರೆ ನಾಯಕ ಶುಭ್​ಮನ್ ಗಿಲ್ ಅರ್ಧಶತಕ ಬಾರಿಸಿ ಔಟಾಗುವ ಮೂಲಕ ಈ ಜೊತೆಯಾಟ ಅಂತ್ಯವಾಯಿತು.

IND vs NZ: 28 ಸಾವಿರ ರನ್​ಗಳ ಸರದಾರ ನಮ್ಮ ಕಿಂಗ್ ಕೊಹ್ಲಿ; ಸಂಗಕ್ಕಾರ ದಾಖಲೆ ಧ್ವಂಸ

ಶತಕದಂಚಿನಲ್ಲಿ ಎಡವಿದ ವಿರಾಟ್, ಭಾರತಕ್ಕೆ ಗೆಲುವು

ಗಿಲ್ ವಿಕೆಟ್ ಬಳಿಕವೂ ತಮ್ಮ ಎಂದಿನ ಆಟವನ್ನು ಮುಂದುವರೆಸಿದ ಕೊಹ್ಲಿ ಅರ್ಧಶತಕವನ್ನು ಪೂರೈಸಿದರು. ಕೊಹ್ಲಿ ಜೊತೆಗೂಡಿದ ಶ್ರೇಯಸ್ ಅಯ್ಯರ್ ತಂಡವನ್ನು 200 ರನ್​ಗಳ ಗಡಿ ದಾಟಿಸಿದರು. ಕೊಹ್ಲಿಯ ಶತಕ ಮತ್ತು ಟೀಮ್ ಇಂಡಿಯಾದ ಗೆಲುವು ಖಚಿತವೆಂದು ತೋರುತ್ತಿದ್ದ ಸಮಯದಲ್ಲೇ ತಂಡದ ವಿಕೆಟ್ ಪತನ ಶುರುವಾಯಿತು. ಇದಕ್ಕೆ ನಾಂದಿ ಹಾಡಿದ ವಿರಾಟ್ ಕೊಹ್ಲಿ 93 ರನ್‌ಗಳಿಸಿ ಜೇಮಿಸನ್​ಗೆ ವಿಕೆಟ್ ಒಪ್ಪಿಸಿದರು. ಅದೇ ಓವರ್​ನಲ್ಲಿ ಜಡೇಜಾ ಔಟಾದರೆ, ಅರ್ಧಶತಕದಂಚಿನಲ್ಲಿದ್ದ ಶ್ರೇಯಸ್ ಕೂಡ ಜೇಮಿಸನ್‌ಗೆ ಬಲಿಯಾದರು. ಸತತ ವಿಕೆಟ್​ಗಳ ಪತನದಿಂದ ಟೀಂ ಇಂಡಿಯಾ ಸಂಕಷ್ಟದಲ್ಲಿ ಸಿಲುಕಿದಂತೆ ಕಂಡುಬಂದಿತು. ಆದಾಗ್ಯೂ, ಕೆಎಲ್ ರಾಹುಲ್ ಮತ್ತು ಹರ್ಷಿತ್ ರಾಣಾ 37 ರನ್‌ಗಳ ಜೊತೆಯಾಟವನ್ನಾಡುವ ಮೂಲಕ ತಂಡವನ್ನು ಗೆಲುವಿನ ಸಮೀಪಕ್ಕೆ ತಂದರು. ನಂತರ ರಾಹುಲ್ ಅಂತಿಮವಾಗಿ ಸಿಕ್ಸ್ ಬಾರಿಸಿ 49 ಓವರ್‌ಗಳಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 pm, Sun, 11 January 26

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!