AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಸೂರ್ಯವಂಶಿಗೆ ಬ್ಯಾನ್ ಭೀತಿ..!

Sri Lanka A vs India A: ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ಅಶಿಸ್ತು ತೋರಿದ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ವೈಭವ್ ಸೂರ್ಯವಂಶಿಗೆ ಇದೀಗ ಬ್ಯಾನ್ ಭೀತಿ ಎದುರಾಗಿದೆ. ಏಕೆಂದರೆ ಮೈದಾನದಲ್ಲಿ ಎದುರಾಳಿ ಆಟಗಾರರ ಮೇಲೆ ಕೈಮಾಡುವುದು ಅಥವಾ ತಳ್ಳುವುದು ಗಂಭೀರ ಶಿಸ್ತು ಉಲ್ಲಂಘನೆಯಾಗಿದೆ.

ವೈಭವ್ ಸೂರ್ಯವಂಶಿಗೆ ಬ್ಯಾನ್ ಭೀತಿ..!
Vaibhav Sooryavanshi
ಝಾಹಿರ್ ಯೂಸುಫ್
|

Updated on: Jun 16, 2026 | 9:01 AM

Share

ಭಾರತ ಎ ಮತ್ತು ಶ್ರೀಲಂಕಾ ಎ ತಂಡಗಳ ನಡುವಣ ಪಂದ್ಯದ ಬಳಿಕ ನಡೆದ ದೈಹಿಕ ಘರ್ಷಣೆ ಹಿನ್ನಲೆ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ವಿರುದ್ಧ ಐಸಿಸಿ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸಾಧ್ಯತೆಯಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 50 ಓವರ್​ಗಳಲ್ಲಿ 265 ರನ್​ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿದ್ದರು.

ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಶ್ರೀಲಂಕಾ ಬ್ಯಾಟರ್​ಗಳು 16 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 6 ಎಸೆತಗಳಲ್ಲಿ ಕೇವಲ 9 ರನ್​ಗಳಿಸಿ 7 ರನ್​ಗಳಿಂದ ಸೋಲೊಪ್ಪಿಕೊಂಡಿದ್ದರು.

ಈ ಸೋಲಿನ ಬಳಿಕ ಪೆವಿಲಿಯನ್​ ಕಡೆ ಹೆಜ್ಜೆ ಹಾಕುತ್ತಿದ್ದ ವೈಭವ್ ಸೂರ್ಯವಂಶಿಯನ್ನು ಗುರಿಯಾಗಿಸಿ ಶ್ರೀಲಂಕಾ ಆಟಗಾರ ವಿಶೇನ್ ಹಾಲಂಬಾಗೆ ಅದೇನೋ ಹೇಳಿದ್ದಾರೆ. ಇದರಿಂದ ಕೆರಳಿದ ವೈಭವ್ ಸೂರ್ಯವಂಶಿ ಲಂಕಾ ಆಟಗಾರನತ್ತ ಧಾವಿಸಿ ಮಾತಿನ ಚಕಮಕಿ ನಡೆಸಿದ್ದರು.

ಈ ವಾಗ್ವಾದದ ನಡುವೆ ವೈಭವ್ ಸೂರ್ಯವಂಶಿ ವಿಶೇನ್ ಹಾಲಂಬಾ ಅವರನ್ನು ಕೈಯಿಂದ ತಳ್ಳುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಹಿನ್ನಲೆಯಲ್ಲಿ ಐಸಿಸಿ ವೈಭವ್ ಸೂರ್ಯವಂಶಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಐಸಿಸಿ ನಿಯಮಾವಳಿ:

ಐಸಿಸಿ ಕ್ರಿಕೆಟ್ ನಿಯಮಾವಳಿಗಳ ಪ್ರಕಾರ ಮೈದಾನದಲ್ಲಿ ಎದುರಾಳಿ ಆಟಗಾರರ ಮೇಲೆ ದೈಹಿಕವಾಗಿ ಕೈಮಾಡುವುದು ಅಥವಾ ತಳ್ಳುವುದು “ಲೆವೆಲ್-2” ಅಥವಾ “ಲೆವೆಲ್-3” ಮಾದರಿಯ ಗಂಭೀರ ಶಿಸ್ತು ಉಲ್ಲಂಘನೆಯಾಗಿದೆ.

  • ರೆಫರಿ ತನಿಖೆ: ಮ್ಯಾಚ್ ರೆಫರಿ ಪ್ರದೀಪ್ ಜಯಪ್ರಗಾಶ್ ಅವರು ಈ ಇಡೀ ಘಟನೆಯ ವಿಡಿಯೋ ಸಾಕ್ಷ್ಯಗಳು ಮತ್ತು ಆನ್-ಫೀಲ್ಡ್ ಅಂಪೈರ್‌ಗಳ ವರದಿಯನ್ನು ತೀವ್ರವಾಗಿ ಪರಿಶೀಲಿಸುತ್ತಿದ್ದಾರೆ.
  • ಸಂಭವನೀಯ ಶಿಕ್ಷೆ: ಐಸಿಸಿ ನೀತಿ ಸಂಹಿತೆಯ ಅಡಿಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ, ವೈಭವ್ ಸೂರ್ಯವಂಶಿ ಅವರಿಗೆ ಪಂದ್ಯ ಶುಲ್ಕದ 100% ವರೆಗೆ ದಂಡ ವಿಧಿಸಬಹುದು.
  • ಪಂದ್ಯ ನಿಷೇಧ: ಮ್ಯಾಚ್ ರೆಫರಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದರೆ ವೈಭವ್ ಸೂರ್ಯವಂಶಿ ಅವರನ್ನು ಕೆಲವು ಪಂದ್ಯಗಳಿಂದ ನಿಷೇಧಿಸಬಹುದು.

ಇದನ್ನೂ ಓದಿ: ಬಲಿಷ್ಠ ಸ್ಪೇನ್ ವಿರುದ್ಧ ಸೆಟೆದು ನಿಂತ ಕೇಪ್ ವರ್ಡೆ..!

ಇದೀಗ ಮೈದಾನದಲ್ಲಿ ಅಶಿಸ್ತು ತೋರಿದ ಶ್ರೀಲಂಕಾದ ವಿಶೇನ್ ಹಾಲಂಬಾ ಹಾಗೂ ವೈಭವ್ ಸೂರ್ಯವಂಶಿ ವಿರುದ್ಧ ಮ್ಯಾಚ್ ರೆಫರಿ ಪ್ರದೀಪ್ ಜಯಪ್ರಗಾಶ್ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದೇ ಸದ್ಯದ ಕುತೂಹಲ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ