AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

Sri Lanka A vs India A: ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 265 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಪಂದ್ಯವು ಟೈನಲ್ಲಿ ಅಂತ್ಯಗೊಂಡಿತ್ತು.

ಮೈದಾನದಲ್ಲಿ ಕಿರಿಕ್... ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
Vaibhav SooryavanshiImage Credit source: Sonyliv.com
ಝಾಹಿರ್ ಯೂಸುಫ್
|

Updated on: Jun 16, 2026 | 7:53 AM

Share

ಶ್ರೀಲಂಕಾದ ದಂಬುಲಾದಲ್ಲಿ ನಡೆದ ಟ್ರೈ-ನೇಷನ್ ‘ಎ’ ಸರಣಿಯ 4ನೇ ಪಂದ್ಯವು ಹೈ-ಡ್ರಾಮಾಗೆ ಸಾಕ್ಷಿಯಾಗಿದೆ. ಭಾರತ ಎ ಮತ್ತು ಶ್ರೀಲಂಕಾ ಎ ನಡುವಣ ಏಕದಿನ ಪಂದವು ಮೊದಲಿಗೆ ಟೈನಲ್ಲಿ ಅಂತ್ಯಗೊಂಡಿತು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವಲ್ಲಿ ಶ್ರೀಲಂಕಾ ಯಶಸ್ವಿಯಾಗಿದೆ. ಈ ಸೋಲಿನ ಬೆನ್ನಲ್ಲೇ ಆಟಗಾರರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ‘ಎ’ ತಂಡ ಸೂರ್ಯಂಶ್ ಶೆಡ್ಗೆ (72) ಅವರ ಅರ್ಧಶತಕದ ನೆರವೇರಿಕೆಯಿಂದ 265 ರನ್ ಗಳಿಸಿತ್ತು. ಶ್ರೀಲಂಕಾ ತಂಡವೂ ಸರಿಯಾಗಿ 265 ರನ್ ಗಳಿಸಿದ್ದರಿಂದ ಪಂದ್ಯ ಟೈ ಆಗಿ, ಸೂಪರ್ ಓವರ್ ಆಡಲಾಯಿತು.

  • ಸೂಪರ್ ಓವರ್‌ನಲ್ಲಿ ಶ್ರೀಲಂಕಾ 16 ರನ್ ಬಾರಿಸಿ ಭಾರತಕ್ಕೆ 17 ರನ್ ಗುರಿ ನೀಡಿತು.
  • 17 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಹಾಗೂ ಸೂರ್ಯಂಶ್ ಶೆಡ್ಗೆ ಕಣಕ್ಕಿಳಿದಿದ್ದರು.

ಸೂಪರ್ ಓವರ್​ನ ಮೊದಲ 4 ಎಸೆತಗಳಲ್ಲಿ ಟೀಮ್ ಇಂಡಿಯಾ ಕಲೆಹಾಕಿದ್ದು 5 ರನ್​ಗಳು ಮಾತ್ರ. ಅದರಂತೆ ಕೊನೆಯ 2 ಎಸೆತಗಳಲ್ಲಿ ಭಾರತ ತಂಡಕ್ಕೆ 12 ರನ್​ಗಳು ಬೇಕಿದ್ದವು. 5ನೇ ಎಸೆತದಲ್ಲಿ ವೈಭವ್ ಸೂರ್ಯವಂಶಿ ಫೋರ್ ಬಾರಿಸಿದರು.

ಆದರೆ  ಶ್ರೀಲಂಕಾದ 19 ವರ್ಷದ ಮಿಸ್ಟರಿ ಸ್ಲಿಂಗರ್  ಕುಗಥಾಸ್ ಮಥುಲನ್ ಎಸೆದ ಕೊನೆಯ ಎಸೆತವನ್ನು ಕನೆಕ್ಟ್ ಮಾಡಲು ವೈಭವ್ ವಿಫಲರಾದರು. ಈ ಮೂಲಕ ಟೀಮ್ ಇಂಡಿಯಾ  7 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಕೆರಳಿದ ವೈಭವ್ ಸೂರ್ಯವಂಶಿ!

ಸೂಪರ್ ಓವರ್​ನಲ್ಲಿ 7 ರನ್​ಗಳಿಂದ ಗೆಲ್ಲುತ್ತಿದ್ದಂತೆ​ ಶ್ರೀಲಂಕಾ ಆಟಗಾರರು ಅತಿಯಾದ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಶ್ರೀಲಂಕಾದ ಆಟಗಾರ ವಿಶೇನ್ ಹಾಲಂಬಾಗೆ, ನಿರಾಸೆಯಿಂದ ಪೆವಿಲಿಯನ್‌ಗೆ ಮರಳುತ್ತಿದ್ದ ವೈಭವ್ ಸೂರ್ಯವಂಶಿಯವರನ್ನು ನೋಡಿ ಅದೇನೋ ಹೇಳಿದ್ದಾರೆ.

ಈ ಮಾತಿನಿಂದ ಕೆರಳಿದ 15 ವರ್ಷದ ವೈಭವ್ ಸೂರ್ಯವಂಶಿ, ನೇರವಾಗಿ ಹಾಲಂಬಾಗೆ ಅವರತ್ತ ಧಾವಿಸಿ ಮಾತಿನ ಚಕಮಕಿ ನಡೆಸಿದರು. ಈ ವಾಗ್ವಾದದ ನಡುವೆ ವೈಭವ್, ಲಂಕಾ ಆಟಗಾರನ ಎದೆಗೆ ಜೋರಾಗಿ ಕೈಯಿಂದ ತಳ್ಳಿದ್ದಾರೆ.

ಆಟಗಾರರ ನಡುವಣ ಈ ಜಗಳದಿಂದಾಗಿ ಮೈದಾನದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ತಕ್ಷಣವೇ ಶ್ರೀಲಂಕಾದ ಹಿರಿಯ ವಿಕೆಟ್‌ಕೀಪರ್ ನಿರೋಷನ್ ಡಿಕ್ವೆಲ್ಲಾ ಮತ್ತು ಕೆಲ ಆಟಗಾರರು ಮಧ್ಯಪ್ರವೇಶಿಸಿ ಜಗಳವನ್ನು ತಡೆದರು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ವೈಭವ್ ಸೂರ್ಯವಂಶಿ ನಡೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.

ಸದ್ಯ ಶ್ರೀಲಂಕಾ ಎ ವಿರುದ್ಧ ಸೋತಿರುವ ಭಾರ ಎ ತಂಡವು ತನ್ನ ಮುಂದಿನ ಪಂದ್ಯವನ್ನು ಅಫ್ಘಾನಿಸ್ತಾನ್ ಎ ವಿರುದ್ಧ ಆಡಲಿದೆ. ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ತ್ರಿಕೋನ ಸರಣಿಯಲ್ಲಿ ಫೈನಲ್​ ಆಡಬಹುದು.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ