AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

Sri Lanka A vs India A: ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 265 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಪಂದ್ಯವು ಟೈನಲ್ಲಿ ಅಂತ್ಯಗೊಂಡಿತ್ತು.

ಮೈದಾನದಲ್ಲಿ ಕಿರಿಕ್... ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
Vaibhav SooryavanshiImage Credit source: Sonyliv.com
ಝಾಹಿರ್ ಯೂಸುಫ್
|

Updated on: Jun 16, 2026 | 7:53 AM

Share

ಶ್ರೀಲಂಕಾದ ದಂಬುಲಾದಲ್ಲಿ ನಡೆದ ಟ್ರೈ-ನೇಷನ್ ‘ಎ’ ಸರಣಿಯ 4ನೇ ಪಂದ್ಯವು ಹೈ-ಡ್ರಾಮಾಗೆ ಸಾಕ್ಷಿಯಾಗಿದೆ. ಭಾರತ ಎ ಮತ್ತು ಶ್ರೀಲಂಕಾ ಎ ನಡುವಣ ಏಕದಿನ ಪಂದವು ಮೊದಲಿಗೆ ಟೈನಲ್ಲಿ ಅಂತ್ಯಗೊಂಡಿತು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವಲ್ಲಿ ಶ್ರೀಲಂಕಾ ಯಶಸ್ವಿಯಾಗಿದೆ. ಈ ಸೋಲಿನ ಬೆನ್ನಲ್ಲೇ ಆಟಗಾರರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ‘ಎ’ ತಂಡ ಸೂರ್ಯಂಶ್ ಶೆಡ್ಗೆ (72) ಅವರ ಅರ್ಧಶತಕದ ನೆರವೇರಿಕೆಯಿಂದ 265 ರನ್ ಗಳಿಸಿತ್ತು. ಶ್ರೀಲಂಕಾ ತಂಡವೂ ಸರಿಯಾಗಿ 265 ರನ್ ಗಳಿಸಿದ್ದರಿಂದ ಪಂದ್ಯ ಟೈ ಆಗಿ, ಸೂಪರ್ ಓವರ್ ಆಡಲಾಯಿತು.

  • ಸೂಪರ್ ಓವರ್‌ನಲ್ಲಿ ಶ್ರೀಲಂಕಾ 16 ರನ್ ಬಾರಿಸಿ ಭಾರತಕ್ಕೆ 17 ರನ್ ಗುರಿ ನೀಡಿತು.
  • 17 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಹಾಗೂ ಸೂರ್ಯಂಶ್ ಶೆಡ್ಗೆ ಕಣಕ್ಕಿಳಿದಿದ್ದರು.

ಸೂಪರ್ ಓವರ್​ನ ಮೊದಲ 4 ಎಸೆತಗಳಲ್ಲಿ ಟೀಮ್ ಇಂಡಿಯಾ ಕಲೆಹಾಕಿದ್ದು 5 ರನ್​ಗಳು ಮಾತ್ರ. ಅದರಂತೆ ಕೊನೆಯ 2 ಎಸೆತಗಳಲ್ಲಿ ಭಾರತ ತಂಡಕ್ಕೆ 12 ರನ್​ಗಳು ಬೇಕಿದ್ದವು. 5ನೇ ಎಸೆತದಲ್ಲಿ ವೈಭವ್ ಸೂರ್ಯವಂಶಿ ಫೋರ್ ಬಾರಿಸಿದರು.

ಆದರೆ  ಶ್ರೀಲಂಕಾದ 19 ವರ್ಷದ ಮಿಸ್ಟರಿ ಸ್ಲಿಂಗರ್  ಕುಗಥಾಸ್ ಮಥುಲನ್ ಎಸೆದ ಕೊನೆಯ ಎಸೆತವನ್ನು ಕನೆಕ್ಟ್ ಮಾಡಲು ವೈಭವ್ ವಿಫಲರಾದರು. ಈ ಮೂಲಕ ಟೀಮ್ ಇಂಡಿಯಾ  7 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಕೆರಳಿದ ವೈಭವ್ ಸೂರ್ಯವಂಶಿ!

ಸೂಪರ್ ಓವರ್​ನಲ್ಲಿ 7 ರನ್​ಗಳಿಂದ ಗೆಲ್ಲುತ್ತಿದ್ದಂತೆ​ ಶ್ರೀಲಂಕಾ ಆಟಗಾರರು ಅತಿಯಾದ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಶ್ರೀಲಂಕಾದ ಆಟಗಾರ ವಿಶೇನ್ ಹಾಲಂಬಾಗೆ, ನಿರಾಸೆಯಿಂದ ಪೆವಿಲಿಯನ್‌ಗೆ ಮರಳುತ್ತಿದ್ದ ವೈಭವ್ ಸೂರ್ಯವಂಶಿಯವರನ್ನು ನೋಡಿ ಅದೇನೋ ಹೇಳಿದ್ದಾರೆ.

ಈ ಮಾತಿನಿಂದ ಕೆರಳಿದ 15 ವರ್ಷದ ವೈಭವ್ ಸೂರ್ಯವಂಶಿ, ನೇರವಾಗಿ ಹಾಲಂಬಾಗೆ ಅವರತ್ತ ಧಾವಿಸಿ ಮಾತಿನ ಚಕಮಕಿ ನಡೆಸಿದರು. ಈ ವಾಗ್ವಾದದ ನಡುವೆ ವೈಭವ್, ಲಂಕಾ ಆಟಗಾರನ ಎದೆಗೆ ಜೋರಾಗಿ ಕೈಯಿಂದ ತಳ್ಳಿದ್ದಾರೆ.

ಆಟಗಾರರ ನಡುವಣ ಈ ಜಗಳದಿಂದಾಗಿ ಮೈದಾನದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ತಕ್ಷಣವೇ ಶ್ರೀಲಂಕಾದ ಹಿರಿಯ ವಿಕೆಟ್‌ಕೀಪರ್ ನಿರೋಷನ್ ಡಿಕ್ವೆಲ್ಲಾ ಮತ್ತು ಕೆಲ ಆಟಗಾರರು ಮಧ್ಯಪ್ರವೇಶಿಸಿ ಜಗಳವನ್ನು ತಡೆದರು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ವೈಭವ್ ಸೂರ್ಯವಂಶಿ ನಡೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.

ಸದ್ಯ ಶ್ರೀಲಂಕಾ ಎ ವಿರುದ್ಧ ಸೋತಿರುವ ಭಾರ ಎ ತಂಡವು ತನ್ನ ಮುಂದಿನ ಪಂದ್ಯವನ್ನು ಅಫ್ಘಾನಿಸ್ತಾನ್ ಎ ವಿರುದ್ಧ ಆಡಲಿದೆ. ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ತ್ರಿಕೋನ ಸರಣಿಯಲ್ಲಿ ಫೈನಲ್​ ಆಡಬಹುದು.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ