AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

Sri Lanka A vs India A: ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 265 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಪಂದ್ಯವು ಟೈನಲ್ಲಿ ಅಂತ್ಯಗೊಂಡಿತ್ತು.

ಮೈದಾನದಲ್ಲಿ ಕಿರಿಕ್... ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
Vaibhav SooryavanshiImage Credit source: Sonyliv.com
ಝಾಹಿರ್ ಯೂಸುಫ್
|

Updated on: Jun 16, 2026 | 7:53 AM

Share

ಶ್ರೀಲಂಕಾದ ದಂಬುಲಾದಲ್ಲಿ ನಡೆದ ಟ್ರೈ-ನೇಷನ್ ‘ಎ’ ಸರಣಿಯ 4ನೇ ಪಂದ್ಯವು ಹೈ-ಡ್ರಾಮಾಗೆ ಸಾಕ್ಷಿಯಾಗಿದೆ. ಭಾರತ ಎ ಮತ್ತು ಶ್ರೀಲಂಕಾ ಎ ನಡುವಣ ಏಕದಿನ ಪಂದವು ಮೊದಲಿಗೆ ಟೈನಲ್ಲಿ ಅಂತ್ಯಗೊಂಡಿತು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವಲ್ಲಿ ಶ್ರೀಲಂಕಾ ಯಶಸ್ವಿಯಾಗಿದೆ. ಈ ಸೋಲಿನ ಬೆನ್ನಲ್ಲೇ ಆಟಗಾರರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ‘ಎ’ ತಂಡ ಸೂರ್ಯಂಶ್ ಶೆಡ್ಗೆ (72) ಅವರ ಅರ್ಧಶತಕದ ನೆರವೇರಿಕೆಯಿಂದ 265 ರನ್ ಗಳಿಸಿತ್ತು. ಶ್ರೀಲಂಕಾ ತಂಡವೂ ಸರಿಯಾಗಿ 265 ರನ್ ಗಳಿಸಿದ್ದರಿಂದ ಪಂದ್ಯ ಟೈ ಆಗಿ, ಸೂಪರ್ ಓವರ್ ಆಡಲಾಯಿತು.

  • ಸೂಪರ್ ಓವರ್‌ನಲ್ಲಿ ಶ್ರೀಲಂಕಾ 16 ರನ್ ಬಾರಿಸಿ ಭಾರತಕ್ಕೆ 17 ರನ್ ಗುರಿ ನೀಡಿತು.
  • 17 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಹಾಗೂ ಸೂರ್ಯಂಶ್ ಶೆಡ್ಗೆ ಕಣಕ್ಕಿಳಿದಿದ್ದರು.

ಸೂಪರ್ ಓವರ್​ನ ಮೊದಲ 4 ಎಸೆತಗಳಲ್ಲಿ ಟೀಮ್ ಇಂಡಿಯಾ ಕಲೆಹಾಕಿದ್ದು 5 ರನ್​ಗಳು ಮಾತ್ರ. ಅದರಂತೆ ಕೊನೆಯ 2 ಎಸೆತಗಳಲ್ಲಿ ಭಾರತ ತಂಡಕ್ಕೆ 12 ರನ್​ಗಳು ಬೇಕಿದ್ದವು. 5ನೇ ಎಸೆತದಲ್ಲಿ ವೈಭವ್ ಸೂರ್ಯವಂಶಿ ಫೋರ್ ಬಾರಿಸಿದರು.

ಆದರೆ  ಶ್ರೀಲಂಕಾದ 19 ವರ್ಷದ ಮಿಸ್ಟರಿ ಸ್ಲಿಂಗರ್  ಕುಗಥಾಸ್ ಮಥುಲನ್ ಎಸೆದ ಕೊನೆಯ ಎಸೆತವನ್ನು ಕನೆಕ್ಟ್ ಮಾಡಲು ವೈಭವ್ ವಿಫಲರಾದರು. ಈ ಮೂಲಕ ಟೀಮ್ ಇಂಡಿಯಾ  7 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಕೆರಳಿದ ವೈಭವ್ ಸೂರ್ಯವಂಶಿ!

ಸೂಪರ್ ಓವರ್​ನಲ್ಲಿ 7 ರನ್​ಗಳಿಂದ ಗೆಲ್ಲುತ್ತಿದ್ದಂತೆ​ ಶ್ರೀಲಂಕಾ ಆಟಗಾರರು ಅತಿಯಾದ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಶ್ರೀಲಂಕಾದ ಆಟಗಾರ ವಿಶೇನ್ ಹಾಲಂಬಾಗೆ, ನಿರಾಸೆಯಿಂದ ಪೆವಿಲಿಯನ್‌ಗೆ ಮರಳುತ್ತಿದ್ದ ವೈಭವ್ ಸೂರ್ಯವಂಶಿಯವರನ್ನು ನೋಡಿ ಅದೇನೋ ಹೇಳಿದ್ದಾರೆ.

ಈ ಮಾತಿನಿಂದ ಕೆರಳಿದ 15 ವರ್ಷದ ವೈಭವ್ ಸೂರ್ಯವಂಶಿ, ನೇರವಾಗಿ ಹಾಲಂಬಾಗೆ ಅವರತ್ತ ಧಾವಿಸಿ ಮಾತಿನ ಚಕಮಕಿ ನಡೆಸಿದರು. ಈ ವಾಗ್ವಾದದ ನಡುವೆ ವೈಭವ್, ಲಂಕಾ ಆಟಗಾರನ ಎದೆಗೆ ಜೋರಾಗಿ ಕೈಯಿಂದ ತಳ್ಳಿದ್ದಾರೆ.

ಆಟಗಾರರ ನಡುವಣ ಈ ಜಗಳದಿಂದಾಗಿ ಮೈದಾನದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ತಕ್ಷಣವೇ ಶ್ರೀಲಂಕಾದ ಹಿರಿಯ ವಿಕೆಟ್‌ಕೀಪರ್ ನಿರೋಷನ್ ಡಿಕ್ವೆಲ್ಲಾ ಮತ್ತು ಕೆಲ ಆಟಗಾರರು ಮಧ್ಯಪ್ರವೇಶಿಸಿ ಜಗಳವನ್ನು ತಡೆದರು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ವೈಭವ್ ಸೂರ್ಯವಂಶಿ ನಡೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.

ಸದ್ಯ ಶ್ರೀಲಂಕಾ ಎ ವಿರುದ್ಧ ಸೋತಿರುವ ಭಾರ ಎ ತಂಡವು ತನ್ನ ಮುಂದಿನ ಪಂದ್ಯವನ್ನು ಅಫ್ಘಾನಿಸ್ತಾನ್ ಎ ವಿರುದ್ಧ ಆಡಲಿದೆ. ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ತ್ರಿಕೋನ ಸರಣಿಯಲ್ಲಿ ಫೈನಲ್​ ಆಡಬಹುದು.

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್