AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RR: ಶಹಬ್ಬಾಸ್ ಸೂರ್ಯವಂಶಿ; ಶತಕ ವಂಚಿತರಾದ್ರೂ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದ ವೈಭವ್

Vaibhav Sooryavanshi IPL 2026: ಐಪಿಎಲ್ 2026 ಎಲಿಮಿನೇಟರ್‌ನಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ರಾಜಸ್ಥಾನ್ ಪರ ಕೇವಲ 28 ಎಸೆತಗಳಲ್ಲಿ 97 ರನ್ ಸಿಡಿಸಿ ಅಬ್ಬರಿಸಿದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ (16 ಎಸೆತ) ಬಾರಿಸಿದ ವೈಭವ್, ಪ್ಯಾಟ್ ಕಮ್ಮಿನ್ಸ್ ಓವರ್‌ನಲ್ಲಿ 25 ರನ್ ಕಲೆಹಾಕಿ ಎದುರಾಳಿಗಳಿಗೆ ಆಘಾತ ನೀಡಿದರು. ಶತಕ ವಂಚಿತರಾದರೂ ಅವರ ಸ್ಫೋಟಕ ಬ್ಯಾಟಿಂಗ್ ಕ್ರೀಡಾಭಿಮಾನಿಗಳನ್ನು ರಂಜಿಸಿತು.

SRH vs RR: ಶಹಬ್ಬಾಸ್ ಸೂರ್ಯವಂಶಿ; ಶತಕ ವಂಚಿತರಾದ್ರೂ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದ ವೈಭವ್
Vaibhav Sooryavanshi
ಪೃಥ್ವಿಶಂಕರ
|

Updated on:May 27, 2026 | 8:59 PM

Share

ವೈಭವ್ ಸೂರ್ಯವಂಶಿ (Vaibhav Sooryavanshi).. ತಾನು ಕ್ರೀಸ್​ನಲ್ಲಿ ಇರುವವರೆಗೂ ಎದುರಾಳಿಗಳ ಗುಂಡಿಗೆಯ ಬಡಿತ ಹೆಚ್ಚಿಸುವ ಹದಿನೈದೇ ವರ್ಷದ ಹಾಲ್ಗೆನ್ನೆಯ ಯುವಕ. ಬರೀ ಹೊಡಿಬಡಿ ಆಟವನ್ನೇ ಕೇಳುವ ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿದ ಆಟಗಾರನೆನಿಸಿಕೊಂಡಿರುವ ವೈಭವ್, ಐಪಿಎಲ್ 2026 (IPL 2026) ರ ಎಲಿಮಿನೇಟರ್ ಪಂದ್ಯದಲ್ಲೂ ಅದೇ ಆಟವನ್ನು ಪ್ರದರ್ಶಿಸಿದರು. ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಸನ್‌ರೈಸರ್ಸ್, ಪಂದ್ಯ ಆರಂಭಕ್ಕೂ ಮುನ್ನವೇ ವೈಭವ್ ಸೂರ್ಯವಂಶಿಯನ್ನು ಕಟ್ಟಿಹಾಕಲು ನಾನಾ ರಣತಂತ್ರವನ್ನು ಹೆಣೆದುಕೊಂಡು ಮೈದಾನಕ್ಕಿಳಿದಿತ್ತು. ಆದರೆ ವೈಭವ್ ಸೂರ್ಯವಂಶಿ ಎಂಬ ಸುನಾಮಿಯ ಮುಂದೆ ಸನ್‌ರೈಸರ್ಸ್ ಬೌಲರ್​ಗಳು ಅಕ್ಷರಶಃ ನಲುಗಿ ಹೋದರು.

16 ಎಸೆತಗಳಲ್ಲಿ ಅರ್ಧಶತಕ

ತಂತ್ರಗಾರಿಕೆಯಲ್ಲಿ ನಿಸ್ಸೀಮನೆನಿಸಿಕೊಂಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್​ನ ದುಃಸ್ವಪ್ನದಂತೆ ಕಾಡಿದ ವೈಭವ್, ಹ್ಯಾಟ್ರಿಕ್ ಸಿಕ್ಸರ್​ಗಳನ್ನು ಬಾರಿಸುವುದರ ಜೊತೆಗೆ ಅವರ ಓವರ್​ನಲ್ಲಿ ಬರೋಬ್ಬರಿ 25 ರನ್ ಕಲೆಹಾಕಿದರು. ವೈಭವ್ ಹೊಡೆದ ಒಂದೊಂದು ಹೊಡೆತವೂ ಎಸ್‌ಆರ್‌ಎಚ್ ಆಟಗಾರರನ್ನು ತಲೆ ಮೇಲೆ ಕೈಹೊತ್ತು ಕೂರುವಂತೆ ಮಾಡಿತು ಎಂಬುದರಲ್ಲಿ ಅತಿಶಯೋಕ್ತಿ ಇಲ್ಲ. ಬೌಲರ್​ಗಳನ್ನು ದಂಡಿಸುವುದಕ್ಕೆ ನಾನು ಕ್ರೀಸ್​ನಲ್ಲಿ ನಿಂತಿರುವುದು ಎಂಬುದನ್ನು ಪ್ರತಿ ಹೊಡೆತದಲ್ಲೂ ಸಾಭೀತು ಪಡಿಸಿದವರಂತೆ ಬ್ಯಾಟ್ ಬೀಸಿದ ವೈಭವ್ ಕೇವಲ 16 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

28 ಎಸೆತಗಳಲ್ಲಿ 97 ರನ್

ಈ ಅರ್ಧಶತಕದ ಇನ್ನಿಂಗ್ಸ್​ನಲ್ಲಿ ವೈಭವ್ ಬಾರಿಸಿದ ಸಿಕ್ಸರ್​ಗಳು ಬರೋಬ್ಬರಿ 8. ಇದರ ಜೊತೆಗೆ 1 ಬೌಂಡರಿಯೂ ಸೇರಿತ್ತು. ಅಂದರೆ ವೈಭವ್ ಬರಿ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ ತಮ್ಮ ಅರ್ಧಶತಕ ಪೂರೈಸಿದರು. ಈ ಮೂಲಕ ವೈಭವ್, ಪ್ಲೇಆಫ್‌ ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಆಟಗಾರನೆಂಬ ದಾಖಲೆಯನ್ನು ನಿರ್ಮಿಸಿದರು. ಅರ್ಧಶತಕದ ಬಳಿಕ ಮತ್ತಷ್ಟು ಉಗ್ರರೂಪ ತಾಳಿದ ವೈಭವ್ ಕೇವಲ 28 ಎಸೆತಗಳಲ್ಲಿ 97 ರನ್ ಕಲೆಹಾಕಿದರು. ಅಂದರೆ ವೈಭವ್ ತಮ್ಮ ಅರ್ಧಶತಕದಿಂದ 97 ರನ್ ಬಾರಿಸಲು ಕೇವಲ 12 ಎಸೆತಗಳನ್ನಷ್ಟೇ ತೆಗೆದುಕೊಂಡರು. ವೈಭವ್ ಅವರ ಈ ಅಬ್ಬರದಿಂದಾಗಿ ರಾಜಸ್ಥಾನ್ ಕೇವಲ 8 ಓವರ್​ಗಳಲ್ಲಿ 125 ರನ್​ಗಳ ಗಡಿ ದಾಟಿತು.

ಶತಕ ವಂಚಿತರಾದ ವೈಭವ್

ಅಂದರೆ ರಾಜಸ್ಥಾನ್ ದಾಖಲಿಸಿದ 125 ರನ್​ಗಳಲ್ಲಿ ವೈಭವ್ ಒಬ್ಬರೇ 97 ರನ್ ಕಲೆಹಾಕಿದರು. ವೈಭವ್ ಔಟಾದ 8ನೇ ಓವರ್​ನಲ್ಲಿ 3 ಸಿಕ್ಸರ್ ಹಾಗೂ 2 ಬೌಂಡರಿಗಳನ್ನು ಬಾರಿಸಿದರು. ಹೀಗಾಗಿ ವೈಭವ್ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಶತಕ ಬಾರಿಸುತ್ತಾರೆ ಎಂಬ ನಿರೀಕ್ಷೆಯೊಂದಿಗೆ ಎಲ್ಲರೂ ಕಾದು ಕುಳಿತಿದ್ದರು. ಆದರೆ ಓವರ್​ನ ಕೊನೆಯ ಎಸೆತದಲ್ಲಿ ವೈಭವ್ ಮಾಡಿದ ತಪ್ಪು ಅವರನ್ನು ಶತಕ ವಂಚಿತರನ್ನಾಗಿಸಿತು. ವೈಭವ್ ಶತಕವನ್ನು ಕಣ್ತುಂಬಿಕೊಳ್ಳಲು ಖುಷಿಯಿಂದ ಕಾಯುತ್ತಿದ್ದ ಅಭಿಮಾನಿಗಳು ಅವರು ಔಟಾಗುತ್ತಿದ್ದಂತೆ ಒಂದು ಕ್ಷಣ ಆಘಾತಕ್ಕೊಳಗಾದರು. ಎಲ್ಲೆಲ್ಲೂ ನೀರವ ಮೌನ ಆವರಿಸಿತು.

IPL 2026 Eliminator SRH vs RR Live: ರಾಜಸ್ಥಾನ್ 200 ರನ್ ಪೂರ್ಣ

ಸ್ವತಃ ವೈಭವ್ ಅವರೇ ಅಯ್ಯೋ ಎಂತಾ ಕೆಲಸ ಮಾಡಿದೆ ಎಂದು ತಲೆಯ ಮೇಲೆ ಕೈ ಇಟ್ಟುಕೊಂಡರು. ಇತ್ತ ಎದುರಾಳಿ ತಂಡದ ಆಟಗಾರರು ವೈಭವ್ ಅವರ ಆಟಕ್ಕೆ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ವೈಭವ್ ಬೇಸರದಿಂದ ಪೆವಿಲಿಯನ್​ತ್ತ ಹೆಜ್ಜೆ ಹಾಕುತ್ತಿದ್ದರೆ, ಕ್ರೀಡಾಂಗಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ 15 ವರ್ಷದ ಪೋರನ ಆಟಕ್ಕೆ ಶಹಬ್ಬಾಸ್​ ಗಿರಿ ಹೇಳುತ್ತಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:55 pm, Wed, 27 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ