AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಸೂರ್ಯವಂಶಿಗೆ 12 ಕೋಟಿ ರೂ. ಆಫರ್..!

Vaibhav Sooryavanshi: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಐದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿಗೆ ಕೋಟಿ ಮೊತ್ತದ ಆಫರ್​ ಬಂದಿದೆ. ಅದು ಸಹ ಬ್ಯಾಟ್​ ಮೇಲೆ ಜಾಹೀರಾತು ಪ್ರದರ್ಶಿಸಲು ಎಂಬುದು ವಿಶೇಷ.

ವೈಭವ್ ಸೂರ್ಯವಂಶಿಗೆ 12 ಕೋಟಿ ರೂ. ಆಫರ್..!
Vaibhav Sooryavanshi Image Credit source: IPL
ಝಾಹಿರ್ ಯೂಸುಫ್
|

Updated on: Jun 02, 2026 | 10:43 AM

Share

ಭಾರತೀಯ ಕ್ರಿಕೆಟ್​ನ ಮುಂದಿನ ಸೂಪರ್ ಸ್ಟಾರ್ ಎಂದೇ ಬಿಂಬಿತನಾಗಿರುವ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿಗೆ (Vaibhav Sooryavanshi) ಬಿಗ್ ಆಫರ್ ನೀಡಲಾಗಿದೆ. ಅದು ಕೂಡ ಬರೋಬ್ಬರಿ 12 ಕೋಟಿ ರೂ. ಭರ್ಜರಿ ಆಫರ್. ಪ್ರಮುಖ ಕಾರ್ಪೊರೇಟ್ ಟೈರ್​ ಕಂಪೆನಿಯೊಂದು ತಮ್ಮ ಬ್ರ್ಯಾಂಡ್ ಲೋಗೊವನ್ನು ಬ್ಯಾಟ್ ಮೇಲೆ ಪ್ರದರ್ಶಿಸಲು ವೈಭವ್​ಗೆ ಬರೋಬ್ಬರಿ 12 ಕೋಟಿ ರೂಪಾಯಿಗಳ ವಾರ್ಷಿಕ ಸ್ಪಾನ್ಸರ್​ಶಿಪ್ ಆಫರ್ ನೀಡಿದೆ ಎಂದು ವರದಿಯಾಗಿದೆ.

ಇದರ ಜೊತೆಗೆ ಮತ್ತೊಂದು ಟೈರ್ ಕಂಪೆನಿ ಕೂಡ ವೈಭವ್ ಸೂರ್ಯವಂಶಿಯ ಬ್ಯಾಟ್​ ಸ್ಪಾನ್ಸರ್​ಶಿಪ್​ಗಾಗಿ ತೆರೆಮರೆಯ ಪ್ರಯತ್ನ ನಡೆಸುತ್ತಿದ್ದಾರೆ. ಅಂದರೆ ಎರಡು ಪ್ರಮುಖ ಕಂಪೆನಿಗಳು ವೈಭವ್ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಬ್ಯಾಟ್ ಸ್ಪಾನ್ಸರ್​ಶಿಪ್​ನಿಂದಾಗಿ ಯುವ ದಾಂಡಿಗ ಕೋಟಿ ರೂ. ಎನಿಸುವುದು ಖಚಿತ ಎಂದೇ ಹೇಳಬಹುದು.

ಸದ್ಯ ವೈಭವ್ ಸೂರ್ಯವಂಶಿ ಸದ್ಯ ‘SS’ (ಸರೀನ್ ಸ್ಪೋರ್ಟ್ಸ್​) ಕಂಪನಿಯೊಂದಿಗೆ ವಾರ್ಷಿಕ 50 ಲಕ್ಷ ರೂಪಾಯಿಗಳ ಬ್ಯಾಟ್ ಒಪ್ಪಂದವನ್ನು ಹೊಂದಿದ್ದಾರೆ. 3 ವರ್ಷಗಳ ಹಳೆಯ ಈ ಒಪ್ಪಂದವು ಮುಕ್ತಾಯದ ಹಂತದಲ್ಲಿದೆ. ಈ ಒಪ್ಪಂದವು ಮುಗಿಯುತ್ತಿದ್ದಂತೆ ವೈಭವ್ ಸೂರ್ಯವಂಶಿಯ ಬ್ಯಾಟ್ ಮೇಲೆ ಹೊಸ ಕಂಪೆನಿಯ ಹೆಸರು ಕಾಣಿಸಿಕೊಳ್ಳಲಿದೆ.

ಆದರೆ ಆ ಕಂಪೆನಿ ಯಾವುದು ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ. ಇದಾಗ್ಯೂ ಭಾರತ ಸ್ಟಾರ್ ಆಟಗಾರರ ಬ್ಯಾಟ್ ಸ್ಪಾನ್ಸರ್​ ಮಾಡುತ್ತಿರುವ ಎರಡು ಕಂಪೆನಿಗಳೇ ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿದು ಬಂದಿದೆ.

ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಅವರ ಬ್ಯಾಟ್ ಸ್ಪಾನ್ಸರ್‌ಗಳು ಮತ್ತು ಅವರ ವಾರ್ಷಿಕ ಒಪ್ಪಂದದ ಮೊತ್ತದ ವಿವರಗಳು ಈ ಕೆಳಗಿನಂತಿವೆ…

  • ವಿರಾಟ್ ಕೊಹ್ಲಿ (MRF): ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಗರಿಷ್ಠ ಮೊತ್ತದ ಬ್ಯಾಟ್ ಸ್ಪಾನ್ಸರ್‌ಶಿಪ್ ಹೊಂದಿರುವುದು ವಿರಾಟ್ ಕೊಹ್ಲಿ. 2017ರಲ್ಲಿ ಎಂಆರ್​ಎಫ್ ಕಂಪೆನಿ ಜೊತೆ ಈ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕಿದ್ದ ಕೊಹ್ಲಿ  ವಾರ್ಷಿಕವಾಗಿ 12.5 ಕೋಟಿ ರೂ. ಪಡೆಯುತ್ತಿದ್ದಾರೆ.
  • ಶುಭ್​ಮನ್ ಗಿಲ್ (MRF): ಭಾರತ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ಶುಭ್​ಮನ್​ ಗಿಲ್ ಅವರು ಈ ಹಿಂದೆ ‘CEAT’ ಕಂಪನಿಯ ಒಪ್ಪಂದದಲ್ಲಿದ್ದರು. ಆದರೆ ಅವರ ಅದ್ಭುತ ಫಾರ್ಮ್ ಹಾಗೂ ಮಾರುಕಟ್ಟೆ ಮೌಲ್ಯವನ್ನು ನೋಡಿ MRF ಸಂಸ್ಥೆಯು ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿತು. ಅದರಂತೆ ಗಿಲ್ ಈಗ ಎಂಆರ್​ಎಫ್ ಸ್ಪಾನ್ಸರ್​ಶಿಪ್​ನೊಂದಿಗೆ ವಾರ್ಷಿಕ 10 ಕೋಟಿ ರೂ. ಪಡೆಯುತ್ತಿದ್ದಾರೆ.
  • ರೋಹಿತ್ ಶರ್ಮಾ (CEAT): ಟೀಮ್ ಇಂಡಿಯಾದ ಹಿರಿಯ ಆಟಗಾರ ರೋಹಿತ್ ಶರ್ಮಾ ಅವರು ದೀರ್ಘಕಾಲದಿಂದ ಸಿಯೆಟ್ ಟೈರ್ಸ್​ ಬ್ರ್ಯಾಂಡ್‌ನ ಲೋಗೋವನ್ನು ತಮ್ಮ ಬ್ಯಾಟ್ ಮೇಲೆ ಬಳಸುತ್ತಿದ್ದು, ಇದಕ್ಕಾಗಿ ಹಿಟ್​ಮ್ಯಾನ್ ಪಡೆಯುತ್ತಿರುವ ವಾರ್ಷಿಕ ಮೊತ್ತ 4 ಕೋಟಿ ರೂ.

ಅಂದರೆ ಇಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರ ಬ್ಯಾಟ್​ಗಳ ಮೇಲೆ ಜಾಹೀರಾತು ನೀಡಿರುವುದು MRF ಮತ್ತು CEAT ಕಂಪೆನಿಗಳು. ಈ ದೈತ್ಯ ಟೈರ್ ಕಂಪೆನಿಗಳೇ ಈಗ ವೈಭವ್ ಸೂರ್ಯವಂಶಿಯ ಬ್ಯಾಟ್ ಮೇಲೂ ಕಣ್ಣಿಟ್ಟಿರುವ ಸಾಧ್ಯತೆಯಿದೆ.

ಸದ್ಯ ಮಾಹಿತಿ ಪ್ರಕಾರ ವೈಭವ್ ಸೂರ್ಯವಂಶಿ ಹಾಗೂ SS ಕಂಪೆನಿ ನಡುವಣ ಒಪ್ಪಂದ ಇನ್ನು ಕೆಲವೇ ತಿಂಗಳಲ್ಲಿ ಮುಗಿಯಲಿದೆ. ಅದಕ್ಕೂ ಮುನ್ನ ಎರಡು ಕಂಪೆನಿಗಳು ವೈಭವ್ ಸ್ಪಾನ್ಸರ್​ಶಿಪ್​ಗಾಗಿ ಕೋಟಿ ಸುರಿಯಲು ಮುಂದಾಗಿದ್ದಾರೆ.

ಇದನ್ನೂ ಓದಿ: RCB ಪರ ಈ ಬಾರಿ ಒಂದೇ ಒಂದು ಪಂದ್ಯವಾಡದ 9 ಆಟಗಾರರು ಇವರೇ!

ಹೀಗೆ ಕೋಟಿ ಪೈಪೋಟಿಯೊಂದಿಗೆ ವೈಭವ್ ಸೂರ್ಯವಂಶಿ 12 ಕೋಟಿ ರೂ.ಗೆ ಡೀಲ್ ಕುದುರಿಸಿಕೊಳ್ಳಲಿದ್ದಾರಾ ಅಥವಾ 12 ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಆಫರ್​ ಪಡೆದು ವಿರಾಟ್ ಕೊಹ್ಲಿಯ (12.5 ಕೋಟಿ ರೂ.) ಬ್ಯಾಟ್ ಸ್ಪಾನ್ಸರ್​ಶಿಪ್​ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ