AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗನೆ ಔಟಾದರೂ, 117 ರನ್​ ಪೂರೈಸಿದ ವೈಭವ್ ಸೂರ್ಯವಂಶಿ..!

India A vs Afghanistan A: ಭಾರತ ಎ ಮತ್ತು ಅಫ್ಘಾನಿಸ್ತಾನ್ ಎ ನಡುವಣ ಏಕದಿನ ಪಂದ್ಯವು ಶ್ರೀಲಂಕಾದಲ್ಲಿ ನಡೆಯುತ್ತಿದೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ದಾಂಡಿಗರು ಅತ್ಯುತ್ತಮ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಬೇಗನೆ ಔಟಾದರೂ, 117 ರನ್​ ಪೂರೈಸಿದ ವೈಭವ್ ಸೂರ್ಯವಂಶಿ..!
Vaibhav Sooryavanshi Image Credit source: Espn
ಝಾಹಿರ್ ಯೂಸುಫ್
|

Updated on: Jun 17, 2026 | 11:13 AM

Share

ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲೂ ಭಾರತ ‘ಎ’ ತಂಡದ ಯುವ ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲೂ ಓಪನರ್ ಆಗಿ ಕಣಕ್ಕಿಳಿದ ವೈಭವ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನಿಡಿದ್ದರು. ಅದರಂತೆ ಕೇವಲ 27 ಎಸೆತಗಳಲ್ಲಿ 38 ರನ್ ಬಾರಿಸಿದ್ದರು. ಆದರೆ 28ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಔಟಾಗಿದ್ದಾರೆ.

ಔಟ್ ಆಗಿದ್ದು ಹೇಗೆ?

ಇನ್ನಿಂಗ್ಸ್‌ನ 8ನೇ ಓವರ್‌ನಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸುತ್ತಿದ್ದ ವೈಭವ್ ಸೂರ್ಯವಂಶಿ, ಬೌಲರ್ ಫರಿದೂನ್ ಎಸೆದ ಶಾರ್ಟ್ ಪಿಚ್ ಚೆಂಡನ್ನು ಪುಲ್ ಶಾಟ್ ಆಡಲು ಪ್ರಯತ್ನಿಸಿದರು. ಆದರೆ, ಚೆಂಡು ಬ್ಯಾಟ್‌ನ ಮೇಲ್ಭಾಗದ ತುದಿಗೆ ತಗುಲಿ ಗಾಳಿಯಲ್ಲಿ ಚಿಮ್ಮಿತು. ಪಾಯಿಂಟ್ ಭಾಗದಲ್ಲಿ ನಿಂತಿದ್ದ ಅಫ್ಘಾನಿಸ್ತಾನ್ ಫೀಲ್ಡರ್ ಖಾಲಿದ್ ತನಿವಾಲ್ ಸುಲಭವಾಗಿ ಕ್ಯಾಚ್ ಹಿಡಿದರು. ಇದರೊಂದಿಗೆ ವೈಭವ್ ಸೂರ್ಯವಂಶಿ ಇನಿಂಗ್ಸ್ ಅಂತ್ಯಗೊಂಡಿತು.

ಆರಂಭದಲ್ಲೇ ಜೀವದಾನ:

ಟೀಮ್ ಇಂಡಿಯಾ ಇನ್ನಿಂಗ್ಸ್‌ನ ಆರಂಭದಲ್ಲೇ ಕಟ್ ಶಾಟ್ ಹೊಡೆಯಲು ಹೋಗಿ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ವೈಭವ್ ಸೂರ್ಯವಂಶಿ ಕ್ಯಾಚ್ ನೀಡಿದ್ದರು. ಆನ್-ಫೀಲ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರೂ, ಥರ್ಡ್ ಅಂಪೈರ್ ಮರುಪರಿಶೀಲಿಸಿದಾಗ ಫೀಲ್ಡರ್ ಚೆಂಡನ್ನು ನೆಲಕ್ಕೆ ಮುಟ್ಟಿಸಿರುವುದು ಕಂಡು ಬಂತು. ಇದರಿಂದಾಗಿ ವೈಭವ್​ಗೆ ಆರಂಭದಲ್ಲೇ  ಜೀವದಾನ ಸಿಕ್ಕಿತ್ತು. ಝೀರೋ ರನ್​ಗೆ ಸಿಕ್ಕ ಈ ಜೀವದಾನದ ಸದುಪಯೋಗ ಪಡೆದು 38 ರನ್ ಬಾರಿಸಿದರೂ, ಚೊಚ್ಚಲ ಅರ್ಧಶತಕ ಬಾರಿಸುವಲ್ಲಿ ವೈಭವ್ ವಿಫಲರಾಗಿದ್ದಾರೆ.

117 ರನ್ ಪೂರೈಸಿದ ವೈಭವ್:

ವೈಭವ್ ಸೂರ್ಯವಂಶಿ ಅವರು ಸರಣಿಯ ನಾಲ್ಕು ಪಂದ್ಯಗಳ ಮೂಲಕ ಒಟ್ಟು 117 ರನ್ ಕಲೆಹಾಕಿದ್ದಾರೆ.

  • ಮೊದಲ ಪಂದ್ಯ (vs ಶ್ರೀಲಂಕಾ ‘ಎ’ ): 14 ರನ್ (12 ಎಸೆತಗಳು, 3 ಫೋರ್)
  • ಎರಡನೇ ಪಂದ್ಯ (vs ಅಫ್ಘಾನಿಸ್ತಾನ್ ‘ಎ’): 44 ರನ್ (22 ಎಸೆತಗಳು, 9 ಫೋರ್)
  • ಮೂರನೇ ಪಂದ್ಯ (vs ಶ್ರೀಲಂಕಾ ‘ಎ’): 21 ರನ್ (14 ಎಸೆತಗಳು, 1 ಸಿಕ್ಸ್, 3 ಫೋರ್)
  • ನಾಲ್ಕನೇ ಪಂದ್ಯ (vs ಅಫ್ಘಾನಿಸ್ತಾನ್ ‘ಎ’): 38 ರನ್​ (27 ಎಸೆತಗಳು, 2 ಸಿಕ್ಸ್, 4 ಫೋರ್)

ಈ ನಾಲ್ಕು ಇನಿಂಗ್ಸ್​ಗಳ ಮೂಲಕ ವೈಭವ್ ಸೂರ್ಯವಂಶಿ ತಮ್ಮ ಕೆರಿಯರ್​ನ ಮೊದಲ ತಿಕ್ರೋನ ಸರಣಿಯಲ್ಲಿ ನೂರು ರನ್​ಗಳ ಗಡಿದಾಟಿದ್ದಾರೆ.

ಟೀಮ್ ಇಂಡಿಯಾ ಸ್ಕೋರ್:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ 15 ಓವರ್​ಗಳ ಮುಕ್ತಾಯದ ವೇಳೆಗೆ ವೈಭವ್ ಸೂರ್ಯವಂಶಿ (38) ಹಾಗೂ ಪ್ರಿಯಾಂಶ್ ಆರ್ಯಾ (58) ವಿಕೆಟ್ ಕಳೆದುಕೊಂಡು 115 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ತಿಲಕ್ ವರ್ಮಾ ಹಾಗೂ ರುತುರಾಜ್ ಗಾಯಕ್ವಾಡ್ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಭಾರತ ಎ ಪ್ಲೇಯಿಂಗ್ 11: ಪ್ರಿಯಾಂಶ್ ಆರ್ಯ , ವೈಭವ್ ಸೂರ್ಯವಂಶಿ , ರುತುರಾಜ್ ಗಾಯಕ್ವಾಡ್ , ತಿಲಕ್ ವರ್ಮಾ (ನಾಯಕ) , ಕುಮಾರ್ ಕುಶಾಗ್ರ (ವಿಕೆಟ್ ಕೀಪರ್) , ನಿಶಾಂತ್ ಸಿಂಧು , ಸೂರ್ಯಾಂಶ್ ಶೆಡ್ಗೆ , ವಿಪ್ರಾಜ್ ನಿಗಮ್ , ಅನ್ಕೂಲ್ ರಾಯ್ , ಅನ್ಶುಲ್ ಕಂಬೋಜ್ , ಯಶ್ ಠಾಕೂರ್.

ಇದನ್ನೂ ಓದಿ: ಗೋಲು ಬಾರಿಸಿ ಕ್ಷಮೆಯಾಚಿಸಿದ ಯಾಸಿನ್ ಅಯಾರಿ..!

ಅಫ್ಘಾನಿಸ್ತಾನ್ ಎ ಪ್ಲೇಯಿಂಗ್ 11: ಇಮ್ರಾನ್ ಮೀರ್ (ನಾಯಕ) , ಹಸನ್ ಐಸಾಖಿಲ್ , ಖಾಲಿದ್ ತನಿವಾಲ್ , ಫೈಸಲ್ ಶಿನೋಜಾಡಾ , ಬಹೀರ್ ಶಾ , ಫರ್ಮಾನುಲ್ಲಾ ಸಫಿ , ಶಮ್ಸ್ ಉರ್ ರೆಹಮಾನ್ , ಮೊಹಮ್ಮದ್ ಇಶಾಕ್ (ವಿಕೆಟ್ ಕೀಪರ್) , ಝಹೀರ್ ಖಾನ್ , ಅಬ್ದುಲ್ಲಾ ಅಹ್ಮದ್‌ಝಾಹಿ , ಫರಿದೂನ್ ದಾವೂದ್‌.

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ